ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತೊಕ್ಕೊಟ್ಟು ಮೇಲ್ಸೇತುವೆ ಉದ್ಘಾಟಿಸಿದ ಮೋದಿ, ನಿತಿನ್ ಗಡ್ಕರಿ?!

|
Google Oneindia Kannada News

ಮಂಗಳೂರು, ಡಿಸೆಂಬರ್ 30: ನರೇಂದ್ರ ಮೋದಿ ಹಾಗೂ ನಿತಿನ್ ಗಡ್ಕರಿ ಇಂದು ಮಂಗಳೂರಿನ ತೊಕ್ಕೊಟ್ಟು ಮೇಲ್ಸೆತುವೆಯನ್ನು ಉದ್ಘಾಟಿಸಿದ್ದಾರೆ. ಅರೆ ಇದೇನು ಹೀಗೆ ? ಸುದ್ದಿಯಿಲ್ಲದೇ ಉದ್ಘಾಟನೆ ಎಂದು ಯೋಚಿಸುತ್ತಿದ್ದಿರಾ ? ಈ ದೃಶ್ಯ ಕಂಡುಬಂದದ್ದು ತೊಕ್ಕೊಟ್ಟು ಮೇಲ್ಸೆತುವೆ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ.

ಹೌದು, ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿಯನ್ನು ಈ ವರ್ಷದ ಡಿಸೆಂಬರ್ 30 ರೊಳಗೆ ಪೂರ್ಣಗೊಳಿಸುವುದಾಗಿ ಸಂಸದ ನಳಿನ್ ಕುಮಾರ್ ಕಠೀಲ್ ಈ ಹಿಂದೆ ಹೇಳಿಕೆ ನೀಡಿದ್ದರು. ಆದರೆ ಶೇಖಡ 50 ರಷ್ಟು ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಹೆದ್ದಾರಿ ಪ್ರಾಧಿಕಾರದ ನಿಷ್ಕ್ರಿಯತೆಯನ್ನು ಖಂಡಿಸಿ ಉಳ್ಳಾಲ ವಲಯ ಡಿವೈಎಫ್ಐ ಕಾರ್ಯಕರ್ತರು ಇಂದು ನರೇಂದ್ರ ಮೋದಿ , ನಿತಿನ್ ಗಡ್ಕರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮುಖವಾಡ ಧರಿಸಿದ ವ್ಯಕ್ತಿಗಳನ್ನು ಮೆರವಣಿಗೆಯಲ್ಲಿ ಕರೆತಂದು ಮೇಲ್ಸೇತುವೆಯ ಅಣುಕು ಉದ್ಘಾಟನಾ ಕಾರ್ಯಕ್ರಮವನ್ನು ನಡೆಸಿದ್ದಾರೆ.

DYFI stages mock inaugural protest in Mangaluru

'ಪಂಪ್ ವೆಲ್ ಫ್ಲೈ ಓವರ್ ಕಾಮಗಾರಿ ವಿಳಂಭಕ್ಕೆ ರಾಜ್ಯ ಸರಕಾರ ಹೊಣೆ''ಪಂಪ್ ವೆಲ್ ಫ್ಲೈ ಓವರ್ ಕಾಮಗಾರಿ ವಿಳಂಭಕ್ಕೆ ರಾಜ್ಯ ಸರಕಾರ ಹೊಣೆ'

ಈ ಸಂದರ್ಭದಲ್ಲಿ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಅಚ್ಛೇ ದಿನ್ ಕೊಡುತ್ತೇವೆ ಎನ್ನುತ್ತಾ ಅಧಿಕಾರಕ್ಕೆ ಬಂದ ಮೋದಿ ಸರ್ಕಾರಕ್ಕೆ ಇದುವರೆಗೆ ಒಂದು ಅಚ್ಛೇ ಸಡಕ್ ಕೊಡಲು ಸಾಧ್ಯವಾಗಿಲ್ಲ ಎಂದು ಟೀಕಿಸಿದರು.

DYFI stages mock inaugural protest in Mangaluru

ಕೇಂದ್ರ ವಿಫಲತೆಗೆ ಮಂಗಳೂರಿನ ಪಂಪುವೆಲ್ , ತೊಕ್ಕೊಟ್ಟು ರಸ್ತೆಗಳೇ ಉತ್ತಮ ಉದಾಹರಣೆ. ಇನ್ನಾದರೂ ಸಂಸದರು ಸುಳ್ಳು ಹೇಳುವುದು ಬಿಟ್ಟು ಕೆಲಸ ಮಾಡಿ ತೋರಿಸಲಿ ಎಂದು ಕುಟುಕಿದರು.

English summary
DYFI Ullala unit staged mock drill inaugural protest in Thokkotu near Mangaluru on December30.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X