ರಾಷ್ಟ್ರಪತಿ ಹುದ್ದೆಯ ಬಗ್ಗೆ ನಮ್ಮನ್ನು ಸಂಪರ್ಕಿಸಿಲ್ಲ – ಧರ್ಮಸ್ಥಳದಿಂದ ಸ್ಪಷ್ಟನೆ
ಮಂಗಳೂರು, ಜೂನ್ 13: ರಾಷ್ಟ್ರಪತಿ ಚುನಾವಣೆಯಲ್ಲಿ ಅಭ್ಯರ್ಥಿಯಾಗಲು ತಮ್ಮನ್ನು ಯಾರೂ ಸಂಪರ್ಕಿಸಿಲ್ಲ ಎಂದು ಧರ್ಮಸ್ಥಳದ ಆಡಳಿತ ಮಂಡಳಿ ಒನ್ ಇಂಡಿಯಾ ಕನ್ನಡಕ್ಕೆ ಸ್ಪಷ್ಟನೆ ನೀಡಿದೆ.
ಜುಲೈ 17ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು ಇದರಲ್ಲಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಹೆಸರು ಮಾಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಸರ್ವಸಮ್ಮತ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ವಿಜಯವಾಣಿ ಪತ್ರಿಕೆ ವರದಿ ಮಾಡಿತ್ತು. ಸಾಮಾಜಿಕ ಜಾಲತಾಣಗಳಲ್ಲಿಯೂ ಇದು ಭಾರಿ ಚರ್ಚೆ ಹುಟ್ಟು ಹಾಕಿದೆ.

ಆದರೆ ಇದನ್ನು ತಳ್ಳಿ ಹಾಕಿರುವ ಧರ್ಮಸ್ಥಳದ ಆಡಳಿತ ಮಂಡಳಿ, "ಇಂಥಹ ಯಾವುದೇ ಮಾಹಿತಿ ನಮಗೆ ಬಂದಿಲ್ಲ. ಈ ಕುರಿತು ಯಾರೂ ನಮನ್ನು ಸಂಪರ್ಕಿಸಿಲ್ಲ. ಅಂತಹ ಪ್ರಸ್ತಾಪ ಬಂದರೂ ಅದನ್ನು ಧರ್ಮಾಧಿಕಾರಿ ಸ್ವೀಕರಿಸುವುದಿಲ್ಲ. ಮಂಜುನಾಥನ ಸೇವೆಗಿಂತ ಅವರಿಗೆ ಯಾವುದೇ ಹುದ್ದೆಯೂ ದೊಡ್ಡದಲ್ಲ," ಎಂದು ಒನ್ ಇಂಡಿಯಾ ಕನ್ನಡಕ್ಕೆ ಮಾಹಿತಿ ನೀಡಿದ್ದಾರೆ.
ಮುಂದಿನ ರಾಷ್ಟ್ರಪತಿ ಯಾರಾಗುತ್ತಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಬಿರುಸಿನಿಂದ ನಡೆಯುತ್ತಿದೆ. ಪ್ರತಿ ಬಾರಿಯೂ ರಾಜಕೀಯ ಕ್ಷೇತ್ರದಲ್ಲಿ ಮಿಂಚಿದವರೇ ಈ ಪರಮೋಚ್ಛ ಪದವಿಯನ್ನು ಸ್ವೀಕರಿಸಬೇಕೆಂದೇನಿಲ್ಲ. ಈ ಹಿಂದೆ ವಿಜ್ಞಾನಿ ದಿವಂಗತ ಡಾ. ಎ. ಪಿ.ಜೆ. ಅಬ್ದುಲ್ ಕಲಾಂ ಈ ಹುದ್ದೆ ನಿಭಾಯಿಸಿದ್ದರು.
ರಾಜಕೀಯ ರಹಿತ, ಇಡೀ ದೇಶ ಒಪ್ಪುವ ಅಪಾರ ಜ್ಞಾನವುಳ್ಳ ಅಬ್ದುಲ್ ಕಲಾಂರನ್ನು ರಾಷ್ಟ್ರಪತಿ ಅಭ್ಯರ್ಥಿಯೆಂದು ಘೋಷಿಸಿದಾಗ ಜಾತಿ, ಧರ್ಮ, ಪಕ್ಷ ಮರೆತು ಬೆಂಬಲ ವ್ಯಕ್ತವಾಗಿತ್ತು. ಇದೀಗ ಅಂಥಹದ್ದೇ ವ್ಯಕ್ತಿಯ ಹುಡುಕಾಟದಲ್ಲಿ ಕೇಂದ್ರ ಸರ್ಕಾರವಿದೆ. ಆಗ ಕೇಳಿಬಂದ ಹೆಸರೇ ಡಾ. ವೀರೇಂದ್ರ ಹೆಗ್ಗಡೆ.
ಆದರೆ 'ಅಂತಹ (ರಾಷ್ಟ್ರಪತಿ ಅಭ್ಯರ್ಥಿ) ಪ್ರಸ್ತಾಪ ಬಂದರೂ ಅದನ್ನು ಧರ್ಮಾಧಿಕಾರಿ ಸ್ವೀಕರಿಸುವುದಿಲ್ಲ' ಎಂದಿರುವುದರಿಂದ ಮುಂದೆ ಇದು ಯಾವ ತಿರುವುಗಳನ್ನು ಪಡೆದುಕೊಳ್ಳಲಿದೆ ನೋಡಬೇಕಷ್ಟೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications