ಮಂಗಳೂರು ಪಿಲಿಕುಳ ನಿಸರ್ಗಧಾಮದ ಪ್ರವೇಶ ಶುಲ್ಕ ಹೆಚ್ಚಳ
ಮಂಗಳೂರು, ಆಗಸ್ಟ್ 2: ಪಿಲಿಕುಳ ನಿಸರ್ಗಧಾಮದ ಜೈವಿಕ ಉದ್ಯಾನದ ಪ್ರವೇಶ ಶುಲ್ಕ ಹೆಚ್ಚಳ ಮಾಡಲಾಗಿದೆ.
ಇನ್ನು ಮುಂದೆ ಹಿರಿಯರಿಗೆ ಐವತ್ತರ ಬದಲು ಅರವತ್ತು ರುಪಾಯಿ ನಿಗದಿ ಮಾಡಲಾಗಿದೆ. ಆಗಸ್ಟ್ ಒಂದರಿಂದಲೇ ಈ ನೂತನ ದರ ಜಾರಿಗೆ ಬಂದಿದೆ.

ಹನ್ನೆರಡು ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ನೂತನ ದರ ಅನ್ವಯಿಸಲಿದ್ದು, ಹನ್ನೆರಡು ವರ್ಷ ಕೆಳಗಿನವರಿಗೆ ಶಾಲಾ ವಿದ್ಯಾರ್ಥಿಗಳು ಮತ್ತು ಪ್ರವಾಸಕ್ಕೆ ಬರುವ ವಿದ್ಯಾರ್ಥಿಗಳಿಗೆ ಹಿಂದಿನ ರಿಯಾಯಿತಿ ದರವೇ ಅನ್ವಯಿಸಲಿದೆ. ಮೂರು ವರ್ಷದ ಕೆಳಗಿನ ಮಕ್ಕಳಿಗೆ ಉಚಿತ ಪ್ರವೇಶ ಇರಲಿದೆ.
ವಿದ್ಯಾರ್ಥಿಗಳಿಗೆ ಇಪ್ಪತ್ತು ರುಪಾಯಿ ಹಾಗೂ ಪ್ರವಾಸದಲ್ಲಿ ಬರುವ ವಿದ್ಯಾರ್ಥಿಗಳಿಗೆ ಹದಿನೈದು ರುಪಾಯಿ ಶುಲ್ಕವಿದೆ. ನೂರೈವತ್ತು ಎಕರೆ ಪ್ರದೇಶದಲ್ಲಿರುವ ಉದ್ಯಾನದಲ್ಲಿ ಒಂದು ಸಾವಿರಕ್ಕೂ ಅಧಿಕ ವಿವಿಧ ಪ್ರಾಣಿಗಳು ಪ್ರವಾಸಿಗರನ್ನು ಆಕರ್ಷಿಸುತ್ತಿವೆ.
ಪ್ರಾಣಿ -ಪಕ್ಷಿಗಳ ಒಟ್ಟು ನಿರ್ವಹಣೆಗೆ ತಿಂಗಳಿಗೆ ಎಂಟರಿಂದ ಒಂಬತ್ತು ಲಕ್ಷ ರುಪಾಯಿ ವೆಚ್ಚವಾಗುತ್ತಿದೆ. ಇದಕ್ಕೆ ಪ್ರತಿಯಾಗಿ ಗೇಟ್ ಕಲೆಕ್ಷನ್ ನಿಂದ ಬರುತ್ತಿರುವ ವಾರ್ಷಿಕ ಆದಾಯ ಕೇವಲ ಒಂದು ಕೋಟಿ ರುಪಾಯಿ ಮಾತ್ರ.
ಕೆಲವೊಂದು ಪ್ರಾಣಿ -ಪಕ್ಷಿಗಳ ನಿರ್ವಹಣಾ ವೆಚ್ಚ ಅದನ್ನು ದತ್ತು ತೆಗೆದುಕೊಂಡಿರುವ ಬ್ಯಾಂಕ್ ಗಳು, ಖಾಸಗಿ ಸಂಘ- ಸಂಸ್ಥೆಗಳು, ವ್ಯಕ್ತಿಗಳು ಭರಿಸುತ್ತಿದ್ದಾರೆ. ಇದನ್ನು ಹೊರತುಪಡಿಸಿ ಜೈವಿಕ ಉದ್ಯಾನಕ್ಕೆ ಸರಕಾರದಿಂದ ಯಾವುದೇ ರೀತಿ ನಿರ್ವಹಣೆ ಅನುದಾನ ದೊರೆಯುತ್ತಿಲ್ಲ. ಆದ್ದರಿಂದ ಆಡಳಿತ ಮಂಡಳಿ ಶುಲ್ಕ ಹೆಚ್ಚಳ ನಿರ್ಧಾರಕ್ಕೆ ಬಂದಿದೆ.
-
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ












Click it and Unblock the Notifications