ಮಂಗಳೂರಿನಲ್ಲಿ ನಾಲ್ಕು ದಿನಗಳಿಂದ ನೀರಿಲ್ಲ, ಜನಪ್ರತಿನಿಧಿಗಳೂ ಪತ್ತೆ ಇಲ್ಲ

ಮಂಗಳೂರು ಜುಲೈ 12: ಮಂಗಳೂರಿನಲ್ಲಿ ಈಚೆಗೆ ಮಳೆ ಸುರಿಯಲು ಶುರುವಾಗಿದೆ. ಅಲ್ಲಲ್ಲಿ ಕೆರೆಕಟ್ಟೆಗಳೂ ಸ್ವಲ್ಪ ಪ್ರಮಾಣದಲ್ಲಿ ತುಂಬಿಕೊಂಡಿವೆ. ಆದರೂ ಕಳೆದ 4 ದಿನಗಳಿಂದ ಕುಡಿಯುವ ನೀರಿಗೆ ಭಾರೀ ಸಮಸ್ಯೆ ಎದುರಾಗಿದೆ. ಸಮಸ್ಯೆ ಪರಿಹರಿಸಬೇಕಾದ ಜನಪ್ರತಿನಿಧಿಗಳೂ ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜಕೀಯ ನಾಟಕದಲ್ಲಿ ಬಿಝಿಯಾಗಿದ್ದಾರೆ.

ಈಚೆಗೆ ಮಳೆ ಆರಂಭವಾಗಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ತುಂಬೆ ಅಣೆಕಟ್ಟಿನಲ್ಲಿ ನೀರಿನ ಸಂಗ್ರಹ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿಗರೂ ನಿಟ್ಟುಸಿರು ಬಿಟ್ಟಿದ್ದರು. ಆದರೆ ಕಳೆದ ನಾಲ್ಕು ದಿನಗಳಿಂದ ಮಂಗಳೂರು ನಗರಕ್ಕೆ ಕುಡಿಯುವ ನೀರಿನ ಸರಬರಾಜು ಸ್ಥಗಿತಗೊಂಡಿದೆ.

ಮಂಗಳೂರಿಗೆ ನೀರು ಸರಬರಾಜಾಗುವ ಪೈಪ್ ದುರಸ್ತಿಗೆ ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಕುಡಿಯುವ ನೀರನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಮಂಗಳೂರು ನಗರಕ್ಕೆ ನೀರು ಪೂರೈಸುವ ಪ್ರಮುಖ ಪೈಪ್ ಲೈನ್ ನಲ್ಲಿ ಕಣ್ಣೂರು ಸಮೀಪ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ಭಾನುವಾರದಿಂದ ನೀರು ಸರಬರಾಜನ್ನು ನಿಲ್ಲಿಸಲಾಗಿದೆ. ಪೈಪ್ ಲೈನ್ ದುರಸ್ತಿ ಕಾರ್ಯ ಪ್ರಾರಂಭ ಮಾಡಿ ನಾಲ್ಕು ದಿನ ಕಳೆದರೂ ಇನ್ನೂ ಮುಗಿದಿಲ್ಲ.

 drinking water problem in mangaluru city

ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪೈಪ್ ಲೈನ್ ದುರಸ್ತಿ ಕಾರ್ಯಕ್ಕೆ ಅಡ್ಡಿಯಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ನೀರಿನ ಅಭಾವ ಹಿಂದೆಂದಿಗಿಂತಲೂ ಹೆಚ್ಚಾಗಿ ಈ ಬಾರಿ ಮಂಗಳೂರಿಗರನ್ನು ಕಾಡಿತ್ತು. ಮಂಗಳೂರು ಮಹಾನಗರಕ್ಕೆ ನೀರುಣಿಸುವ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ಬೇಸಿಗೆಯಲ್ಲಿ ನೀರಿನ ಸಂಗ್ರಹ ಕುಸಿದಿದ್ದ ಪರಿಣಾಮ ನೀರಿನ ರೇಷನಿಂಗ್ ವ್ಯವಸ್ಥೆಯನ್ನೂ ಪಾಲಿಕೆ ಜಾರಿಗೆ ತಂದಿತ್ತು. ಕುಡಿಯುವ ನೀರಿಗಂತೂ ಪಟ್ಟ ಪಾಡು ಹೇಳತೀರದ್ದು. ಇದೀಗ ಮಳೆ ಸುರಿಯುತ್ತಿದ್ದು, ಎಲ್ಲಾ ಸರಿಹೋಗಿದೆ ಎಂದು ನಿಟ್ಟುಸಿರುಬಿಡುವಷ್ಟರಲ್ಲಿ ಪೈಪ್ ಲೈನ್ ಸಮಸ್ಯೆಯಿಂದ ಮತ್ತೆ ತೊಂದರೆ ಅನುಭವಿಸುವಂತಾಗಿದೆ.

ನಗರದಲ್ಲಿ ನಾಲ್ಕು ದಿನಗಳಿಂದ ಕುಡಿಯುವ ನೀರು ಸರಬರಾಜು ಬಂದ್ ಆಗಿದ್ದರೂ ತಲೆ ಕೆಡಿಸಿಕೊಳ್ಳಲು ಇಲ್ಲಿ ಸ್ಥಳೀಯರು ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಯಾರೂ ಇಲ್ಲ. ಎಲ್ಲರೂ ಬೆಂಗಳೂರಿನಲ್ಲಿ ಮೊಕ್ಕಾಂ ಹೂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+