ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ಎಡೆ ಮಡೆಸ್ನಾನದಲ್ಲಿ 333 ಭಕ್ತರು
ಮಂಗಳೂರು, ನವೆಂಬರ್ 23: ಹೆಸರಾಂತ ನಾಗಕ್ಷೇತ್ರವಾದ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿಯ ಸಂಭ್ರಮ ಮನೆ ಮಾಡಿದೆ. ಹದಿನಾರು ದಿನ ನಡೆಯಲಿರುವ ಈ ವಾರ್ಷಿಕ ಮಹೋತ್ಸವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ವಿಶೇಷ ಸೇವೆಗಳಲ್ಲಿ ಎಡೆ ಮಡೆಸ್ನಾನವೂ ಒಂದಾಗಿದ್ದು, ಗುರುವಾರದಂದು (ಪಂಚಮಿ) ನಡೆದ ಈ ಸೇವೆಯಲ್ಲಿ 333 ಭಕ್ತರು ಪಾಲ್ಗೊಂಡಿದ್ದರು.
ವಿವಾದದ ಕೇಂದ್ರಬಿಂದುವಾಗಿದ್ದ ಮಡೆ ಮಡೆ ಸ್ನಾನ ಕ್ಷೇತ್ರದಲ್ಲಿ ನಿಷೇಧಗೊಂಡ ಬಳಿಕ ಇದು ಮೂರನೇ ಬಾರಿಗೆ ಸುಬ್ರಹ್ಮಣ್ಯದಲ್ಲಿ ಎಡೆ ಮಡೆಸ್ನಾನವನ್ನು ನಡೆಸಲಾಯಿತು. ದೇವರ ನೈವೇದ್ಯವನ್ನು ದೇವಸ್ಥಾನದ ಪ್ರಾಂಗಣದಲ್ಲಿ ಬಡಿಸಿ, ಅದನ್ನು ಗೋವುಗಳಿಗೆ ನೀಡಲಾಗುತ್ತದೆ. ಆ ನಂತರ ಇದರ ಮೇಲೆ ಭಕ್ತಾಧಿಗಳು ಉರುಳುಸೇವೆ ಮಾಡುತ್ತಾರೆ. ಈ ಉರುಳು ಸೇವೆಯನ್ನು ಎಡೆ ಮಡೆಸ್ನಾನ ಎನ್ನುತ್ತಾರೆ.

ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಬ್ರಾಹ್ಮಣರು ಊಟ ಮಾಡಿ ಬಿಟ್ಟ ಎಂಜಿಲ ಎಲೆಯ ಮೇಲೆ ಉರುಳು ಸೇವೆ ಮಾಡುವ ಮಡೆಮಡೆ ಸ್ನಾನವನ್ನು ನೆರವೇರಿಸಿಕೊಂಡು ಬರಲಾಗುತ್ತಿತ್ತು. ಅದು ನಿಷೇಧಕ್ಕೆ ಒಳಗಾದ ಹಿನ್ನೆಲೆಯಲ್ಲಿ ಮೂರು ವರ್ಷಗಳಿಂದ ಇಲ್ಲಿ ಈಗ ಎಡೆ ಮಡೆಸ್ನಾನವನ್ನು ಆರಂಭಿಸಲಾಗಿದೆ.
ಕ್ಷೇತ್ರದಲ್ಲಿ ನಡೆಯುವ ಈ ವಿಶೇಷ ಸೇವೆಯಲ್ಲಿ ನೂರಾರು ಸಂಖ್ಯೆಯ ಭಕ್ತಾದಿಗಳು ಭಾಗವಹಿಸುತ್ತಿದ್ದಾರೆ. ಈ ಸೇವೆಯನ್ನು ಮಾಡಿದಲ್ಲಿ ದೇಹಕ್ಕೆ ಅಂಟಿಕೊಂಡ ಚರ್ಮ ರೋಗಾದಿಗಳು ಸೇರಿದಂತೆ ಸಂಕಷ್ಟಗಳು ದೂರವಾಗುತ್ತವೆ ಎನ್ನುವ ನಂಬಿಕೆ ಇದೆ.

ಶ್ರೀ ಕ್ಷೇತ್ರದಲ್ಲಿ ಗುರುವಾರ ರಾತ್ರಿ ಪಂಚಮಿ ರಥೋತ್ಸವ ನಡೆಯಲಿದ್ದು, ಶುಕ್ರವಾರ ಬೆಳಗ್ಗೆ 8.30ರ ಮುಹೂರ್ತದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ನಡೆಯಲಿದೆ. ದೇಶ ವಿದೇಶಗಳಿಂದ ಲಕ್ಷಾಂತರ ಮಂದಿ ಭಕ್ತರು ರಥೋತ್ಸವದಲ್ಲಿ ಭಾಗವಹಿಸುತ್ತಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications