'ನೀತಿ ಸಂಹಿತೆಯ ಹೆಸರಿನಲ್ಲಿ ಅಧಿಕಾರಿಗಳು ದರ್ಬಾರ್ ನಡೆಸುತ್ತಿದ್ದಾರೆ'
ಮಂಗಳೂರು, ಮಾರ್ಚ್ 13:ಚುನಾವಣಾ ನೀತಿ ಸಂಹಿತೆಯ ಹೆಸರಿನಲ್ಲಿ ಅಧಿಕಾರಿಗಳು ದರ್ಬಾರ್ ನಡೆಸಲು ಅವಕಾಶ ನೀಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕಿಡಿಕಾರಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀತಿ ಸಂಹಿತೆಯ ಹೆಸರಿನಲ್ಲಿ ಕೆಲವು ಅಧಿಕಾರಿಗಳು ಜನ ಸಾಮಾನ್ಯರ ಕಾರ್ಯಕ್ರಮಗಳಿಗೆ ಅಡ್ಡಿಪಡಿಸುತಿದ್ದಾರೆ. ಅಧಿಕಾರಿಗಳು ತಮ್ಮ ಮಿತಿಯೊಳಗೆ ಕಾರ್ಯನಿರ್ವಹಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ನಡೆಯುವ ಸಾಮಾಜಿಕ, ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡಲು ಅಲೆದಾಡಿಸುವುದು, ರಾಜಕಾರಣಿಗಳು, ಜನಪ್ರತಿನಿಧಿಗಳನ್ನು ವೇದಿಕೆಗೆ ಕರೆಯಬಾರದು ಎಂದು ಒತ್ತಾಯಿಸುವುದು, ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಹಾಕಬಾರದು ಎಂದು ಸೂಚಿಸುವುದು, ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಲು ಅಡ್ಡಿಪಡಿಸುತ್ತಿರುವ ಹಲವಾರು ದೂರುಗಳು ಬಂದಿವೆ ಎಂದು ಡಿಸೋಜಾ ಆರೋಪಿಸಿದರು.

ಚುನಾವಣೆ ಎಂಬುದು ತುರ್ತುಪರಿಸ್ಥಿತಿ ಎಂಬಂತೆ ಅಧಿಕಾರಿಗಳು ಬಿಂಬಿಸುವುದು ಸರಿಯಲ್ಲ. ಚುನಾವಣೆ ಎಂಬುದು ಸಾರ್ವತ್ರಿಕ ಹಬ್ಬವಾಗಿದೆ. ಜನರು ತಮ್ಮ ಪಾತ್ರ ಏನು ಎಂಬುದನ್ನು ಪರಸ್ಪರ ಸಂವಹನ ನಡೆಸುವ ಮುಕ್ತ ಅವಕಾಶ ಇರಬೇಕು. ನೀತಿ ಸಂಹಿತೆಯ ಹೆಸರಿನಲ್ಲಿ ಜನರ ಶೋಷಣೆ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಡಿಸೋಜಾ ತಿಳಿಸಿದರು.
-
"ನಾನು ಔಟ್ ಆಗಿದ್ದಕ್ಕೇ ತುಂಬಾ ಖುಷಿಯಾಯ್ತು": ಸಿಎಸ್ಕೆ ಎದುರು ರನ್ ಮಳೆ ಹರಿಸಿದ ಬಳಿಕ ಪಡಿಕ್ಕಲ್ ಹೀಗಂದಿದ್ದೇಕೆ? -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
Silk Board: ಹಳದಿ-ನೀಲಿ ಮೆಟ್ರೋ ಲೈನ್ ಪ್ರಯಾಣಿಕರಿಗಾಗಿ 'ಟ್ರಾವೆಲೇಟರ್-ಕನೆಕ್ಟಿಂಗ್ ವಾಕ್ವೇ ಸಂಪರ್ಕ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ












Click it and Unblock the Notifications