Get Updates
Get notified of breaking news, exclusive insights, and must-see stories!

ರಕ್ಷಣೆಗಾಗಿ ಹಿಂದೂಗಳು ತಲವಾರ್ ಹೊಂದಬೇಕು: ಪ್ರಮೋದ್ ಮುತಾಲಿಕ್

ಮಂಗಳೂರು, ಅಕ್ಟೋಬರ್ 9: ಹಿಂದೂ ಕುಟುಂಬಗಳು ರಕ್ಷಣೆಗೆ ತಲವಾರನ್ನು ಮನೆಯಲ್ಲಿ ಇಟ್ಟುಕೊಳ್ಳಬೇಕೆಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಶ್ರೀರಾಮ ಸೇನೆ ಹಾಗೂ ದುರ್ಗಾ ಸೇನೆ ಮಂಗಳೂರು ಕದ್ರಿಯಲ್ಲಿ ಆಯೋಜಿಸಿದ್ದ ಮಾತೃ ಪೂಜೆ ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, "ಇಸ್ಲಾಮಿಕ್ ಶಕ್ತಿಗಳು ದೇಶವನ್ನು ಕಬಳಿಸಲು ಹವಣಿಸುತ್ತಿವೆ" ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Every Hindu home should have a Talwar for safety - Pramod Muthalik

ದೇಶದ ಉದ್ದಗಲಕ್ಕೂ ಮಸೀದಿ , ಪ್ರಾರ್ಥನಾ ಮಂದಿರಗಳನ್ನು ನಿರ್ಮಾಣ ಮಾಡಲು ಮುಸ್ಲಿಮರಿಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಅದೇ ಮುಸ್ಲಿಮರು ಅಡ್ಡ ಬರುತ್ತಿದ್ದಾರೆ ಎಂದು ಕಿಡಿಕಾರಿದರು. ಶ್ರೀರಾಮ ಮಂದಿರಕ್ಕೆ ಅಡ್ಡ ಬರುತ್ತಿರುವ , ಗೋಹತ್ಯೆ ನಿಲ್ಲಿಸದ, ಭಾರತ್ ಮಾತಾ ಕಿ ಜೈ ಹೇಳದ ಮುಸ್ಲಿಮರಿಗೆ ಸಾಮಾಜಿಕ ಹಾಗೂ ಆರ್ಥಿಕ ಬಹಿಷ್ಕಾರ ಹಾಕಬೇಕು ಎಂದು ಅವರು ಹೇಳಿದರು.

Every Hindu home should have a Talwar for safety - Pramod Muthalik

ಮುಸ್ಲಿಮರ ಅಂಗಡಿಗಳಲ್ಲಿ ವ್ಯಾಪಾರ ಮಾಡಬಾರದು ಎಂದು ಹೇಳಿದ ಅವರು ದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದೇಶದಲ್ಲಿ ಒಂದು ವೇಳೆ ಆಂತರಿಕ ಯುದ್ಧ, ಬೀದಿ ಕಾಳಗಗಳು ನಡೆದರೆ ದೇಶದ ರಕ್ಷಣೆಗೆ, ಕುಟುಂಬದ ರಕ್ಷಣೆಗೆ ಪ್ರತಿಯೊಂದು ಹಿಂದೂ ಕುಟುಂಬವೂ ಆಯುಧವಾಗಿ ತಲವಾರನ್ನು ಮನೆಯಲ್ಲಿ ಇಟ್ಟುಕೊಳ್ಳಬೇಕು ಎಂದು ಕರೆ ನೀಡಿದರು.

Every Hindu home should have a Talwar for safety - Pramod Muthalik

ಕಾರ್ಯಕ್ರಮದ ಅಂಗವಾಗಿ ಮಾತೆಯರ ಪಾದಪೂಜೆ ಮಾಡಿ ಗೌರವ ಸಲ್ಲಿಸಲಾಯಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+