ದಕ್ಷಿಣ ಕನ್ನಡದ ಗಡಿ ಭಾಗದಲ್ಲಿ ಸುತ್ತಾಡಿ ಭಯ ಹುಟ್ಟಿಸಿದ ಒಂಟಿ ಸಲಗ
ಮಂಗಳೂರು, ನವೆಂಬರ್. 06: ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದ ಕಾಡಂಚಿನಲ್ಲಿ ಒಂಟಿ ಸಲಗ ಸುತ್ತಾಡುತ್ತಿದ್ದು, ಪರಿಸರದ ಜನರಲ್ಲಿ ಆತಂಕ ಹುಟ್ಟಿಸಿದೆ. ಕೆಲದಿನಗಳ ಹಿಂದೆ ಹಗಲಲ್ಲಿ ಕಾಣಿಸಿಕೊಂಡಿದ್ದ ಈ ಕಾಡಾನೆ ಭಾನುವಾರ ನ.04 ರಾತ್ರಿ ಕಾಣಿಸಿಕೊಂಡು ಸ್ಥಳೀಯರನ್ನು ಭಯಭೀತರನ್ನಾಗಿಸಿತ್ತು.
ಚಾರ್ಮಾಡಿ ಡ್ಯಾಂ ಬಳಿ ಈ ಕಾಡಾನೆ ಪ್ರತ್ಯಕ್ಷವಾಗಿದ್ದು, ಎರಡು ದಿನಗಳ ಹಿಂದೆ ಇದೇ ಒಂಟಿ ಸಲಗ ಹಗಲಲ್ಲಿ ಕಾಣಿಸಿಕೊಂಡು ನಂತರ ಕಾಡು ಸೇರಿತ್ತು. ಆದರೆ ಈಗ ಮತ್ತೆ ಈ ಕಾಡನೆಯ ಕಾಟ ಆರಂಭವಾಗಿದೆ.
ನವೆಂಬರ್ 02 ರಂದು ಹಾಡಹಗಲೇ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಭೀತಿ ಹುಟ್ಟಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಎಂಬಲ್ಲಿ ನಡೆದಿತ್ತು. ಕಾಡಿನಿಂದ ಹೊರಬಂದ ಒಂಟಿ ಸಲಗ ಇಲ್ಲಿಯ ತೋಟಕ್ಕೆ ನುಗ್ಗಿತ್ತು. ಆದರೆ ಕಾಡಾನೆ ಬಂದಿರುವುದು ಜನರ ಗಮನಕ್ಕೆ ಬಂದಿರಲಿಲ್ಲ.

ತೋಟದ ಅಕ್ಕಪಕ್ಕದ ಮನೆಯ ನಾಯಿಗಳ ಬೊಗಳುವಿಕೆಯನ್ನು ಕೇಳಿ ಸ್ಥಳೀಯರು ತೋಟಕ್ಕೆ ಬಂದು ನೋಡಿದಾಗ ಒಂಟಿಸಲಗ ತೋಟದಲ್ಲಿ ಸುತ್ತಾಡುತ್ತಿರುವುದು ಕಂಡುಬಂದಿತ್ತು.
ಈ ಹಿನ್ನೆಲೆಯಲ್ಲಿ ಇಂದಬೆಟ್ಟು ಗ್ರಾಮದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಆದರೆ ಕಾಡಾನೆ ಮಾತ್ರ ತೋಟ ಹಾಗೂ ಜನರಿಗೆ ಯಾವುದೇ ರೀತಿ ಹಾನಿ ಉಂಟು ಮಾಡದೆ ವಾಪಸ್ಸು ಕಾಡಿಗೆ ತೆರಳಿತ್ತು.

ಇತ್ತೀಚೆಗೆ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದವು . ಆನೆಗಳ ಹಿಂಡು ಸ್ಥಳೀಯರ ತೋಟಕ್ಕೆ ದಾಳಿ ನಡೆಸಿ ಅಪಾರ ಬೆಳೆ ಹಾನಿ ಮಾಡಿತ್ತು. 5 ಆನೆಗಳ ಹಿಂಡು ಸುಮಾರು 50ಕ್ಕೂ ಹೆಚ್ಚು ಅಡಕೆ ಮರಗಳನ್ನು ನೆಲಕ್ಕುರುಳಿಸಿದ್ದವು. ಅಲ್ಲದೇ ಸುಮಾರು 100 ಬಾಳೆ ಗಿಡ ಹಾಗೂ ಕೆಲವು ತೆಂಗಿನ ಗಿಡಗಳನ್ನು ನಾಶಪಡಿಸಿದ್ದವು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications