ಮಂಗಳೂರಲ್ಲಿ ಶೀಲ ಶಂಕಿಸಿ ಪತಿಯಿಂದ ಪತ್ನಿಯ ಬರ್ಬರ ಕೊಲೆ
ಮಂಗಳೂರು ಏಪ್ರಿಲ್ 20: ಕುಡಿದ ಮತ್ತಿನಲ್ಲಿ ಪತಿ ತನ್ನ ಮತ್ನಿ ಯನ್ನು ಬರ್ಬರವಾಗಿ ಕೊಲೆ ಮಾಡಿದಘಟನೆ ಮಂಗಳೂರಿನಲ್ಲಿ ನಡೆದಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಅನೈತಿಕ ಸಂಬಂಧದ ಬಗ್ಗೆ ಶಂಕಿಸಿ ಪತ್ನಿಯನ್ನು ಪತಿ ಮಾರಕಾಯುಧಗಳಿಂದ ಕಡಿದು ಕೊಲೆಗೈದ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ. ನಗರ ಹೊರವಲಯದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲು ಬೋರುಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ.
ಮಂಗಳೂರಿನಲ್ಲಿ ಪ್ರಿಯಕರನನ್ನು ಕೊಲೆ ಮಾಡಿದ ಪ್ರೇಯಸಿಯ ಅಣ್ಣ
ಮೂಲತಃ ಬಾಗಲಕೋಟೆಯವರಾದ ಈ ದಂಪತಿ ಶರಣಪ್ಪ ಮತ್ತು ಮಂಜುಳಾ ಬೋರುಗುಡ್ಡೆಯಲ್ಲಿ ನೆಲೆಸಿದ್ದು, ನಾಲ್ವರು ಮಕ್ಕಳನ್ನು ಹೊಂದಿದ್ದಾರೆ. ವಿಪರೀತ ಕುಡಿತದ ಚಟ ಹೊಂದಿದ್ದ ಶರಣಪ್ಪ ನಿನ್ನೆ ರಾತ್ರಿ ಪತ್ನಿ ಮಂಜುಳಾರನ್ನು ಕತ್ತಿ ಮತ್ತು ಚೂರಿಯಿಂದ ಇರಿದು ಕೊಲೆಗೈದಿದ್ದಾನೆ ಎಂದು ಹೇಳಲಾಗಿದೆ. ಅನೈತಿಕ ಸಂಬಂಧ ಶಂಕಿಸಿ ಈ ಕೊಲೆ ನಡೆದಿದೆ ಎಂದು ಹೇಳಲಾಗಿದೆ .
ಕೇಳದ ರಾತ್ರಿ ವಿಪರೀತ ಕುಡಿದು ಮನೆಗೆ ಬಂದ ಪತಿ ಶರಣಪ್ಪ ಪತ್ನಿಯೊಂದಿಗೆ ಜಗಳ ಆರಂಭಿಸಿದ್ದಾನೆ ಎಂದು ಹೇಳಲಾಗಿದೆ. ಮನೆಯಲ್ಲಿ ಮುಂಜಾನೆ ವರೆಗೂ ಜಗಳ ನಡೆದಿದ್ದು ಈ ನಡುವೆ ಪತಿ ಶರಣಪ್ಪ ಪತ್ನಿ ಮಂಜುಳಾ ಅವರನ್ನು ಚೂರಿ ಯಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಹೇಳಾಗಿದೆ. ಕಾವೂರು ಠಾಣೆಯಲ್ಲಿ ಕೋಲೆ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪತಿ ಶರಣಪ್ಪ ನನ್ನು ಪೊಲೀಸರು ಬಂಧಿಸಿದ್ದಾರೆ.