ಚಪ್ಪಾಳೆ ತಟ್ಟಿಯಾಯಿತು, ಈಗ ದೀಪ ಹಚ್ಚಬೇಕಾ? ಪ್ರಧಾನಿಗಳೇ ಯಾಕೋ ಇದು ಜಾಸ್ತಿ ಅನಿಸ್ತಾ ಇಲ್ವಾ?
ಮಂಗಳೂರು, ಏಪ್ರಿಲ್ 3: ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾಡಿದ ಇಂದಿನ ವಿಡಿಯೋ ಭಾಷಣದಲ್ಲಿ ಲಾಕ್ ಡೌನ್ ಬಗ್ಗೆ ಏನಾದರೂ ಹೇಳಬಹುದು ಎನ್ನುವುದೇ ಬಹುಜನರ ನಿರೀಕ್ಷೆಯಾಗಿತ್ತು, ಅಪೇಕ್ಷೆ ಕೂಡಾ.
ಲಾಕ್ ಡೌನ್ ಬಗ್ಗೆ ಚಕಾರವೆತ್ತದೆ, ಭಾನುವಾರ (ಏ 5) ರಾತ್ರಿ ಒಂಬತ್ತು ಗಂಟೆಗೆ ದೀಪ ಹಚ್ಚಿ ಎನ್ನುವ ಪ್ರಧಾನಿಗಳ ಕರೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಯು.ಟಿ.ಖಾದರ್, ಪ್ರಧಾನಿ ಕರೆಗೆ ಆಕ್ಷೇಪ ವ್ಯಕ್ತ ಪಡಿಸಿ, ಟ್ವೀಟ್ ಮಾಡಿದ್ದಾರೆ. ಅದು ಹೀಗಿದೆ:
ಇಂಡಿಯಾ ಫೈಟ್ಸ್ ಕರೋನಾ ಎನ್ನುವ ಹ್ಯಾಷ್ ಟ್ಯಾಗ್ ಬಳಸಿ, "ಚಪ್ಪಾಳೆ ತಟ್ಟಾಯ್ತು, ಪಾತ್ರೆ ಬಡಿದಾಯ್ತು.ಈಗ ಕ್ಯಾಂಡಲ್ ಹಚ್ಚ ಬೇಕೇ? ಪ್ರಧಾನಿಗಳೇ @narendramodi, ಇದು ಯಾಕೋ ಸ್ವಲ್ಪ ಜಾಸ್ತಿ ಅನಿಸ್ತಾ ಇಲ್ವಾ? ಇದರ ಬದಲು ನಿಜವಾದ ಸಮಸ್ಯೆ ಬಗ್ಗೆ ಗಮನ ಹರಿಸಿ ಸರ್...ಜನಸಾಮಾನ್ಯರ ಹಸಿದ ಹೊಟ್ಟೆಗೆ ಅನ್ನ ನೀಡಿ" ಎಂದು ಖಾದರ್ ಆಗ್ರಹಿಸಿದ್ದಾರೆ.

"ಜನರನ್ನು ನೋವಿನಿಂದ ಹೊರತನ್ನಿ, ಆರ್ಥಿಕ ತಲ್ಲಣ ಸರಿಪಡಿಸಿ, ಕೋವಿಡ್ ಹೋರಾಟದಲ್ಲಿ ನಾವು ನಿಮ್ಮ ಜೊತೆ ಇದ್ದೀವಿ, ಎಲ್ಲವೂ ಸರಿ ಹೋದ ಮೇಲೆ ಒಟ್ಟಾಗಿ ದೀಪ ಹಚ್ಚೋದಲ್ಲ, ದೀಪಾವಳಿಯನ್ನೇ ಮಾಡೋಣ.. ಮೊದಲು ಸಮಸ್ಯೆ ಬಗ್ಗೆ ಗಮನಹರಿಸೊಣ ಸರ್....ಏನಂತೀರಿ? Be Practical Please" ಎಂದು ಖಾದರ್ ಟ್ವೀಟ್ ನಲ್ಲಿ ಹೇಳಿದ್ದಾರೆ.
ಇದಕ್ಕೂ ಮೊದಲು ಟ್ವೀಟ್ ಮಾಡಿ, "ನಿರಾಶ್ರಿತರ ವಸತಿ ಕೇಂದ್ರಕ್ಕೆ ನಾನೂ ಹಾಗೂ ಐವನ್ ಡಿಸೋಜ ಭೇಟಿ ನೀಡಿ ಕೇಂದ್ರದಲ್ಲಿ ನೀಡಲಾಗುವ ಆಹಾರ ಹಾಗೂ ಇತರ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದೆ" ಎಂದು ಖಾದರ್ ಟ್ವೀಟ್ ಮಾಡಿದ್ದರು.
"ಕೆಪಿಸಿಸಿ ನಿರ್ದೇಶನದಂತೆ ರಚನೆಯಾದ ಕೋವಿಡ್ 19 ಟಾಸ್ಕ್ ಫೋರ್ಸ್ ನ ಮೊದಲ ಸಭೆಯು, ಟಾಸ್ಕ್ ಫೋರ್ಸ್ ನ ಅಧ್ಯಕ್ಷರಾದ ಮಾಜಿ ಶಾಸಕ ಜೆ.ಆರ್.ಲೋಬೊ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು" ಎಂದೂ ಖಾದರ್ ಟ್ವೀಟ್ ಮಾಡಿದ್ದಾರೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications