ದ.ಕ ಜಿಲ್ಲೆಯಲ್ಲಿ ಈದುಲ್ ಫಿತ್ರ್ ಸಂಭ್ರಮ; ಮನೆಯಲ್ಲೇ ಆಚರಿಸಿದ ಮುಸ್ಲಿಂ ಬಾಂಧವರು
ಮಂಗಳೂರು, ಮೇ 13: ರಂಜಾನ್ ಉಪವಾಸ ವೃತಾಚರಣೆ ಕೊನೆಗೊಂಡ ಹಿನ್ನೆಲೆ ಇಂದು (ಗುರುವಾರ) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಮನೆಯಲ್ಲೇ ಆಚರಿಸಿದ್ದಾರೆ.
ಕೊರೊನಾ ಕಾರಣದಿಂದಾಗಿ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಿರ್ಬಂಧಿಸಲ್ಪಟ್ಟ ಹಿನ್ನೆಲೆ ಮನೆಯಲ್ಲಿಯೇ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ಕುಟುಂಬಸ್ಥರ ಜೊತೆಗೂಡಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಪರಸ್ಪರ ಶುಭಾಶಯವನ್ನು ವಿನಿಮಯ ಮಾಡಿಕೊಂಡರು.
ಲಾಕ್ಡೌನ್ ನಿಂದಾಗಿ ಈದ್ ಹಬ್ಬದ ಶಾಪಿಂಗ್ ನಿಂದ ದೂರವುಳಿದಿದ್ದ ಮುಸ್ಲಿಮರು, ಜಿಲ್ಲಾ ಖಾಝಿ ಅವರ ಕರೆಯಂತೆ ಸರಳವಾಗಿ ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕೊರೊನಾ ಮುಕ್ತ ಭಾರತಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆಯೂ ಧಾರ್ಮಿಕ ನಾಯಕರು ಕರೆ ನೀಡಿದ್ದಾರೆ.

ಮಸೀದಿಗಳಲ್ಲಿಯೂ ಜನ ಸೇರಿದಂತೆ ಮುಸ್ಲಿಂ ಧರ್ಮ ಗುರುಗಳು ಕರೆ ನೀಡಿದ ಹಿನ್ನಲೆಯಲ್ಲಿ ಎಲ್ಲೂ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಮಾಡಿರಲಿಲ್ಲ. ಮಸೀದಿಗಳ ಮುಂದೆ ಕೊರೊನಾ ಹಿನ್ನೆಲೆಯಲ್ಲಿ ಪ್ರವೇಶವನ್ನು ನಿರಾಕರಿಸಲಾಗಿದೆ ಎಂಬ ಬೋರ್ಡ್ ಹಾಕಲಾಗಿದೆ. ಮನೆಗಳಲ್ಲೇ ದಾನ-ಧರ್ಮ ಪಾಲಿಸುವಂತೆ ಮುಸ್ಲಿಂ ಧರ್ಮ ಮುಖಂಡರು ಕರೆ ನೀಡಿದ ಹಿನ್ನಲೆಯಲ್ಲಿ ಮನೆಯಲ್ಲೇ ಹಬ್ಬ ಆಚರಿಸಲಾಗಿದೆ.

ಅಲ್ಲದೇ ಕುಟುಂಬಸ್ಥರ ಮನೆಗೆ ತೆರಳಿ ಹಬ್ಬದ ಶುಭಾಶಯ ಸಲ್ಲಿಸುವ ಬದಲು ಸಾಮಾಜಿಕ ಜಾಲತಾಣದ ಮೂಲಕ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಪರಸ್ಪರ ಆಲಿಂಗನ ಮಾಡಿ ಶುಭಾಶಯ ಸಲ್ಲಿಸುವ ಪ್ರಕ್ರಿಯೆಯಿಂದಲೂ ದೂರವಿರುವಂತೆ ಸೂಚಿಸಲಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications