ಪುತ್ತೂರು: ಸೆಲ್ಫಿ ನೆಪದಲ್ಲಿ ಸಾನಿಯಾ ಅಯ್ಯರ್ ಕೈ ಹಿಡಿದು ಎಳೆದ ಅಭಿಮಾನಿ: ಧರ್ಮದೇಟು
ಪುತ್ತೂರಿನಲ್ಲಿ ಸೆಲ್ಫಿ ನೆಪದಲ್ಲಿ ಅಭಿಮಾನಿಯೋರ್ವ ಸಾನಿಯಾ ಅಯ್ಯರ್ ಅವರ ಕೈ ಹಿಡಿದು ಎಳೆದಿದ್ದು, ಸಾನಿಯಾ ಕೈ ಹಿಡಿದು ಎಳೆದ ಅಭಿಮಾನಿಗೆ ಯುವಕರು ಥಳಿಸಿದ್ದಾರೆ.
ಮಂಗಳೂರು, ಜನವರಿ, 29: ಸೆಲ್ಫಿ ನೆಪದಲ್ಲಿ ಅಭಿಮಾನಿಯೋರ್ವ ಸಾನಿಯಾ ಅಯ್ಯರ್ ಅವರ ಕೈ ಹಿಡಿದು ಎಳೆದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ಮೂವತ್ತನೇ ವರ್ಷದ ಕೋಟಿಚೆನ್ನಯ್ಯ ಜೋಡುಕರೆ ಕಂಬಳ ಕೂಟ ನಡೆಯುತ್ತಿದ್ದು, ಶನಿವಾರ ರಾತ್ರಿ ವಿಶೇಷ ಅಹ್ವಾನಿತರಾಗಿ ಬಿಗ್ ಬಾಸ್ ಖ್ಯಾತಿಯ ಸಾನಿಯಾ ಅಯ್ಯರ್ ಭಾಗವಹಿಸಿದ್ದರು. ವೇದಿಕೆಯಲ್ಲಿ ಸಾನಿಯಾ ಐ ಲವ್ ಯೂ ಪುತ್ತೂರು ಎಂಬ ವಾಕ್ಯದೊಂದಿಗೆನೇ ಭಾಷಣ ಆರಂಭಿಸಿದ್ದರು.
ಸಾನಿಯಾ ಕೈ ಹಿಡಿದು ಎಳೆದ ಅಭಿಮಾನಿ
ಈ ವೇಳೆ ಅಭಿಮಾನಿಯೋರ್ವ ಭಾಷಣದುದಕ್ಕೂ ಸಾನಿಯಾ ಐ ಲವ್ ಯೂ ಎಂದು ಕೂಗುತ್ತಿದ್ದ. ಭಾಷಣ ಮುಗಿಸಿ ಕಾರ್ಯಕ್ರಮದಿಂದ ನಿರ್ಗಮಿಸಲು ವೇದಿಕೆಯಿಂದ ಕೆಳಗಿಳಿಯುತ್ತಿದ್ದ ವೇಳೆ ಅಭಿಮಾನಿ ಸೆಲ್ಫಿಗಾಗಿ ಸಾನಿಯಾ ಕೈ ಹಿಡಿದಿದ್ದಾನೆ. ಇದರಿಂದ ಮುಜುಗರಕೊಳ್ಳಗಾದ ಸಾನಿಯಾ ಸೆಲ್ಫಿಯನ್ನು ತಿರಸ್ಕರಿಸಿ ತೆರಳಿದ್ದಾರೆ.

ಮದ್ಯದ ನಶೆಯಲ್ಲಿ ಅಭಿಮಾನಿ ಕೃತ್ಯ
ಅಭಿಮಾನಿ ಮದ್ಯದ ನಶೆಯಲ್ಲಿ ಕೃತ್ಯ ಎಸಗಿದ್ದು, ಸಾನಿಯಾ ಭಾಷಣದುದ್ದಕ್ಕೂ ಆಭಾಸಗೊಳ್ಳುವಂತೆ ವರ್ತಿಸಿದ್ದ ಎಂದು ತಿಳಿದುಬಂದಿದೆ. ಅಲ್ಲದೇ ಈ ವ್ಯಕ್ತಿ ಜನರಿಗೆ ಕಿರಿಕಿರಿಯಾಗುವಷ್ಟು ತೊಂದರೆ ಮಾಡಿದ್ದಾನೆ. ನಂತರ ಸಾನಿಯಾ ತೆರಳುತ್ತಿದ್ದಂತೆಯೇ ಸ್ಥಳೀಯ ಯುವಕರು ಪಾನಮತ್ತ ಅಭಿಮಾನಿಗೆ ಧರ್ಮದೇಟು ನೀಡಿ ಕಂಬಳದಿಂದ ಹೊರಗೆ ಕಳುಹಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೂ ಮಾಹಿತಿ ಲಭ್ಯವಾಗಿದೆ. ಆದರೆ ಯಾರೂ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಕ್ರಮವಾಗಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಹೇಳಿದ್ದಾರೆ.

ತುಳುನಾಡಿನ ಸಂಸ್ಕೃತಿ ನಮಗೆ ಜೀವನ ಪಾಠ
ಅದಕ್ಕೂ ಮುನ್ನ ವೇದಿಕೆಯಲ್ಲಿ ಭಾಷಣ ಮಾಡಿದ ನಟಿ ಸಾನಿಯಾ ಅಯ್ಯರ್, ನನಗೆ ತುಳು ಬರುವುದಿಲ್ಲ. ಆದರೆ ನನಗೆ ತುಳು ಭಾಷೆ ಅಂದರೆ ತುಂಬಾ ಇಷ್ಟ. ಕಂಬಳ ಕೇವಲ ಸಾಂಸ್ಕೃತಿಕ ಕಲೆ ಅಥವಾ ಕ್ರೀಡೆ ಅಲ್ಲ. ಕಂಬಳ ಎನ್ನುವುದು ಜೀವನದ ಮೌಲ್ಯವಾಗಿದೆ. ತುಳುನಾಡಿನ ಸಂಸ್ಕೃತಿ ನಮಗೆ ಜೀವನ ಪಾಠ ಕಲಿಸಿಕೊಡುತ್ತದೆ. ಎಲ್ಲಾ ಕಲೆಗಳ ಹಿಂದೆ ಪಾಠಗಳಿವೆ ಎಂದು ಹೇಳಿದ್ದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications