ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ಎಡೆ ಮಡೆಸ್ನಾನದಲ್ಲಿ 333 ಭಕ್ತರು
ಮಂಗಳೂರು, ನವೆಂಬರ್ 23: ಹೆಸರಾಂತ ನಾಗಕ್ಷೇತ್ರವಾದ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿಯ ಸಂಭ್ರಮ ಮನೆ ಮಾಡಿದೆ. ಹದಿನಾರು ದಿನ ನಡೆಯಲಿರುವ ಈ ವಾರ್ಷಿಕ ಮಹೋತ್ಸವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ವಿಶೇಷ ಸೇವೆಗಳಲ್ಲಿ ಎಡೆ ಮಡೆಸ್ನಾನವೂ ಒಂದಾಗಿದ್ದು, ಗುರುವಾರದಂದು (ಪಂಚಮಿ) ನಡೆದ ಈ ಸೇವೆಯಲ್ಲಿ 333 ಭಕ್ತರು ಪಾಲ್ಗೊಂಡಿದ್ದರು.
ವಿವಾದದ ಕೇಂದ್ರಬಿಂದುವಾಗಿದ್ದ ಮಡೆ ಮಡೆ ಸ್ನಾನ ಕ್ಷೇತ್ರದಲ್ಲಿ ನಿಷೇಧಗೊಂಡ ಬಳಿಕ ಇದು ಮೂರನೇ ಬಾರಿಗೆ ಸುಬ್ರಹ್ಮಣ್ಯದಲ್ಲಿ ಎಡೆ ಮಡೆಸ್ನಾನವನ್ನು ನಡೆಸಲಾಯಿತು. ದೇವರ ನೈವೇದ್ಯವನ್ನು ದೇವಸ್ಥಾನದ ಪ್ರಾಂಗಣದಲ್ಲಿ ಬಡಿಸಿ, ಅದನ್ನು ಗೋವುಗಳಿಗೆ ನೀಡಲಾಗುತ್ತದೆ. ಆ ನಂತರ ಇದರ ಮೇಲೆ ಭಕ್ತಾಧಿಗಳು ಉರುಳುಸೇವೆ ಮಾಡುತ್ತಾರೆ. ಈ ಉರುಳು ಸೇವೆಯನ್ನು ಎಡೆ ಮಡೆಸ್ನಾನ ಎನ್ನುತ್ತಾರೆ.

ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಬ್ರಾಹ್ಮಣರು ಊಟ ಮಾಡಿ ಬಿಟ್ಟ ಎಂಜಿಲ ಎಲೆಯ ಮೇಲೆ ಉರುಳು ಸೇವೆ ಮಾಡುವ ಮಡೆಮಡೆ ಸ್ನಾನವನ್ನು ನೆರವೇರಿಸಿಕೊಂಡು ಬರಲಾಗುತ್ತಿತ್ತು. ಅದು ನಿಷೇಧಕ್ಕೆ ಒಳಗಾದ ಹಿನ್ನೆಲೆಯಲ್ಲಿ ಮೂರು ವರ್ಷಗಳಿಂದ ಇಲ್ಲಿ ಈಗ ಎಡೆ ಮಡೆಸ್ನಾನವನ್ನು ಆರಂಭಿಸಲಾಗಿದೆ.
ಕ್ಷೇತ್ರದಲ್ಲಿ ನಡೆಯುವ ಈ ವಿಶೇಷ ಸೇವೆಯಲ್ಲಿ ನೂರಾರು ಸಂಖ್ಯೆಯ ಭಕ್ತಾದಿಗಳು ಭಾಗವಹಿಸುತ್ತಿದ್ದಾರೆ. ಈ ಸೇವೆಯನ್ನು ಮಾಡಿದಲ್ಲಿ ದೇಹಕ್ಕೆ ಅಂಟಿಕೊಂಡ ಚರ್ಮ ರೋಗಾದಿಗಳು ಸೇರಿದಂತೆ ಸಂಕಷ್ಟಗಳು ದೂರವಾಗುತ್ತವೆ ಎನ್ನುವ ನಂಬಿಕೆ ಇದೆ.

ಶ್ರೀ ಕ್ಷೇತ್ರದಲ್ಲಿ ಗುರುವಾರ ರಾತ್ರಿ ಪಂಚಮಿ ರಥೋತ್ಸವ ನಡೆಯಲಿದ್ದು, ಶುಕ್ರವಾರ ಬೆಳಗ್ಗೆ 8.30ರ ಮುಹೂರ್ತದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ನಡೆಯಲಿದೆ. ದೇಶ ವಿದೇಶಗಳಿಂದ ಲಕ್ಷಾಂತರ ಮಂದಿ ಭಕ್ತರು ರಥೋತ್ಸವದಲ್ಲಿ ಭಾಗವಹಿಸುತ್ತಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications