ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಂತೂ ಪತ್ತೆಯಾದನು ಇಂಜಿನಿಯರಿಂಗ್ ವಿದ್ಯಾರ್ಥಿ ವಿನಾಯಕ್, ಎಲ್ಲಿ ಗೊತ್ತಾ?

|
Google Oneindia Kannada News

ಮಂಗಳೂರು, ಡಿಸೆಂಬರ್.02: ಮಾಜಿ ಪೊಲೀಸ್ ಅಧಿಕಾರಿ ಮದನ್ ಅವರೊಂದಿಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ವಿನಾಯಕ್ ಈಗ ಪತ್ತೆಯಾಗಿರುವ ಸುದ್ದಿ ಬಂದಿದೆ.

ಕೇರಳದ ಕೊಚ್ಚಿನ್ ನಲ್ಲಿದ್ದ ವಿನಾಯಕ್ ನನ್ನು ಪತ್ತೆ ಮಾಡಿ ಪೊಲೀಸರು ಮಂಗಳೂರಿಗೆ ಕರೆತಂದಿದ್ದಾರೆ. ಹೆತ್ತವರ ಬಗ್ಗೆ ಬೇಸರಗೊಂಡು ಕೊಚ್ಚಿನ್ ಗೆ ತೆರಳಿದ್ದಾಗಿ ವಿನಾಯಕ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಮಾಜಿ ಪಿಎಸ್ಐ ಮದನ್ ಜೊತೆಗಿದ್ದ ಯುವಕ ನಿಗೂಢವಾಗಿ ಕಣ್ಮರೆ! ಮಾಜಿ ಪಿಎಸ್ಐ ಮದನ್ ಜೊತೆಗಿದ್ದ ಯುವಕ ನಿಗೂಢವಾಗಿ ಕಣ್ಮರೆ!

ಇತ್ತೀಚೆಗೆ ವಿನಾಯಕ್ ಪೋಷಕರು ಮಗನನ್ನು ಹುಡುಕಿ ತರುವಂತೆ ಹೈಕೋರ್ಟಿಗೆ ಹೆಬಿಯಸ್ ಕಾರ್ಪಸ್ ಅರ್ಜಿ ಹಾಕಿದ್ದರು.

Engineering student Vinayak is now found

ಅಷ್ಟೇ ಅಲ್ಲ, ಅ.8ರಂದು ವಿನಾಯಕ್ ದಿಢೀರ್ ಆಗಿ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಮದನ್ ಬಗ್ಗೆ ಸಂಶಯಗೊಂಡು ಉರ್ವಾ ಠಾಣೆಗೆ ವಿನಾಯಕ್ ಪೋಷಕರು ದೂರು ನೀಡಿದ್ದರು. ಆ ನಂತರ ಹೈಕೋರ್ಟ್ ಚಾಟಿ ಬೀಸಿದ್ದರಿಂದ ಈ ಪ್ರಕರಣ ಪೊಲೀಸರ ಕುತ್ತಿಗೆ ಕಟ್ಟಿಕೊಂಡಿತ್ತು.

ಮಂಗಳೂರು ಮಾಜಿ ಪೊಲೀಸ್ ಅಧಿಕಾರಿ ಜೊತೆಗಿದ್ದ ಯುವಕನ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಮಂಗಳೂರು ಮಾಜಿ ಪೊಲೀಸ್ ಅಧಿಕಾರಿ ಜೊತೆಗಿದ್ದ ಯುವಕನ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

ಕಳೆದ ಎರಡು ದಿನಗಳ ಹಿಂದೆಯಷ್ಟೇ ಮದನ್ ಮಹಿಳೆಯೊಬ್ಬರ ಜೊತೆ ಹೊಂದಿದ್ದ ಸಂಬಂಧ ತಮ್ಮ ಮಗನ ನಾಪತ್ತೆಗೆ ಪ್ರಮುಖ ಕಾರಣ ಎಂದು ವಿನಾಯಕನ ಪೋಷಕರು ಆರೋಪಿಸಿದ್ದರು. ಅದರ ಬೆನ್ನಲ್ಲೇ ಇದೀಗ ನಾಪತ್ತೆಯಾಗಿದ್ದ ವಿನಾಯಕ್ ಪತ್ತೆಯಾಗಿದ್ದು, ಆತ ಪೋಷಕರ ಮೇಲೆಯೇ ಆರೋಪ ಮಾಡಿರುವುದು ಆಶ್ಚರ್ಯಕ್ಕೆ ಎಡೆ ಮಾಡಿದೆ.

English summary
Missing Mangalore engineering student Vinayak is now found.Now the police have brought him to Mangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X