ಕುಕ್ಕೆ ಸುಬ್ರಮಣ್ಯದಲ್ಲಿ ಮಡೆಸ್ನಾನದ ಬದಲಿಗೆ ಎಡೆಸ್ನಾನ
ಮಂಗಳೂರು, ಡಿಸೆಂಬರ್ 16 : ಕುಕ್ಕೆ ಸುಬ್ರಮಣ್ಯದಲ್ಲಿ ಚಂಪಾ ಷಷ್ಠಿ ಮಹೋತ್ಸವಕ್ಕೆ ಚಾಲನೆ ಸಿಕ್ಕಿದೆ. ಮಂಗಳವಾರ ಮಡೆಸ್ನಾನದ ಬದಲು ಎಡೆಸ್ನಾನ ಸೇವೆ ಮಾಡಲು ಭಕ್ತಾದಿಗಳಿಗೆ ಅವಕಾಶ ನೀಡಲಾಗಿತ್ತು. 130ಕ್ಕೂ ಅಧಿಕ ಭಕ್ತರು ಮಡೆಸ್ನಾನದಲ್ಲಿ ಪಾಲ್ಗೊಂಡಿದ್ದರು.
ಕುಕ್ಕೆ ಸುಬ್ರಮಣ್ಯದಲ್ಲಿ ಮಂಗಳವಾರದಿಂದ ಮೂರು ದಿನಗಳ ಕಾಲ 'ಎಡೆಸ್ನಾನ' ನಡೆಸಲು ಧಾರ್ಮಿಕ ದತ್ತಿ ಇಲಾಖೆ ಅವಕಾಶ ಕಲ್ಪಿಸಿದೆ. ಮಡೆ-ಮಡೆಸ್ನಾನವನ್ನು ಆಚರಿಸುದಕ್ಕೆ ಕೆಲವು ಸ್ವಾಮೀಜಿಗಳು, ಪ್ರಗತಿಪರ ಚಿಂತಕರಿಂದ ಆಕ್ಷೇಪ ಕೇಳಿಬಂದಿತ್ತು. [ಮಡೆಸ್ನಾನಕ್ಕೆ ಪರ್ಯಾಯ ವ್ಯವಸ್ಥೆ ಏನು? ಹೀಗೂ ಮಾಡಬಹುದು]

ಮಡೆ-ಮಡೆಸ್ನಾನ ಪದ್ಧತಿಯನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್ಗೆ ಶ್ರೀ ವೀರಭದ್ರ ಚೆನ್ನಮಲ್ಲ ಸ್ವಾಮೀಜಿ ಮತ್ತು ಇತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಮಡೆ-ಮಡೆಸ್ನಾನಕ್ಕೆ ಪರ್ಯಾಯವಾಗಿ ಎಡೆಸ್ನಾನ ಅಂದರೆ, ದೇವರ ನೈವೇದ್ಯ ಇರಿಸಲಾದ ಎಲೆಗಳ ಮೇಲೆ ಉರುಳು ಸೇವೆ ಕೈಗೊಳ್ಳಲು ಅವಕಾಶ ಕಲ್ಪಿಸುವುದಾಗಿ ಸರ್ಕಾರದ ವತಿಯಿಂದ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಲಾಗಿತ್ತು. [ಎಂಜಲೆಲೆಯ ಮೇಲೆ ಉರುಳಲು ಸಿದ್ಧ ಎನ್ನುತ್ತಿದ್ದಾರೆ ಮಲೆಕುಡಿಯರು]
ಸರ್ಕಾರ ಸಲ್ಲಿಸಿದ್ದ ಪ್ರಮಾಣ ಪತ್ರವನ್ನು ನ್ಯಾಯಾಲಯ ಮಾನ್ಯ ಮಾಡಿದ್ದು, ದೇವಸ್ಥಾನದಲ್ಲಿ ಯಾವುದೇ ಪಂಕ್ತಿ ಬೇಧವನ್ನು ಧರ್ಮ, ಮತ, ಜಾತಿ ಹಾಗೂ ಲಿಂಗ ತಾರತಮ್ಯದ ಆಧಾರದಲ್ಲಿ ಉತ್ತೇಜಿಸತಕ್ಕದ್ದಲ್ಲ ಅಥವಾ ಅನುಮತಿಸತಕ್ಕದ್ದಲ್ಲ ಎಂಬ ಷರತ್ತಿನೊಂದಿಗೆ ಮಡೆ-ಮಡೆಸ್ನಾದ ಬದಲಿಗೆ ಎಡೆಸ್ನಾನ ಸೇವೆಗೆ ಒಪ್ಪಿಗೆ ನೀಡಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ತಿಳಿಸಿದ್ದಾರೆ. [ದೇವಾಲಯದ ಆನ್ ಲೈನ್ ಸೇವೆ ಬುಕ್ ಮಾಡುವುದು ಹೇಗೆ?]
ಮಂಗಳವಾರದಿಂದ ಎಡೆಸ್ನಾನ ಆರಂಭವಾಗಿದ್ದು, ದೇವಾಲಯದಲ್ಲಿ ನಡೆದ ಮಹಾಪೂಜೆಯ ನಂತರ ಪ್ರಸಾದವನ್ನು ಗೋವುಗಳಿಗೆ ತಿನ್ನಲು ಕೊಟ್ಟು, ನಂತರ ಆ ಬಾಳೆ ಎಲೆಗಳ ಮೇಲೆ ಭಕ್ತರು ಹೊರಾಂಗಣದಲ್ಲಿ ಉರುಳು ಸೇವೆ ನಡೆಸಲು ಅವಕಾಶ ನೀಡಲಾಗಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications