ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಸಂಭ್ರಮ
ಮಂಗಳೂರು, ನ, 28 : ನಾಗಾರಾಧನೆಯ ಮೂಲಕೇಂದ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಗುರುವಾರ ಚಂಪಾಷಷ್ಠಿ ಸಂಭ್ರಮ. ವಾರ್ಷಿಕ ಬ್ರಹ್ಮರಥೋತ್ಸದಲ್ಲಿ ಸಾವಿರಾರು ಭಕ್ತರು ಭಾಗಹಿಸಿದ್ದರು.
ಬೆಳಗ್ಗೆ ಮಂಗಳವಾದ್ಯ, ವೇದಘೋಷ, ಬ್ಯಾಂಡ್, ಶಂಖ, ಜಾಗಟೆ, ಸ್ಯಾಕ್ಸೋಫೋನ್, ಚೆಂಡೆಗಳ ನಿನಾದದಲ್ಲಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥಾರೋಹಣವಾಯಿತು. ಉಮಾಮಹೇಶ್ವರ ದೇವರನ್ನು ಪಂಚಮಿ ರಥದಲ್ಲಿ ಆರಾಧಿಸಲಾಯಿತು.[ಮಡೆಸ್ನಾನದ ವಿರುದ್ಧ ಸುಪ್ರೀಂಗೆ ಮೊರೆ]

ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ರಥದಲ್ಲಿ ದೇವರ ಮೂರ್ತಿ ಕುಳ್ಳಿರಿಸಿ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿದರು. ಮಲೆಕುಡಿಯರು ಬೆತ್ತ ಹಾಗೂ ಬಿದಿರುಗಳಿಂದಲೇ ಕಲಾತ್ಮಕವಾಗಿ ನಿರ್ಮಿಸಿದ ಬ್ರಹ್ಮರಥವನ್ನು ಸಾವಿರಾರು ಮಂದಿ ಭಕ್ತರ ಜಯಘೋಷದಲ್ಲಿ ಎಳೆಯಲಾಯಿತು. ಸಾಸಿವೆ, ಧನ, ಕಾಳುಮೆಣಸುಗಳನ್ನು ರಥದತ್ತ ಎಸೆದು ಹರಕೆ ತೀರಿಸಿದರು.[ಚಿತ್ರಗಳು: ಐಸಾಕ್ ರಿಚರ್ಡ್]

ವರ್ಷದಲ್ಲಿ ಒಂದು ಬಾರಿ ಮಾತ್ರ ನಡೆಯುವ ಬ್ರಹ್ಮರಥೋತ್ಸವಕ್ಕೆ ಒಟ್ಟು 59 ಮಂದಿ ಸೇವಾರ್ಥಿಗಳಿದ್ದರು. ದೇವರ ಉತ್ಸವ ಮೂರ್ತಿಯ ರಥಾವರೋಹಣವಾದ ಬಳಿಕ ಷಷ್ಠಿ ಕಟ್ಟೆ ಮತ್ತು ದ್ವಾದಶಿ ಮಂಟಪದಲ್ಲಿ ಕಟ್ಟೆಪೂಜೆ ನಡೆಯಿತು.
ಶಾಸಕ ಎಸ್. ಅಂಗಾರ, ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೃಷ್ಣಪ್ರಸಾದ್ ಮಡ್ತಿಲ, ಸದಸ್ಯರಾದ ಚಂದ್ರಶೇಖರ ತಳೂರು, ಸುಬ್ರಹ್ಮಣ್ಯ ಭಟ್, ಕಿಶೋರ್ ಶಿರಾಡಿ, ಮೋಹನ್ ರಾಂ ಸುಳ್ಳಿ, ಮೋನಪ್ಪ ಮಾನಾಡು, ವನಜಾ ಭಟ್, ಯಮುನಾ ರೈ, ದೇವಳದ ಕಾರ್ಯನಿರ್ವಹಣಾಧಿಕಾರಿ ನಾಗರಾಜ್, ರವೀಂದ್ರ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications