ಕಟ್ಟಡದಿಂದ ಹಾರಿ ಮಂಗಳೂರಿನ ಎನ್ಐಟಿ-ಕೆ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು, ನವೆಂಬರ್ 17 : ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯಾ ಸರಣಿ ಮುಂದುವರೆದಿದೆ. ಪರೀಕ್ಷೆ ಬರೆಯಲು ಅವಕಾಶ ನಿರಕಾರಿಸಿದ್ದಕ್ಕಾಗಿ ಮನನೊಂದು ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿರುವ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ಐಟಿ-ಕೆ) ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಇದರಿಂದ ರೊಚ್ಚಿಗೆದ್ದಿರುವ ವಿದ್ಯಾರ್ಥಿಗಳು ಭಾರೀ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

Engineering student commits suicide at NIT-K in Mangaluru

ಬಿಟೆಕ್ ತೃತೀಯ ವರ್ಷದ ಮೆಕ್ಯಾನಿಕಲ್ ವಿದ್ಯಾರ್ಥಿ ಮುಂಬೈ ಮೂಲದ ಆನಂದ್ ಪಾಠಕ್ (21) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಸೋಮವಾರದ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗಲು ಆನಂದ ಪಾಠಕ್ ಗೆ ಕಾಲೇಜಿನ ಉಪನ್ಯಾಸಕರು ಅವಕಾಶ ನಿರಾಕರಿಸಿದ್ದರು. ಅಲ್ಲದೆ, ಈ ವಿಚಾರದಲ್ಲಿ ಶನಿವಾರ ಮಧ್ಯಾಹ್ನ ವಿದ್ಯಾರ್ಥಿಯನ್ನು ಕರೆದು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಮನನೊಂದ ವಿದ್ಯಾರ್ಥಿ ಆನಂದ್ ಪಾಠಕ್, ಆರನೇ ಮಹಡಿಯಿಂದ ಕೆಳಕ್ಕೆ ಹಾರಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Engineering student commits suicide at NIT-K in Mangaluru

ಘಟನೆ ಖಂಡಿಸಿ ನೂರಾರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ರಾತ್ರಿವರೆಗೂ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆರೋಪಿತ ಉಪನ್ಯಾಸಕರನ್ನು ಸಸ್ಪೆಂಡ್ ಮಾಡುವಂತೆ ಒತ್ತಾಯಿಸಿದ್ದಾರೆ. ಕಳೆದ ಒಂದು ವರ್ಷದಲ್ಲಿ ಕಾಲೇಜು ಕ್ಯಾಂಪಸ್ ನಲ್ಲಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಕಾಲೇಜಿನ ಆಡಳಿತ ವರ್ಗ ಈ ವಿಚಾರ ಹೊರಬರದಂತೆ ಮುಚ್ಚಿ ಹಾಕಿದೆಯೆಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಘಟನೆಯ ಕುರಿತು ಮಂಗಳೂರಿನ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+