ಅಡಿಕೆ ಬೆಂಬಲ ಬೆಲೆ ಅವಧಿ ಮತ್ತೆ ವಿಸ್ತರಣೆ : ಸಚಿವೆ ನಿರ್ಮಲಾ
ಮಂಗಳೂರು, ಜನವರಿ 12 : ಡಿಸೆಂಬರ್ 31ಕ್ಕೆ ಮುಕ್ತಾಯಗೊಂಡಿದ್ದ ಅಡಿಕೆಯ ಬೆಂಬಲ ಬೆಲೆ ಅವಧಿಯನ್ನು ಮತ್ತೆ ವಿಸ್ತರಿಸಲಾಗುವುದು ಎಂದು ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಸೆಂಬರ್ 31ಕ್ಕೆ ಅಡಿಕೆಯ ಬೆಂಬಲ ಬೆಲೆಯ ಅವಧಿ ಮುಕ್ತಾಯಗೊಂಡಿತ್ತು. ರಾಜ್ಯ ಸರ್ಕಾರ ಗಮನ ಹರಿಸದ ಹಿನ್ನೆಲೆಯಲ್ಲಿ ಹೀಗಾಗಿದೆ.
ಬೆಂಬಲ ಬೆಲೆಯ ಅವಧಿಯನ್ನು ವಿಸ್ತರಿಸುವಂತೆ ಅಡಿಕೆ ಬೆಳೆಗಾರರು ಮನವಿ ಮಾಡಿಕೊಂಡಿದ್ದಾರೆ. ಹೀಗಾಗಿ ಬೆಂಬಲ ಬೆಲೆ ಅವಧಿಯನ್ನು ವಿಸ್ತರಿಸಲಾಗುವುದು. ಆ ಅವಧಿ ಎಂದಿನವರೆಗೆ ಎನ್ನುವುದನ್ನು ಮುಂದೆ ತಿಳಿಸಲಾಗುವುದು ಎಂದರು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೆಳೆಯುವ ಅಡಿಕೆಯನ್ನು 'ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ'ಯಡಿ ಖರೀದಿಸಲು ಕೇಂದ್ರ ಸರ್ಕಾರ ಡಿಸೆಂಬರ್ 8ರಂದು ಹಸಿರು ನಿಶಾನೆ ತೋರಿತ್ತು.
ಮಧ್ಯವರ್ತಿಗಳಿಗೆ ಅವಕಾಶ ನೀಡದೇ ರಾಜ್ಯದ ಅಡಿಕೆ ಮಾರಾಟ ಸಹಕಾರ ಸಂಘಗಳ ಮೂಲಕ ಖರೀದಿಸಲು ಅವಕಾಶ ಕಲ್ಪಿಸಿತ್ತು. ರಾಜ್ಯ ಸರ್ಕಾರಕ್ಕೆ ಖರೀದಿಯ ಮೇಲುಸ್ತುವಾರಿ ನೀಡಲಾಗಿತ್ತು.
ಕೆಂಪು ಅಡಿಕೆಗೆ ಕ್ವಿಂಟಲ್ ಗೆ 27 ಸಾವಿರ ರು ಹಾಗೂ ಚಾಲಿ ಅಡಿಕೆಗೆ 25,100 ರು ಬೆಂಬಲ ಬೆಲೆ ನಿಗದಿ ಮಾಡಿತ್ತು. ಅಡಿಕೆ ಖರೀದಿಗೆ ಡಿಸೆಂಬರ್ 31ರವರೆಗೆ ಮಾತ್ರ ಸಮಯ ನೀಡಿತ್ತು.
ಖರೀದಿ ಮಿತಿ 40 ಸಾವಿರ ಟನ್ಗೆ ನಿಗದಿ ಮಾಡಿತ್ತು. ಬೆಂಬಲ ಬೆಲೆ ಯೋಜನೆ ಅಡಿ ಅಡಿಕೆ ಖರೀದಿ ಪ್ರಮಾಣಕ್ಕೆ ಮಿತಿ ಹಾಕಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿತ್ತು.
ರಾಜ್ಯದಲ್ಲಿ ಪ್ರತಿ ವರ್ಷ 4 ಲಕ್ಷ ಟನ್ ಅಡಿಕೆ ಉತ್ಪಾದಿಸಲಾಗುತ್ತಿದೆ. ಆದರೆ, ಖರೀದಿಸಲು ಸೂಚಿಸಿರುವ ಪ್ರಮಾಣ ರಾಜ್ಯದಲ್ಲಿ ಬೆಳೆಯುವ ಅಡಿಕೆ ಶೇ.10ರಷ್ಟು ಮಾತ್ರ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications