ತೊಕ್ಕೊಟ್ಟು ಮೇಲ್ಸೇತುವೆ ಉದ್ಘಾಟಿಸಿದ ಮೋದಿ, ನಿತಿನ್ ಗಡ್ಕರಿ?!
ಮಂಗಳೂರು, ಡಿಸೆಂಬರ್ 30: ನರೇಂದ್ರ ಮೋದಿ ಹಾಗೂ ನಿತಿನ್ ಗಡ್ಕರಿ ಇಂದು ಮಂಗಳೂರಿನ ತೊಕ್ಕೊಟ್ಟು ಮೇಲ್ಸೆತುವೆಯನ್ನು ಉದ್ಘಾಟಿಸಿದ್ದಾರೆ. ಅರೆ ಇದೇನು ಹೀಗೆ ? ಸುದ್ದಿಯಿಲ್ಲದೇ ಉದ್ಘಾಟನೆ ಎಂದು ಯೋಚಿಸುತ್ತಿದ್ದಿರಾ ? ಈ ದೃಶ್ಯ ಕಂಡುಬಂದದ್ದು ತೊಕ್ಕೊಟ್ಟು ಮೇಲ್ಸೆತುವೆ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ.
ಹೌದು, ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿಯನ್ನು ಈ ವರ್ಷದ ಡಿಸೆಂಬರ್ 30 ರೊಳಗೆ ಪೂರ್ಣಗೊಳಿಸುವುದಾಗಿ ಸಂಸದ ನಳಿನ್ ಕುಮಾರ್ ಕಠೀಲ್ ಈ ಹಿಂದೆ ಹೇಳಿಕೆ ನೀಡಿದ್ದರು. ಆದರೆ ಶೇಖಡ 50 ರಷ್ಟು ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಹೆದ್ದಾರಿ ಪ್ರಾಧಿಕಾರದ ನಿಷ್ಕ್ರಿಯತೆಯನ್ನು ಖಂಡಿಸಿ ಉಳ್ಳಾಲ ವಲಯ ಡಿವೈಎಫ್ಐ ಕಾರ್ಯಕರ್ತರು ಇಂದು ನರೇಂದ್ರ ಮೋದಿ , ನಿತಿನ್ ಗಡ್ಕರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮುಖವಾಡ ಧರಿಸಿದ ವ್ಯಕ್ತಿಗಳನ್ನು ಮೆರವಣಿಗೆಯಲ್ಲಿ ಕರೆತಂದು ಮೇಲ್ಸೇತುವೆಯ ಅಣುಕು ಉದ್ಘಾಟನಾ ಕಾರ್ಯಕ್ರಮವನ್ನು ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಅಚ್ಛೇ ದಿನ್ ಕೊಡುತ್ತೇವೆ ಎನ್ನುತ್ತಾ ಅಧಿಕಾರಕ್ಕೆ ಬಂದ ಮೋದಿ ಸರ್ಕಾರಕ್ಕೆ ಇದುವರೆಗೆ ಒಂದು ಅಚ್ಛೇ ಸಡಕ್ ಕೊಡಲು ಸಾಧ್ಯವಾಗಿಲ್ಲ ಎಂದು ಟೀಕಿಸಿದರು.

ಕೇಂದ್ರ ವಿಫಲತೆಗೆ ಮಂಗಳೂರಿನ ಪಂಪುವೆಲ್ , ತೊಕ್ಕೊಟ್ಟು ರಸ್ತೆಗಳೇ ಉತ್ತಮ ಉದಾಹರಣೆ. ಇನ್ನಾದರೂ ಸಂಸದರು ಸುಳ್ಳು ಹೇಳುವುದು ಬಿಟ್ಟು ಕೆಲಸ ಮಾಡಿ ತೋರಿಸಲಿ ಎಂದು ಕುಟುಕಿದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications