ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೆರೆ ಪರಿಹಾರ ನಿಧಿಗೆ ಧರ್ಮಸ್ಥಳದಿಂದ 25 ಕೋಟಿ ರೂಪಾಯಿ

|
Google Oneindia Kannada News

ಮಂಗಳೂರು ಆಗಸ್ಟ್ 17: ಭಾರೀ ಮಳೆಯಿಂದ ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಉಂಟಾಗಿ ಜನ ಜೀವನ ತತ್ತರಿಸಿ ಹೋಗಿದೆ. ಎಲ್ಲವನ್ನೂ ಕಳೆದುಕೊಂಡಿರುವ ಸಂತ್ರಸ್ತರಿಗೆ ರಾಜ್ಯದೆಲ್ಲೆಡೆಯಿಂದ ನೆರವಿನ ಮಹಾಪೂರವೇ ಹರಿದುಬರುತ್ತಿದೆ. ಮಠ ಮಂದಿರಗಳೂ ಲಕ್ಷಾತರ ರೂಪಾಯಿ ದೇಣಿಗೆ ನೀಡಿವೆ.

ನೆರೆ ಸಂತ್ರಸ್ತರಿಗೆ 1 ಲಕ್ಷ ರುಪಾಯಿ ದೇಣಿಗೆ ನೀಡಿದ ಬೆಳ್ತಂಗಡಿ ಆಟೋ ಚಾಲಕನೆರೆ ಸಂತ್ರಸ್ತರಿಗೆ 1 ಲಕ್ಷ ರುಪಾಯಿ ದೇಣಿಗೆ ನೀಡಿದ ಬೆಳ್ತಂಗಡಿ ಆಟೋ ಚಾಲಕ

ಈ ನಡುವೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ನೆರೆ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ್ದಾರೆ. ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ರಾಜ್ಯದ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಕೋಟಿ ರೂಪಾಯಿ ನೆರವನ್ನು ಡಾ.ವಿರೇಂದ್ರ ಹೆಗ್ಗಡೆ ಘೋಷಣೆ ಮಾಡಿದ್ದಾರೆ.

Dr D Veerendra Heggade Announced 25 Crore For Flood Relief

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಶ್ರಮಿಕ ಕಾಳಜಿಯ ರಿಲೀಫ್ ಫಂಡ್ ಗೆ 50 ಲಕ್ಷ ರೂಪಾಯಿಯನ್ನು ಶಾಸಕರ ಮೂಲಕ ಹಸ್ತಾಂತರ ಮಾಡಿದ್ದಾರೆ.

ಈ ಕುರಿತು ಧರ್ಮಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಾ. ವೀರೇಂದ್ರ ಹೆಗ್ಗಡೆ, "ಪಶ್ಚಿಮಘಟ್ಟ ಅಧ್ಯಯನ ಪೀಠ ಸ್ಥಾಪನೆಗೆ 2 ಕೋಟಿ ರೂಪಾಯಿ ಮೀಸಲಾಗಿರಿಸಿದ್ದು, ವಿಪತ್ತು ನಿರ್ವಹಣಾ ವೇದಿಕೆ ಸ್ಥಾಪನೆ ಮಾಡಿ 2 ಲಕ್ಷ ಸದಸ್ಯರಿಗೆ ತರಬೇತಿ ನೀಡಲಾಗುವುದು" ಎಂದು ಹೇಳಿದರು. ಈ ಸಂದರ್ಭದಲ್ಲಿ ಹೇಮಾವತಿ ವಿ.ಹೆಗ್ಗಡೆ, ಶಾಸಕ ಹರೀಶ್ ಪೂಂಜ, ಡಾ.ಎಲ್.ಎಚ್. ಮಂಜುನಾಥ್ ಉಪಸ್ಥಿತರಿದರು.

English summary
Dharmasthala Dharmadhikari Dr D Veerendra Heggade announced 1 crore for state flood relief found
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X