ಮುಸ್ಲಿಂ ಎಂಬ ಕಾರಣಕ್ಕೆ ಪೊಲೀಸರಿಂದ ಹಲ್ಲೆ: ಡಿವೈಎಫ್ಐ ಆರೋಪ
ಮಂಗಳೂರು, ಅಕ್ಟೋಬರ್ 03: ಮುಸ್ಲಿಂ ಎಂಬ ಕಾರಣಕ್ಕೆ ಗಸ್ತಿನಲ್ಲಿದ್ದ ವೇಣೂರು ಪೊಲೀಸರು ತಮ್ಮ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ಡಿವೈಎಫ್ಐ ಆರೋಪಿಸಿದೆ.
ಕಳೆದ ರಾತ್ರಿ ವೇಣೂರಿನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಬೇಕರಿಯ ಬಾಗಿಲು ಮುಚ್ಚಿ ತನ್ನ ತಮ್ಮನೊಂದಿಗೆ ಬೈಕ್ ನಲ್ಲಿ ಪತ್ನಿಯ ಮನೆಗೆ ತೆರಳುತ್ತಿದ್ದ ಡಿವೈಎಫ್ಐ ಮುಖಂಡ ರಿಯಾಝ್ ಮಾಂತೂರು (25), ಅವರ ಸಹೋದರ ಇರ್ಷಾದ್ (18) ಮೇಲೆ ಪೊಲೀಸರು ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ರಿಯಾಝ್ ವಾರದ ಹಿಂದೆಯಷ್ಟೇ ಮದುವೆಯಾಗಿದ್ದು, ಮೂಡುಬಿದಿರೆ ಸಮೀಪದ ಗಂಜಿಮಠದಲ್ಲಿ ಸಹೋದರನೊಂದಿಗೆ ಬೈಕ್ ನಲ್ಲಿ ಬೆಳ್ತಂಗಡಿಯ ಕೆಳ್ತಜೆಗೆ ತೆರಳುತ್ತಿದ್ದರು ಎಂದು ಹೇಳಲಾಗಿದೆ. ಈ ಮಾರ್ಗದಲ್ಲಿ ವೇಣೂರು ಪೊಲೀಸರು ಬ್ಯಾರಿಕೇಡ್ ಹಾಕಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು.

ಈ ವೇಳೆ ರಿಯಾಝ್ ಚಲಾಯಿಸುತ್ತಿದ್ದ ಬೈಕ್ ನಿಲ್ಲಿಸಿದ ಪೊಲೀಸರು ವಾಹನದ ದಾಖಲೆಗಳನ್ನು ತೋರಿಸಿಲು ಸೂಚಿಸಿದ್ದಾರೆ. ಈ ವೇಳೆ ರಿಯಾಝ್ ಡ್ರೈವಿಂಗ್ ಲೈಸನ್ಸ್ ನೀಡಿ, ವಾಹನದ ಉಳಿದ ದಾಖಲೆಗಳು ಮನೆಯಲ್ಲಿದ್ದು, ಬೆಳಗ್ಗೆ ತರುವುದಾಗಿ ತಿಳಿಸಿದ್ದಾರೆ.
ಈ ವೇಳೆ ರೀಯಾಝ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಇದೇ ಸಂದರ್ಭ ಅದೇ ದಾರಿಯಲ್ಲಿ ಕುಟುಂಬ ಸಮೇತರಾಗಿ ಬಂದ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಘಟನೆ ಬಗ್ಗೆ ಪ್ರಶ್ನಿಸಿದ್ದಾರೆ. ನಂತರ ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಿ ಇವರಿಬ್ಬರನ್ನು ಒದ್ದು ಒಳಗೆ ಹಾಕಿ ಎಂದು ಆದೇಶಿಸಿದ್ದಾರೆ.
ನಂತರ ಪೊಲೀಸರು ರಿಯಾಝ್ ಮಾಂತೂರು ಹಾಗು ಅವರ ಸಹೋದರ ಇರ್ಷಾದ್ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಮಾರ್ಗಮಧ್ಯೆಯೂ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications