ವಾಯುಸೇನೆಯಲ್ಲಿದ್ದ ಕರ್ನಾಟಕದ ಯೋಧ ಏಕನಾಥ ಶೆಟ್ಟಿ ಕಣ್ಮರೆಯಾಗಿ 5 ವರ್ಷ
ಮಂಗಳೂರು, ಜುಲೈ 22: ಕರುನಾಡಿನ ಹೆಮ್ಮೆಯ ಯೋಧ, ನಿವೃತ್ತಿಯ ಬಳಿಕವೂ ದೇಶ ಸೇವೆಯ ತುಡಿತದಿಂದ ಸೈನ್ಯದಲ್ಲಿ ಮುಂದುವರಿದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ನಿವಾಸಿ ಸುಬೇದಾರ್ ಏಕನಾಥ್ ಶೆಟ್ಟಿ ಕಣ್ಮರೆಯಾಗಿ ಇಂದಿಗೆ ಐದು ವರ್ಷಗಳಾಗಿವೆ.
2016 ಜುಲೈ 22ರಂದು ಚೆನೈನ ತಂಬಾರಮ್ ಏರ್ಬೇಸ್ನಿಂದ ಅಂಡಮಾನಿನ ಫೋರ್ಟ್ಬ್ಲೇರ್ ನೆಲೆಗೆ ತೆರಳುತ್ತಿದ್ದ ಭಾರತೀಯ ವಾಯುಸೇನೆಯ ಎನ್ -32 ವಿಮಾನ ನಿಗೂಢವಾಗಿ ಕಣ್ಮರೆಯಾಗಿತ್ತು. ವಿಮಾನದಲ್ಲಿದ್ದ 29 ಮಂದಿ ಯೋಧರ ಪೈಕಿ ಕರ್ನಾಟಕದ ಏಕೈಕ ಯೋಧ ಏಕನಾಥ ಶೆಟ್ಟಿ ಕೂಡಾ ಕಣ್ಮರೆಯಾಗಿದ್ದರು.
ನಾಪತ್ತೆಯಾದ ಸೇನಾ ವಿಮಾನದ ಪತ್ತೆಗಾಗಿ ನಾಸಾ ಸೇರಿದಂತೆ ಭಾರತೀಯ ಮೂರೂ ಸೇನಾ ವಿಭಾಗಗಳು ಸತತವಾಗಿ ಹುಡುಕಾಟ ಮಾಡಿದ್ದವು. ಆದರೆ ಈ ಕ್ಷಣದವರೆಗೆಯೂ ಸಮುದ್ರದಲ್ಲಿ ಯೋಧರ ಮೃತ ದೇಹಗಳಾಗಲೀ, ವಿಮಾನದ ಕುರುಹುಗಳಾಗಲೀ ಕಂಡು ಬಂದಿಲ್ಲ. ಹೀಗಾಗಿ ಭಾರತ ಸರ್ಕಾರ 29 ಯೋಧರೂ ಮೃತಪಟ್ಟಿದ್ದಾರೆ ಎಂದು ಘೋಷಣೆ ಮಾಡಿದೆ.

1985ರಲ್ಲಿ ಭಾರತೀಯ ಭೂ ಸೇನೆಗೆ ಸೇರ್ಪಡೆಯಾದ ಏಕನಾಥ ಶೆಟ್ಟಿ, ಎಮ್ಆರ್ಸಿಗೆ ಸೇರಿಕೊಂಡಿದ್ದರು. ಸೇನೆಯಲ್ಲಿ ಸುಬೇದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. 1986ರಲ್ಲಿ ಶ್ರೀಲಂಕಾದಲ್ಲಿ ಭಾರತೀಯ ಶಾಂತಿಪಾಲನಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಅದಲ್ಲದೆ ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಅರುಣಾಚಲ ಪ್ರದೇಶ ಮುಂತಾದೆಡೆ ಸೇವೆ ಸಲ್ಲಿಸಿದ್ದರು.

2009ರಲ್ಲಿ ಸೇವೆಯಿಂದ ನಿವೃತ್ತರಾದರು. ಆದರೆ ದೇಶ ಸಸೇವೆಗಾಗಿ ಯೋಧ ಏಕನಾಥ ಶೆಟ್ಟಿ ನಿವೃತ್ತರಾದ ಬಳಿಕವೂ ವಾಯುಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಏಕನಾಥ್ ಶೆಟ್ಟಿ ಕಣ್ಮರೆಯಾಗಿ 5 ವರ್ಷವಾದ ಹಿನ್ನಲೆಯಲ್ಲಿ ಏಕನಾಥ್ ಶೆಟ್ಟಿ ಪತ್ನಿ ಜಯಂತಿ ಶೆಟ್ಟಿ ಮತ್ತು ಕುಟುಂಬಸ್ಥರು ಗಿಡ ನೆಟ್ಟು ನೆನಪನ್ನು ಮತ್ತೆ ಅಜರಾಮರವಾಗಿಸಿಕೊಂಡಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications