350 ವರ್ಷ ಹಳೆಯ ದುರ್ಗಾಪರಮೇಶ್ವರಿ ದೇವಾಲಯ ಪುನರ್ ಪ್ರತಿಷ್ಠೋತ್ಸವ
ಮಂಗಳೂರು, ಜನವರಿ 11: ಮಂಗಳೂರು ಹೊರವಲಯದ ಕುಲಶೇಖರ ಸಮೀಪ ಇರುವ ಇತಿಹಾಸ ಪ್ರಸಿದ್ಧ ಕೊಂಗೂರು ಮಠ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪುನರ್ ಪ್ರತಿಷ್ಠೋತ್ಸವ ಮತ್ತು ಬ್ರಹ್ಮಕಲಶೋತ್ಸವ ಜನವರಿ 14 ರಿಂದ 18ರವರೆಗೆ ನಡೆಯಲಿದೆ.
ಈ ಕುರಿತು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವಾಲಯದ ಕೆಎನ್ ಬಿಎಂ ಟ್ರಸ್ಟ್ ನ ಟ್ರಸ್ಟಿ ಡಾ.ಸುಬ್ರಹ್ಮಣ್ಯ ಭಟ್, ಕೊಂಗೂರು ಮಠ ಶ್ರೀ ದುರ್ಗಾಪರಮೇಶ್ವರಿ ದೇವಾಲಯವು ಸುಮಾರು 350 ವರ್ಷಗಳಷ್ಟು ಪುರಾತನವಾಗಿದ್ದು ಬಹಳ ಪ್ರಸಿದ್ಧಿ ಪಡೆದಿದೆ. ಸರಳ ಮಣ್ಣಿನ ಗೋಡೆಯುಳ್ಳ ಈ ದೇವಸ್ಥಾನವು ಭಕ್ತರ ನಂಬುಕೆಯ ತಾಣವಾಗಿದೆ.
ಸಸ್ಯ ಸಮೃದ್ಧಿಯಾದ, ನಾಗ ಸನ್ನಿಧಿಯಾದ ಈ ಕ್ಷೇತ್ರದ ಸ್ಥಳದಲ್ಲಿ ಭೂತಾರಾಧನೆಯೂ ನಡೆಯುತ್ತದೆ. ಇಲ್ಲಿನ ದೈವಗಳಾದ ಜಟಾಧಾರಿ, ಬ್ರಹ್ಮರ ದೈವ , ರಕ್ತೇಶ್ವರಿ ದೈವ ಮತ್ತು ಗುಳಿಗ ದೈವಗಳು ಸ್ಥಳೀಯರ ಭಕ್ತಿಯ ದ್ಯೋತಕವಾಗಿದೆ ಎಂದು ಹೇಳಿದರು.

ಶ್ರೀ ಕ್ಷೇತ್ರವನ್ನು ಭಕ್ತರ ಆಭಿಪ್ರಾಯ ಮತ್ತು ಆಶಯದ ಆಧಾರದ ಮೇಲೆ ದೇವಾಲಯದ ಜೀರ್ಣೋದ್ದಾರ ನಡೆಸಲು ತೀರ್ಮಾನಿಸಲಾಗಿತ್ತು. ಈ ಹಿನ್ನೆಲೆಯಲ್ಲಿ 2011 ನೇ ಫೇಬ್ರವರಿಯಲ್ಲಿ ಭಕ್ತರ ಉಪಸ್ಥಿತಿಯಲ್ಲಿ ಪ್ರಸಿದ್ಧ ಜ್ಯೋತಿಷಿ ಶ್ರೀ ಬಿ ರಂಗನಾರಾಯಣ ಭಟ್ ಅವರಿಂದ ಅಷ್ಟ ಮಂಗಳ ಪ್ರಶ್ನೆ ವ್ಯವಸ್ಥೆ ಮಾಡಲಾಗಿತ್ತು.
ಜ್ಯೋತಿಷಿಯವರಿಂದ ಅಷ್ಟಮಂಗಳ ಪ್ರಶ್ನೆಯಲ್ಲಿ ಪಡೆದ ನಿರ್ದೇಶನಗಳಂತೆ ಜೀರ್ಣೋದ್ಧಾರ ಕಾರ್ಯಕ್ರಮ ಕೈಗೊಳ್ಳುವ ನಿರ್ಧಾರ ಮಾಡಲಾಗಿದೆ. 2013 ರಲ್ಲಿ ಶಿಲಾನ್ಯಾಸದೊಂದಿಗೆ ಕೆಲಸ ಪ್ರಾರಂಭಿಸಿ 6 ವರ್ಷಗಳ ದೀರ್ಘ ಪ್ರಯತ್ನ ಗಳೊಂದಿಗೆ ಈಗ ಸುಂದರ ದೇವಸ್ಥಾನ ನಿರ್ಮಾಣ ಕೆಲಸ ಮುಗಿಸಲಾಗಿದೆ.

ಇದೇ ಬರುವ ಜನವರಿ 14 ರಿಂದ 18 ರವರೆಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಜನವರಿ 18 ರ ಕುಂಭ ಲಗ್ನ ಮುಂಜಾನೆ 8:40 ಕ್ಕೆ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮ ಕಲಶಗಳು ನಡೆಯಲಿದೆ ಈ ಸಂದರ್ಭದಲ್ಲಿ ಮಹಾರಾಷ್ಟ್ರದ ಕೊಲ್ಹಾಪುರ ಕರವೀರ ಪೀಠದ ಜಗದ್ಗುರು ಶ್ರೀ ವಿದ್ಯಾನರಸಿಂಹ ಭಾರತೀ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದು ಡಾ.ಸುಬ್ರಹ್ಮಣ್ಯ ಭಟ್ ತಿಳಿಸಿದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications