'ಸರ್ಕಾರ ಜೀವಂತ ಇದೆ ಎಂಬುದನ್ನು ತೋರಿಸಿ ಕೊಡಿ'
ಮಂಗಳೂರು, ಏಪ್ರಿಲ್ 13 : 'ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡಲು ಸರ್ಕಾರ ಪ್ರಯತ್ನ ನಡೆಸುತ್ತಿಲ್ಲ, ಸರ್ಕಾರ ಜೀವಂತ ಇದೆ ಎಂಬುದನ್ನು ತೋರಿಸಿ ಕೊಡಿ' ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದ್ದಾರೆ.
ಮಂಗಳವಾರ ದಕ್ಷಿಣ ಕನ್ನಡ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೆ.ಎಸ್.ಈಶ್ವರಪ್ಪ ಅವರು,'ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಇದ್ದರೂ ರಾಜ್ಯ ಸರ್ಕಾರ ಬೇಜವಾಬ್ದಾರಿ ವರ್ತನೆ ತೋರುತ್ತಿದೆ. ಉಸ್ತುವಾರಿ ಸಚಿವರುಗಳು ಕೆಡಿಪಿ. ಸಭೆ ನಡೆಸುತ್ತಿಲ್ಲ' ಎಂದು ಆರೋಪಿಸಿದರು. [ಬರಪೀಡಿತ ಜಿಲ್ಲೆಗಳ ಪ್ರವಾಸಕ್ಕೆ ಹೊರಟ ಸಿದ್ದರಾಮಯ್ಯ]

'ಸರ್ಕಾರ ಗುತ್ತಿಗೆದಾರರಿಗೆ ಮೊದಲೇ ಅನುದಾನ ನೀಡಿ, ಕುಡಿಯುವ ನೀರಿನ ಕೊರತೆ ನೀಗಿಸಲು ಸೂಚನೆ ನೀಡಬೇಕಿತ್ತು. ಆದರೆ, ಸರ್ಕಾರ ಇದರಲ್ಲಿ ವಿಫಲವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೆಡಿಪಿ ಸಭೆ ನಡೆಸಿ ಕುಡಿಯುವ ನೀರಿನ ಸಮಸ್ಯೆಯನ್ನು ಈಗಲಾದರೂ ಅರಿತು ಪರಿಹಾರದ ಕ್ರಮ ಕೈಗೊಳ್ಳುವ ಮೂಲಕ ರಾಜ್ಯದಲ್ಲಿ ಸರ್ಕಾರ ಜೀವಂತವಿದೆ ಎಂಬುದನ್ನು ತೋರಿಸಿಕೊಡಬೇಕು' ಎಂದು ಅವರು ಒತ್ತಾಯಿಸಿದರು. [ಉರಿ ಸೆಕೆಯ ಹಳೆ ದಾಖಲೆ ಸುಟ್ಟುಹಾಕಿದ ಬೆಂಗಳೂರು]
'ಕುಡಿಯುವ ನೀರಿಗೂ ಹಣ ನೀಡಲಾಗದಷ್ಟು ರಾಜ್ಯ ಸರ್ಕಾರ ದಿವಾಳಿಯಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ದಿಟ್ಟ ಹೆಜ್ಜೆ ಇಡುವುದಾಗಿ ಘೋಷಿಸಿತ್ತು. ಮೂರು ವರ್ಷದಲ್ಲಿ 7 ಸಾವಿರ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸುವ ಭರವಸೆ ನೀಡಿತ್ತು. ಆದರೆ ಮೂರು ವರ್ಷ ಕಳೆದರೂ ಒಂದೇ ಒಂದು ನೀರಿನ ಘಟಕವನ್ನು ಪೂರ್ಣಗೊಳಿಸಲಾಗಿಲ್ಲ' ಎಂದು ಈಶ್ವರಪ್ಪ ದೂರಿದರು. [ಸುಡುತ್ತಿದೆ ಕರ್ನಾಟಕ, ಬಾ ಮಳೆಯೇ ಬೇಗ ಬಾ..]
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಕೆ. ಪ್ರತಾಪಸಿಂಹ ನಾಯಕ್, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸುನೀಲ್ ಕುಮಾರ್, ಮಾಜಿ ಶಾಸಕರಾದ ಯೋಗೀಶ್ ಭಟ್, ಕೆ. ಮೋನಪ್ಪ ಭಂಡಾರಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications