ಎಂಡೋಸಲ್ಫ್ರಾನ್ ಸಂತ್ರಸ್ತರಿಗೆ ಏಪ್ರಿಲ್ ನಿಂದ ಪೌಷ್ಟಿಕ ಆಹಾರ
ಮಂಗಳೂರು, ಡಿಸೆಂಬರ್ 9: ಎಂಡೋಸಲ್ಫಾನ್ ಸಂತ್ರಸ್ತರಿಗೆ ಪರಿಹಾರ ನೀಡುವ ಸಲುವಾಗಿ ಮುಂದಿನ 2017ರ ಏಪ್ರಿಲ್ನಿಂದ ಪೌಷ್ಟಿಕಾಂಶವಿರುವ ಆಹಾರವನ್ನು ಒದಗಿಸಲು ಸಮೀಕ್ಷೆ ನಡೆಸಿ ಆಹಾರ ಪಟ್ಟಿ ಸಿದ್ದಪಡಿಸಲಾಗಿದೆ.
ಪೌಷ್ಟಿಕ ಆಹಾರದಲ್ಲಿ ಮೀನಿನ ಪದಾರ್ಥ(ಫಿಶ್ ಕರಿ), ಮೊಟ್ಟೆ, ತರಕಾರಿ ಇಡ್ಲಿ, ದವಸ ದಾನ್ಯಗಳಿಂದ ಮಾಡಿದ ದೋಸೆ, ರಾಗಿ ಮತ್ತು ಸೇಬು, ಪಪ್ಪಾಯಿ, ಕಲ್ಲಂಗಡಿಗಳು ಇವೆ.[ಸರ್ಕಾರ ಅನುಮತಿ ಕೊಟ್ಟರೆ ಬೀದರ್ ನಲ್ಲಿ ಪತಂಜಲಿ ಫುಡ್ ಪಾರ್ಕ್]

ದ.ಕ ಜಿಲ್ಲಾ ಆರೋಗ್ಯ ಇಲಾಖೆ ಸಹಯೋಗದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗೆ ಡೈಯೆಟೇಶಿಯನ್ ಜೊತೆ ಸಮಾಲೋಚನೆ ನಡೆಸಿ ಜಿಲ್ಲೆಯಲ್ಲಿರುವ ಎಂಡೋಸಲ್ಫಾನ್ ಆರೋಗ್ಯ ಕೇಂದ್ರಗಳಾದ ಕೊಕ್ಕಡ ಮತ್ತು ಕೊಯ್ಲಾ ಹಳ್ಳಿಗಳಲ್ಲಿ ಆರೈಕೆ ಕೇಂದ್ರಗಳಲ್ಲಿ ಈ ಮೇಲೆ ತಿಳಿಸಲಾದ ಪೌಷ್ಟಿಕಾಂಶವಿರುವ ಆಹಾರ ಪಟ್ಟಿಯನ್ನು 2017ರ ಏಪ್ರಿಲ್ ತಿಂಗಳಿನಿಂದ ಅನುಸರಿಸುವಂತೆ ಸಮೀಕ್ಷೆ ನಡೆಸಲಾಗಿದೆ.
ಪ್ರಸ್ತುತವಾಗಿ ಈ ಎರಡು ಆರೈಕೆ ಕೇಂದ್ರಗಳು ಈಗ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಅಂತರ್ಗತ ಒಪ್ಪಂದದ ಮೇರೆಗೆ ಕಾರ್ಯನಿರ್ವಹಿಸುತ್ತಿದೆ. ಈ ಒಪ್ಪಂದ ಮುಂದಿನ ಮಾರ್ಚ್ ತಿಂಗಳಿನಲ್ಲಿ ಕೊನೆಗೊಳ್ಳಲಿದ್ದು ನಂತರ ಏಪ್ರಿಲ್ ತಿಂಗಳಿನಿಂದ ಎಂಡೋಸಲ್ಫಾನ್ ಸಂತ್ರಸ್ತರಿಗೆ ಅಗತ್ಯವಿರುವ ಪೌಷ್ಟಿಕಾಂಶಗಳನ್ನು ಒದಗಿಸಲಾಗುವುದು.[ಅಂಚೆ ಇಲಾಖೆಯಿಂದ ಬೇಳೆಕಾಳು ಮಾರಾಟ]
ಕೇವಲ ಆಹಾರ ಪಟ್ಟಿ ಮಾತ್ರವಲ್ಲದೆ ಈ ಎರಡು ಆರೈಕೆ ಕೇಂದ್ರಗಳಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗೆ ಸಾರಿಗೆ ಸೌಲಭ್ಯ ಮತ್ತು ಸೂಕ್ತ ತರಬೇತಿ ನೀಡುವುದಾಗಿ ಎಂಡೋಸಲ್ಫಾನ್ ಕಾರ್ಯಕರ್ತರು ತಿಳಿಸಿದ್ದಾರೆ. ಇಂತಹ ಸೌಲಭ್ಯದ ಅನುಮೋದನೆಯನ್ನು 2011ರಲ್ಲಿ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿರಲಿಲ್ಲ. ಇದೇ ವರ್ಷದಲ್ಲಿ ರು 1.25ಕೋಟಿ. ಎಂಡೋಸಲ್ಫಾನ್ ಸಂತ್ರಸ್ತರ ಅಭಿವೃದ್ಧಿಗಾಗಿ ಮೀಸಲಿಡಲಾಗಿತ್ತು.
ಆದರೇ ಈ ಬಾರಿ ಏಪ್ರಿಲ್ ತಿಂಗಳಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾರ್ಗದರ್ಶನದಂತೆ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಶಿಕ್ಷಕರನ್ನೂ ನೇಮಕ ಮಾಡಲಾಗುವುದು.
ಈ ಕುರಿತು ಮಾಹಿತಿ ನೀಡಿದ ಜಿಲ್ಲೆಯ ನೋಡಲ್ ಅಧಿಕಾರಿ ಅರುಣ್ ಕುಮಾರ್ ಎಸ್ ಬಿ, ಆಹಾರ ಪಟ್ಟಿಯಲ್ಲಿ ಸೂಚಿಸಲಾದ ಪೌಷ್ಟಿಕಾಂಶಗಳನ್ನು ಅತೀ ಶೀಘ್ರದಲ್ಲಿ ಬಿಡುಗಡೆ ಮಾಡುವುದು ಮಾತ್ರವಲ್ಲದೆ ಮುಂದಿನ ಏಪ್ರಿಲ್ ತಿಂಗಳಲ್ಲಿ ಜಿಲ್ಲೆಯ ಎರಡು ಆರೈಕೆ ಕೇಂದ್ರಗಳಲ್ಲಿ ಸರಿಯಾಗಿ ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು. ಇನ್ನೂ ಜಿಲ್ಲಾಧಿಕಾರಿ ಕೆ. ಜಗದೀಶ್ ಅವರು ಶೀಘ್ರದಲ್ಲೇ ಈ ಒಪ್ಪಂದಕ್ಕೆ ಅನುಮೋದನೆ ನೀಡಲಿರುವರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications