ರಕ್ಷಣೆಗಾಗಿ ಹಿಂದೂಗಳು ತಲವಾರ್ ಹೊಂದಬೇಕು: ಪ್ರಮೋದ್ ಮುತಾಲಿಕ್
ಮಂಗಳೂರು, ಅಕ್ಟೋಬರ್ 9: ಹಿಂದೂ ಕುಟುಂಬಗಳು ರಕ್ಷಣೆಗೆ ತಲವಾರನ್ನು ಮನೆಯಲ್ಲಿ ಇಟ್ಟುಕೊಳ್ಳಬೇಕೆಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಶ್ರೀರಾಮ ಸೇನೆ ಹಾಗೂ ದುರ್ಗಾ ಸೇನೆ ಮಂಗಳೂರು ಕದ್ರಿಯಲ್ಲಿ ಆಯೋಜಿಸಿದ್ದ ಮಾತೃ ಪೂಜೆ ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, "ಇಸ್ಲಾಮಿಕ್ ಶಕ್ತಿಗಳು ದೇಶವನ್ನು ಕಬಳಿಸಲು ಹವಣಿಸುತ್ತಿವೆ" ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ದೇಶದ ಉದ್ದಗಲಕ್ಕೂ ಮಸೀದಿ , ಪ್ರಾರ್ಥನಾ ಮಂದಿರಗಳನ್ನು ನಿರ್ಮಾಣ ಮಾಡಲು ಮುಸ್ಲಿಮರಿಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಅದೇ ಮುಸ್ಲಿಮರು ಅಡ್ಡ ಬರುತ್ತಿದ್ದಾರೆ ಎಂದು ಕಿಡಿಕಾರಿದರು. ಶ್ರೀರಾಮ ಮಂದಿರಕ್ಕೆ ಅಡ್ಡ ಬರುತ್ತಿರುವ , ಗೋಹತ್ಯೆ ನಿಲ್ಲಿಸದ, ಭಾರತ್ ಮಾತಾ ಕಿ ಜೈ ಹೇಳದ ಮುಸ್ಲಿಮರಿಗೆ ಸಾಮಾಜಿಕ ಹಾಗೂ ಆರ್ಥಿಕ ಬಹಿಷ್ಕಾರ ಹಾಕಬೇಕು ಎಂದು ಅವರು ಹೇಳಿದರು.

ಮುಸ್ಲಿಮರ ಅಂಗಡಿಗಳಲ್ಲಿ ವ್ಯಾಪಾರ ಮಾಡಬಾರದು ಎಂದು ಹೇಳಿದ ಅವರು ದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದೇಶದಲ್ಲಿ ಒಂದು ವೇಳೆ ಆಂತರಿಕ ಯುದ್ಧ, ಬೀದಿ ಕಾಳಗಗಳು ನಡೆದರೆ ದೇಶದ ರಕ್ಷಣೆಗೆ, ಕುಟುಂಬದ ರಕ್ಷಣೆಗೆ ಪ್ರತಿಯೊಂದು ಹಿಂದೂ ಕುಟುಂಬವೂ ಆಯುಧವಾಗಿ ತಲವಾರನ್ನು ಮನೆಯಲ್ಲಿ ಇಟ್ಟುಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಂಗವಾಗಿ ಮಾತೆಯರ ಪಾದಪೂಜೆ ಮಾಡಿ ಗೌರವ ಸಲ್ಲಿಸಲಾಯಿತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications