ದಕ್ಷಿಣ ಕನ್ನಡದ ಎಂಡೋ ಪೀಡಿತರಿಗೆ ಉಚಿತ ಚಿಕಿತ್ಸೆ
ಮಂಗಳೂರು, ಜೂ.11 : ಎಂಡೋಸಲ್ಫಾನ್ ಪೀಡಿತರಿಗೆ ಉಚಿತವಾಗಿ ಸೂಕ್ತ ಚಿಕಿತ್ಸೆ ನೀಡಲು ದಕ್ಷಿಣ ಕನ್ನಡ ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಶೀಘ್ರದಲ್ಲೇ ಸರ್ಕಾರ ಜಿಲ್ಲೆಯ ಇನ್ನೂ 18 ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್. ಖಾಸಗಿ ಆಸ್ಪತ್ರೆಗಳೊಂದಿಗೆ ಮಾಡಿಕೊಂಡ ಒಪ್ಪಂದದ ಪತ್ರವನ್ನು ವಿನಿಮಯ ಮಾಡಿಕೊಂಡರು. ಎಂಡೋಸಲ್ಫಾನ್ ಪೀಡಿತರಿಗೆ ಚಿಕಿತ್ಸೆ ನೀಡಲು ಸರ್ಕಾರ ಮಾದರಿ ಕಾರ್ಯಕ್ರಮ ಹಾಕಿಕೊಂಡಿದ್ದು, ಅದರ ಭಾಗವಾಗಿ ಈ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಮೂಲಕ ಅನಾರೋಗ್ಯ ಪೀಡಿತರಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ಕಾರ್ಯವನ್ನು ಸರ್ಕಾರ ಮಾಡಲಿದೆ ಎಂದು ಖಾದರ್ ಹೇಳಿದರು.
ಮೊದಲ ಹಂತದಲ್ಲಿ ಕೆ.ಎಂ.ಸಿ, ಎ.ಜೆ.ಶ್ರೀನಿವಾಸ್, ಕ್ಷೇಮ, ಫಾದರ್ ಮುಲ್ಲರ್ ಹಾಗೂ ಯೆನಪೋಯ ಮೆಡಿಕಲ್ ಕಾಲೇಜುಗಳು ಹಾಗೂ ಒಮೇಗಾ ಆಸ್ಪತ್ರೆ ಸರ್ಕಾರ ಒಪ್ಪಂದ ಮಾಡಿಕೊಂಡಿದ್ದು, ಶೀಘ್ರದಲ್ಲೇ ದಕ್ಷಿಣ ಜಿಲ್ಲೆಯ 18 ಖಾಸಗಿ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವರು ಹೇಳಿದರು. ಮತ್ತಷ್ಟು ವಿವರ ಚಿತ್ರಗಳಲ್ಲಿ

ಖಾಸಗಿ ಆಸ್ಪತ್ರೆಗಳೊಂದಿಗೆ ಸರ್ಕಾರ ಒಪ್ಪಂದ
ದಕ್ಷಿಣ ಕನ್ನಡ ಜಿಲ್ಲೆಯ ಎಂಡೋಸಲ್ಫಾನ್ ಪೀಡಿತರಿಗೆ ಉಚಿತವಾಗಿ ಸೂಕ್ತ ಚಿಕಿತ್ಸೆ ನೀಡಲು ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳೊಂದಿಗೆ ಸರ್ಕಾರ ಒಪ್ಪಂದ ಮಾಡಿಕೊಂಡಿದೆ. ಶೀಘ್ರದಲ್ಲೇ ಇನ್ನೂ 18 ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದೇವೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ನಿಗದಿತ ಸ್ಥಳಗಳಲ್ಲಿ ಚಿಕಿತ್ಸೆ
ಎಂಡೋ ಪೀಡಿತರಿಗೆ ತೆರೆಯಲಾದ ಪಾಲನಾ ಕೇಂದ್ರಕ್ಕೆ ಬಂದು ಚಿಕಿತ್ಸೆ ಪಡೆಯಬಹುದು. ಅಲ್ಲಿಗೆ ಬರಲು ಸಾಧ್ಯವಾಗದಿದ್ದರೆ ಸರ್ಕಾರಿ ಆಂಬ್ಯುಲೆನ್ಸ್ ಮೂಲಕ ನಿಗದಿತ ಆಸ್ಪತ್ರೆಗಳಲ್ಲಿ ಬಂದು ಚಿಕಿತ್ಸೆ ಪಡೆಯಬಹುದು ಎಂದು ಆರೋಗ್ಯ ಸಚಿವರು ವಿವರಣೆ ನೀಡಿದರು.

ಸಮಿತಿ ರಚನೆ ಮಾಡಲಾಗಿದೆ
ಎಂಡೋ ಪೀಡಿತರ ಚಿಕಿತ್ಸೆ ಹಾಗೂ ಇನ್ನಿತರ ವಿಷಯದಲ್ಲಿ ಸಮಸ್ಯೆಗಳು ಉಂಟಾದರೆ ಅದನ್ನು ಬಗೆಹರಿಸಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಯಾವುದೇ ಸಂದೇಹಗಳನ್ನು ಜನರು ಇಲ್ಲಿ ಪರಿಹರಿಸಿಕೊಳ್ಳಬಹುದು ಎಂದು ಯು.ಟಿ.ಖಾದರ್ ಹೇಳಿದರು.

ಮನೋ ರೋಗಿಗಳಿಗೆ ಪುನಃಶ್ಚೇತನ ಕೇಂದ್ರ
ರಾಜ್ಯದಲ್ಲಿ ಮನೋರೋಗಿಗಳಿಗೆ ಅನುಕೂಲವಾಗುವಂತೆ ಎಲ್ಲ ಜಿಲ್ಲೆಗಳಲ್ಲಿ ತಲಾ ಒಂದೊಂದು ಪುನಃಶ್ಚೇತನ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ರಾಜ್ಯದ ಮೂರು ಜಿಲ್ಲೆಗಳಲ್ಲಿ ಈಗಾಗಲೇ ಕೇಂದ್ರ ತೆರೆಯಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ದೇರಳಕಟ್ಟೆಯ ಕ್ಷೇಮ ಆಸ್ಪತ್ರೆಯಲ್ಲಿ ಕೇಂದ್ರ ತೆರೆಯಲಾಗಿದೆ ಎಂದರು.

ಹೇಗಿರುತ್ತದೆ ಪುನಃಶ್ಚೇತನ ಕೇಂದ್ರ
ಈ ಪುನಃಶ್ಚೇತನ ಕೇಂದ್ರದಲ್ಲಿ 20 ಬೆಡ್ಗಳನ್ನು ಪ್ರತ್ಯೇಕವಾಗಿ ಮನೋ ರೋಗಿಗಳಿಗೆ ಮೀಸಲಿಡುವಂತೆ ಸೂಚನೆ ನೀಡಲಾಗಿದೆ. ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಈ ಕೇಂದ್ರದಲ್ಲಿ ಮಾಡಲಾಗಿದೆ. ಪ್ರತಿ ಕೇಂದ್ರಗಳಿಗೆ ಸರಕಾರ 1.60 ಲಕ್ಷ ರೂ. ವೆಚ್ಚ ಮಾಡಲಿದೆ. ವೈದ್ಯರು ಮತ್ತು ಎಲ್ಲಾ ಸೌಲಭ್ಯಗಳ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಖಾದರ್ ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications