ಇ-ತ್ಯಾಜ್ಯದಲ್ಲಿ ಅವತಾರ ತಾಳಿದ ಸುಂದರ ಗಣಪ
ಮಂಗಳೂರು, ಆಗಸ್ಟ್ 31: ಗಣೇಶನ ಹಬ್ಬ ಹತ್ತಿರವಾಗಿದೆ. ಗಣಪನ ಥರಾವರಿ ವಿಗ್ರಹಗಳು ಎಲ್ಲೆಲ್ಲೂ ಕಂಡುಬರುತ್ತಿವೆ. ಹಾಗೇ ಇಲ್ಲಿ ಇ-ತ್ಯಾಜ್ಯದಲ್ಲೂ ಗಣಪ ಅರಳಿದ್ದಾನೆ. ಎಲೆಕ್ಟ್ರಿಕ್ ಬಿಡಿ ಭಾಗಗಳಿಂದ ಮೂಡಿಬಂದ ಗಣಪನ ವಿಗ್ರಹಗಳು ನೋಡುಗರನ್ನು ಸೆಳೆಯುತ್ತಿದೆ.
ಇತ್ತೀಚಿನ ದಿನಗಳಲ್ಲಿ ಇ- ತ್ಯಾಜ್ಯ ಭಾರೀ ಸಮಸ್ಯೆಯಾಗಿ ಉದ್ಭವಿಸಿದೆ. ಇ-ತ್ಯಾಜ್ಯದ ಮರು ಉಪಯೋಗದ ಕುರಿತು ಚಿಂತನೆಗಳು ನಡೆಯುತ್ತಿವೆ. ಈ ನಡುವೆ, ಉಪಯೋಗವಿಲ್ಲದೇ ಮೂಲೆ ಸೇರಿದ್ದ ಎಲೆಕ್ಟ್ರಾನಿಕ್ ಬಿಡಿಭಾಗಗಳನ್ನು ಒಟ್ಟುಗೂಡಿಸಿ ಕಲೆಯಾಗಿ ಅರಳಿಸಿದ್ದಾರೆ ಪುತ್ತೂರಿನ ಪ್ರವೀಣ್.
ಪುತ್ತೂರಿನ ಮೊಟ್ಟೆತ್ತಡ್ಕ ನಿವಾಸಿ ಚಿತ್ರಕಲಾ ಶಿಕ್ಷಕ ಪ್ರವೀಣ್ ವರ್ಣಕುಟೀರ ಅವರ ಕಲ್ಪನೆಯಲ್ಲಿ ಎಲೆಕ್ಟ್ರಾನಿಕ್ ಬಿಡಿಭಾಗದ ಗಣಪತಿ ವಿಗ್ರಹ ಮೂಡಿಬಂದಿದೆ. ಕಲಾವಿದ ಪ್ರವೀಣ್ ಅವರು 15 ವರ್ಷಗಳಿಂದ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಎಲೆಕ್ಟ್ರಾನಿಕ್ ಬಿಡಿಭಾಗದ ಗಣಪನನ್ನು ತಯಾರಿಸಿದ್ದಾರೆ.
ನಿರುಪಯುಕ್ತ ಎಲೆಕ್ಟ್ರಾನಿಕ್ ಬಿಡಿಭಾಗಗಳನ್ನು ಬಳಸಿ ಪ್ರವೀಣ್ 12 ಗಣಪತಿ ವಿಗ್ರಹಗಳನ್ನು ತಯಾರಿಸಿದ್ದಾರೆ. ಎಲೆಕ್ಟ್ರಾನಿಕ್ ಬಿಡಿ ಭಾಗಗಳಾದ ಐಸಿ, ಕಂಡೆನ್ಸರ್, ಕೆಪಾಸಿಟರ್, ಕೂಲಿಂಗ್, ಅಲ್ಯುಮಿನಿಯಂ ಪ್ಲೇಟ್ ಬಳಸಿ ಈ ವಿಗ್ರಹಗಳನ್ನು ತಯಾರಿಸಲಾಗಿದೆ. 1ರಿಂದ 1.5 ಇಂಚಿನ ಗಣಪತಿ ವಿಗ್ರಹ ರಚಿಸಲಾಗಿದೆ.

ಪ್ರತೀ ವರ್ಷ ಗಣೇಶ ಚತುರ್ಥಿಯಂದು ಪರಿಸರ ಸ್ನೇಹಿ ಗಣಪತಿ ವಿಗ್ರಹ ತಯಾರಿಸುವ ಪ್ರವೀಣ್ ಅವರು ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದಾರೆ. ಜತೆಗೆ ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಮೂಲಕ ಆಸಕ್ತರಿಗೆ ಕಲೆಯ ತರಬೇತಿ ನೀಡುತ್ತಿದ್ದಾರೆ. ಪರಿಸರಸ್ನೇಹಿ ನೆಲೆಯಲ್ಲಿ ಪ್ರತಿ ಬಾರಿ ವಿಶೇಷ ರೀತಿ ಗಣಪತಿ ವಿಗ್ರಹ ತಯಾರಿಸುವ ಇವರು, ಈ ಬಾರಿ ಹಾಳಾದ ಎಲೆಕ್ಟ್ರಾನಿಕ್ ಬಿಡಿಭಾಗಗಳನ್ನು ಬಳಸಿ ಮಿನಿ ಗಣಪತಿ ತಯಾರಿಸಿದ್ದಾರೆ. ಕಡಿಮೆ ಖರ್ಚಿನಲ್ಲಿ, ಉಪಯೋಗವಿಲ್ಲದ ವಸ್ತುವಿಗೆ ರೂಪ ನೀಡಿ ಪರಿಸರ ಜಾಗೃತಿ ಮೂಡಿಸುವ ಇವರ ಪ್ರಯತ್ನಕ್ಕೆ ಪ್ರಶಂಸೆ ವ್ಯಕ್ತವಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications