ಕಾಸರಗೋಡಿನ ಎಡನೀರು ಕೇಶವಾನಂದ ಭಾರತೀ ಸ್ವಾಮೀಜಿ ನಿಧನ
ಮಂಗಳೂರು, ಸೆಪ್ಟೆಂಬರ್ 6: ಕೇರಳದ ಕಾಸರಗೋಡು ಜಿಲ್ಲೆಯ ಎಡನೀರು ಜಗದ್ಗುರು ಶಂಕರಾಚಾರ್ಯ ಸಂಸ್ಥಾನದ ಮಠಾಧೀಶ ಕೇಶವಾನಂದ ಭಾರತೀ ಸ್ವಾಮೀಜಿಗಳು ಶನಿವಾರ ನಿಧನ ಹೊಂದಿದ್ದಾರೆ.
76 ವರ್ಷ ವಯಸ್ಸಿನ ಕೇಶವಾನಂದ ಭಾರತೀ ಸ್ವಾಮೀಜಿ ಧಾರ್ಮಿಕವಾಗಿ, ಸಾಮಾಜಿಕವಾಗಿ ಸಕ್ರಿಯರಾಗಿದ್ದರು. ಗಡಿನಾಡಿನ ಸಂಸ್ಥಾನದಲ್ಲಿ ಯಕ್ಷಗಾನ, ಸಂಗೀತದ ಕೇಂದ್ರ ಮಾಡಿದ್ದರು.
ಯಕ್ಷಗಾನ ಕಲೆಯ ಮೇಲೆ ಅತೀ ಹೆಚ್ಚು ಪ್ರೀತಿ ಹೊಂದಿದ್ದ ಕೇಶವಾನಂದ ಭಾರತೀ ಸ್ವಾಮೀಜಿ, ಮೇಳವನ್ನು ಮುನ್ನಡೆಸುವುದಲ್ಲದೇ ಸ್ವತಃ ತಾವೇ ಭಾಗವತಿಕೆಯನ್ನು ನಡೆಸುತ್ತಿದ್ದರು.

ಕಾಸರಗೋಡಿನ ಸಂಸ್ಥಾನದಲ್ಲಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗನ್ನು ನಡೆಸುತ್ತಿದ್ದರಲ್ಲದೇ, ಸ್ವಾಮೀಜಿ ಹರಿಕಥೆಗಳನ್ನು ಹೇಳುತ್ತಿದ್ದರು. ಕರಾವಳಿಯ ಪ್ರಸಿದ್ಧ ಯಕ್ಷಗಾನದ ಮೇಲೆ ಶ್ರೀಗಳಿಗೆ ವಿಶೇಷ ಒಲವಿತ್ತು.
ಪ್ರತಿ ವರ್ಷ ಯಕ್ಷಗಾನ ಸಪ್ತಾಹ, ತಾಳಮದ್ದಳೆ ಕೂಟಗಳನ್ನು ನಡೆಸುತ್ತಿದ್ದರು. ಇತ್ತೀಚಿಗೆ ಸ್ವಾಮೀಜಿಗಳು 60ನೇ ವರ್ಷದ ಚಾತುರ್ಮಾಸ್ಯ ವ್ರತ ಆಚರಿಸಿದ್ದರು.
More From
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications