ಮಂಗಳೂರು ರಥಸಪ್ತಮಿ ಉತ್ಸವ: ಭಕ್ತಿಭಾವದಿಂದ ಮಿಂದೆದ್ದ ಭಕ್ತಕೋಟಿ
ರಥಸಪ್ತಮಿ ಶುಭಾವಸರದ ವೇಳೆ ಸಂಜೆ ಗೋಧೂಳಿಯ ಸಮಯದಲ್ಲಿ ನಗರದ ರಥಬೀದಿಯಲ್ಲಿ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀವೀರ ವೆಂಕಟೇಶ ದೇವರ ಬ್ರಹ್ಮರಥೋತ್ಸವ 'ಕೊಡಿಯಾಲ್ ತೇರು' ಬುಧವಾರ (ಜ 24) ಸಂಜೆ ಜರುಗಿತು.
ಮಂಗಳೂರು, ಜ 24: ರಥಸಪ್ತಮಿ ಶುಭಾವಸರದ ವೇಳೆ ಸಂಜೆ ಗೋಧೂಳಿಯ ಸಮಯದಲ್ಲಿ ನಗರದ ರಥಬೀದಿಯಲ್ಲಿ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀವೀರ ವೆಂಕಟೇಶ ದೇವರ ಬ್ರಹ್ಮರಥೋತ್ಸವ 'ಕೊಡಿಯಾಲ್ ತೇರು' ಬುಧವಾರ (ಜ 24) ಸಂಜೆ ಜರುಗಿತು.
ಸಂಜೆ 5.30ರ ವೇಳೆಗೆ ಚಿನ್ನದ ಪಲ್ಲಕ್ಕಿಯೇರಿ ದೇವಳದಿಂದ ರಥದೆಡೆಗೆ ವೀರ ವೆಂಕಟೇಶ ದೇವರ ಆಗಮನದ ಬಳಿಕ ಸಾಂಪ್ರದಾಯಿಕ ರಥ ಪ್ರದಕ್ಷಿಣೆ ನಡೆಯಿತು. ಪಲ್ಲಕ್ಕಿಯನ್ನು ಏಕ ಹಸ್ತದಿಂದ ಏರಿಸಿ ಸಂಭ್ರಮಿಸಲಾಯಿತು.
ಬ್ಯಾಂಡ್ ವಾದ್ಯಗಳ ಅಬ್ಬರ, ಮಂಗಲ ವಾದ್ಯಗಳ ನಿನಾದ , ತಾಳ ಸಂಕೀರ್ತನೆಯ ಹಿನ್ನೆಲೆಯಲ್ಲಿ ಸೇರಿದ ಸಹಸ್ರಾರು ಭಜಕರ ಹರ್ಷೋದ್ಗಾರಗಳ ನಡುವೆ ಸಂಜೆ 6.05 ರ ವೇಳೆಗೆ ಶ್ರೀದೇವರ ರಥಾರೋಹಣ ನಡೆಯಿತು.

ಈ ಸಂದರ್ಭದಲ್ಲಿ ಭಾವಾವೇಶಕ್ಕೆ ಒಳಗಾದ ಭಕ್ತರು ವೀರವೆಂಕಟೇಶಾ ವೇದವ್ಯಾಸಾ ಗೋವಿಂದೋ' ಎಂದು ಜಯಘೋಷಗೈದರು. ರಥಾರೂಢ ವೀರ ವೆಂಕಟೇಶನಿಗೆ ಮಹಾಮಂಗಳಾರತಿ ಬೆಳಗಿ ಪ್ರಾರ್ಥನೆ ಸಲ್ಲಿಸಿದರು.
ಈ ಬಾರಿಯ ಕೊಡಿಯಾಲ್ ತೇರು ಸಂಭ್ರಮಕ್ಕೆ ಕಾಶೀಮಠಾಧೀಶ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿ ವಿಶೇಷ ರಂಗೇರಿಸಿತು. ರಥಾರೂಡ ಶ್ರೀವೀರ ವೆಂಕಟೇಶ ದೇವರಿಗೆ ನೂತನ ವಾಗಿ ನಿರ್ಮಿಸಲಾದ ಸ್ವರ್ಣ ಪ್ರಭಾವಳಿ ಹಾಗೂ ಸ್ವರ್ಣ ಯಾಲಕ್ಕಿ ಮಾಲೆಯನ್ನು ಶ್ರೀಗಳವರ ದಿವ್ಯ ಹಸ್ತಗಳಿಂದ ದೇವರಿಗೆ ಸಮರ್ಪಿಸಲಾಯಿತು.
ಶ್ರೀ ವೆಂಕಟರಮಣ ದೇವಳವೂ ಶ್ರೀ ಸಂಸ್ಥಾನದ ಅಧೀನದಲ್ಲಿದ್ದು ಗುರುವರ್ಯರ ಅಮೃತ ಹಸ್ತಗಳಿಂದ ಮಹಾಪೂಜೆ, ಮಹಾಪ್ರಸಾದ ಪಡೆದ ಧನ್ಯತೆ ಮಂಗಳೂರು ದೇವಳದ ಭಜಕರದ್ದಾಗಿದೆ. ಬಳಿಕ ಸಹಸ್ರ ಅಬಾಲ ವೃದ್ಧ ಪುರುಷರು ರಥವನ್ನು ಎಳೆಯುವುದರಮೂಲಕ ಸೇವೆ ಸಲ್ಲಿಸಿದರು .
ಸಮಾಜದ ಪರವಾಗಿ ಶ್ರೀ ದೇವಳದ ಆಡಳಿತ ಮೊಕ್ತೇಸರ ಪದ್ಮನಾಭ ಪೈ ಸಹಿತ ಮೊಕ್ತೇಸರರು ಮಹಾಪ್ರಸಾದವನ್ನು ಸ್ವೀಕರಿಸಿದರು. ದಾನಿ ಮುಂಡ್ಕೂರು ರಾಮದಾಸ ಕಾಮತ್ ಸಹಿತ ಗಣ್ಯರಿಗೆ ಈ ಸಂದರ್ಭದಲ್ಲಿ ಪ್ರಸಾದ ನೀಡಲಾಯಿತು.
ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯ ವಿಧಾನಸಭಾ ಮಾಜಿ ಉಪಸಭಾಪತಿ ಎನ್.ಯೋಗೀಶ್ ಭಟ್ ಮತ್ತಿತರ ಗಣ್ಯರು ಈ ಸಂಧರ್ಭದಲ್ಲಿ ಹಾಜರಿದ್ದರು. ಮಹೋತ್ಸವದ ಅಂಗವಾಗಿ ಶ್ರೀದೇವರಿಗೆ ದೇವಳದಲ್ಲಿ ವಿಶೇಷ ಗಂಗಾಭಿಷೇಕ, ಪುಳಕಾಭಿಷೇಕ ಸಹಿತ ಸಹಸ್ರಧಾರಾ ಸೇವೆ ಸಹಿತ ಧಾರ್ಮಿಕ ವಿದಿವಿಧಾನಗಳು ನಡೆದವು. ಸಂಜೆ ಮಹಾಯಜ್ಞ ಮಂಟಪದಲ್ಲಿ ಪೂರ್ಣಾಹುತಿ ನಡೆಯಿತು.

ಸಂಜೆ ರಥದಲ್ಲಿ ಸಮಾಜ ಬಾಂಧವರು ಮಹಾಪ್ರಸಾದ ಸ್ವೀಕರಿಸಿದರು. ಇದಕ್ಕೂ ಮೊದಲು ರಥದ ಚಕ್ರಕ್ಕೆ ಕಾಯಿಗಳನ್ನು ಒಡೆಯುವ, ಸೇರಿದವರು ರಥವನ್ನು ಕರ ಸೇವೆಯ ಮೂಲಕ ಒಂದಿಷ್ಟು ಮುಂದಿಡುವ ಕ್ರಿಯೆಗಳು ನಡೆದವು.
ದೇಶವಿದೇಶಗಳಿಂದ ರಥೋತ್ಸವ ಸಂಭ್ರಮಕ್ಕೆಂದೇ ಆಗಮಿಸಿದ್ದ ಜನತೆ ಕೊಡಿಯಾಲ್ ತೇರಿನ ವೈಭವವನ್ನು ಕಣ್ತುಂಬಿಕೊಂಡರು. ಇದೇ ವೇಳೆ ಮಹಾ ಸಮಾರಾಧನೆಯಲ್ಲಿ 50 ಸಹಸ್ರಕ್ಕೂ ಅಧಿಕ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು. ರಥಬೀದಿಯಲ್ಲಿ ನಡೆದ ಮೆರವಣಿಗೆಯ ವೇಳೆ ಕಿಕ್ಕಿರಿದು ಭಕ್ತರು ಪಾಲ್ಗೊಂಡಿದ್ದರು. (ಚಿತ್ರ : ಮಂಜು ನೀರೇಶ್ವಾಲ್ಯ)
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications