ಖಾಕಿ ಕಳಚಿಟ್ಟು ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ಮದನ್
ಮಂಗಳೂರು, ಜನವರಿ 20: ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಯಾಗಿದ್ದ ಮದನ್ ಖಾಕಿ ಸಮವಸ್ತ್ರ ಕಳಚಿ ರಾಜಕೀಯ ರಂಗಕ್ಕೆ ಇಳಿದಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿರುವ ಮದನ್ ಈಗಾಗಲೇ ಚುನಾವಣೆಯ ಪ್ರಚಾರ ಆರಂಭಿಸಿದ್ದಾರೆ.
ಮದನ್ ರಾಜಕೀಯ ಪ್ರವೇಶಿಸುತ್ತಿರುವ ನಿರ್ಧಾರವನ್ನು ಸ್ವಾಗತಿಸಿರುವ ಯುವ ಸಮುದಾಯ ಮದನ್ ಪರ ಪ್ರಚಾರ ಆರಂಭಿಸಿದೆ.
ಮೂಲತಃ ಕೊಡಗಿನವರಾದ ಮದನ್ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ತಮ್ಮ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಬಂದರು ಹಾಗು ನಂತರ ಬಜಪೆ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಇತ್ತೀಚೆಗೆ ಮದನ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.

ಯುವ ಜನಾಂಗದ ಕಣ್ಮಣಿ
ಮಂಗಳೂರಿನಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಸದಾ ಸಾಮಾಜಿಕ ಕಳಕಳಿಯ ಕೆಲಸ ಮಾಡಿದ್ದ ಮದನ್ ಅವರನ್ನು ಇಷ್ಟಪಡುವ ಯುವಕರ ದಂಡೇ ಮಂಗಳೂರಿನಲ್ಲಿದೆ. ರಾಮಕೃಷ್ಣ ಮಿಷನ್ ಆರಂಭಿಸಿದ್ದ ಸ್ವಚ್ಛ ಮಂಗಳೂರು ಆಂದೋಲನದಲ್ಲಿ ಮದನ್ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು. ಈ ಎಲ್ಲಾ ಹಿನ್ನೆಲೆಯಲ್ಲಿ ಯುವ ಮನಸ್ಸುಗಳೊಂದಿಗೆ ಬೆರೆಯುತ್ತಿದ್ದ ಮದನ್ ಯುವ ಸಮೂಹದಲ್ಲಿ ಹೆಚ್ಚು ಜನಪ್ರಿಯರಾಗಿದ್ದಾರೆ.

ಐ ಸಪೋರ್ಟ್ ಮದನ್
ಯುವಕರ ತಂಡಗಳು ಈಗಾಗಲೇ ಮಂಗಳೂರಿನಲ್ಲಿ ಮದನ್ ಪರ ಪ್ರಚಾರ ಆರಂಭಿಸಿವೆ. ವ್ಯವಸ್ಥೆಯ ಬದಲಾವಣೆಗಾಗಿ ಮದನ್ ಅವರನ್ನು ಬೆಂಬಲಿಸಿ ಎಂದು ಕರೆ ನೀಡಲಾಗುತ್ತಿದೆ. ಸ್ವಸ್ಥ ಮಂಗಳೂರಿಗಾಗಿ "ಐ ಸಪೋರ್ಟ್ ಮದನ್" ಎಂದು ಬರೆದಿರುವ ಫ್ಲೆಕ್ಸ್ ಗಳನ್ನು ಹೊತ್ತ ವಾಹನಗಳು ಮಂಗಳೂರಿನಲ್ಲಿ ಓಡಾಡುತ್ತಿವೆ.

ಬಿಜೆಪಿಯಿಂದ ಕಣಕ್ಕಿಳಿಯುವ ಇರಾದೆ
ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯುವ ಇರಾದೆಯನ್ನು ಮದನ್ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಸಂಘ ಪರಿವಾರದ ನಾಯಕರೊಂದಿಗೆ ಮಾತುಕತೆ ಕೂಡ ನಡೆದಿದೆ ಎಂದು ಹೇಳಲಾಗಿದೆ.

ಲೋಬೋ - ಮದನ್ ಫೈಟ್?
ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕರಾಗಿರುವ ಕಾಂಗ್ರೆಸಿನ ಜೆ.ಆರ್. ಲೋಬೋ ಕೂಡ ಈ ಹಿಂದೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಲೋಬೋ ನಿವೃತ್ತಿ ಬಳಿಕ ಕಳೆದ ಬಾರಿ ಕಾಂಗ್ರೆಸಿನಿಂದ ಕಣಕ್ಕಿಳಿದಿದ್ದರು. ಈ ಬಾರಿಯೂ ಕಾಂಗ್ರೆಸ್ ನಿಂದ ಲೋಬೋ ಅವರೇ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ. ಒಂದು ವೇಳೆ, ಬಿಜೆಪಿಯಲ್ಲಿ ಮದನ್ ಅಭ್ಯರ್ಥಿಯಾದರೆ ಚುನಾವಣೆಯ ಅಖಾಡದಲ್ಲಿ ಅಧಿಕಾರಿಗಳಿಬ್ಬರ ನಡುವಿನ ಫೈಟ್ ಕುತೂಹಲ ಕೆರಳಿಸಲಿದೆ.

ಬಿಜೆಪಿ ಟಿಕೆಟ್ ಸಿಗದಿದ್ದರೂ ಸ್ಪರ್ಧೆ
ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿಯಲು ಮದನ್ ಸಿದ್ದರಾಗಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಮದನ್ ಸ್ಪಷ್ಟ ಪಡಿಸಿದ್ದಾರೆ.
-
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications