ಮಂಗಳೂರಿನಲ್ಲಿ ನಕಲಿ ಅಂಕಪಟ್ಟಿ ಜಾಲ ಭೇದಿಸಿದ ಸಿಸಿಬಿ ಪೊಲೀಸರು
ಮಂಗಳೂರು, ಮಾರ್ಚ್ 19: ಮಂಗಳೂರು ನಗರದಲ್ಲಿ ಕಾರ್ಯಚರಿಸುತ್ತಿದ್ದ ನಕಲಿ ಅಂಕಪಟ್ಟಿ ಜಾಲವನ್ನು ಭೇದಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ತೊಕ್ಕೊಟ್ಟು ಟಿ.ಸಿ. ರಸ್ತೆಯಲ್ಲಿರುವ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸೈನ್ಸ್ (MITS) ಎಂಬ ಹೆಸರಿನ ಸಂಸ್ಥೆಯಲ್ಲಿ ನಕಲಿ ಅಂಕಪಟ್ಟಿಯನ್ನು ತಯಾರಿಸಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ತೊಕ್ಕೊಟ್ಟು ನಿವಾಸಿಗಳಾದ ಅಸ್ಕಾನ್ ಶೇಖ್ (25) ಹಾಗೂ ಅಸ್ರಾರುದ್ದೀನ್ (26) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 2 ಮೊಬೈಲ್ ಫೋನ್ ಹಾಗು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇತ್ತೀಚೆಗೆ ನಗರ ತೊಕ್ಕೊಟ್ಟು ಟಿ. ಸಿ. ರಸ್ತೆಯಲ್ಲಿರುವ ಎಂಐಟಿಎಸ್ ಎಂಬ ಸಂಸ್ಥೆಯಲ್ಲಿ 10 ಸಾವಿರ ರೂಪಾಯಿಯಿಂದ 45ಸಾವಿರ ರೂಪಾಯಿಗೆ ನಕಲಿ ಅಂಕಪಟ್ಟಿ ಹಾಗೂ ಸರ್ಟಿಫಿಕೇಟ್ ಗಳನ್ನು ತಯಾರಿಸಿ ಮಾರಾಟ ಮಾಡಿ ವಂಚಿಸುತ್ತಿದ್ದ ಜಾಲದ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಕಲೆ ಹಾಕಿ ದಾಳಿ ನಡೆಸಿದ್ದರು.

ಈ ಪ್ರಕರಣ ಪ್ರಮುಖ ಆರೋಪಿ ತೊಕ್ಕೊಟ್ಟು ನಿವಾಸಿ ಗೋಡ್ವಿನ್ ಡಿ ಸೋಜಾ ಎಂಬಾತನನ್ನು ಬಂಧಿಸಿದ್ದರು. ಆದರೆ ಗೋಡ್ವೀನ್ ಬಂಧನ ಆದ ಮಾಹಿತಿ ಪಡೆಯುತ್ತಿದ್ದಂತೆ ಇನ್ನಿಬ್ಬರು ಪ್ರಮುಖ ಆರೋಪಿಗಳಾದ ಅಸ್ಕಾನ್ ಶೇಖ್ ಹಾಗು ಅಸ್ರಾರುದ್ದೀನ್ ತಲೆಮರೆಸಿಕೊಂಡಿದ್ದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಆರೋಪಿ ಅಸ್ಕಾನ್ ಶೇಖ್ ಎಂಐಟಿಎಸ್ ಸಂಸ್ಥೆಯನ್ನು ನಡೆಸುತ್ತಿದ್ದು, 2016 ರಿಂದ ಎಸ್ಎಸ್ಎಲ್ ಸಿ, ಪಿಯುಸಿ, ಡಿಗ್ರಿ, ಡಿಪ್ಲೋಮಾ ಹೀಗೆ ವಿವಿಧ ಪದವಿಯ ನಕಲಿ ಅಂಕಪಟ್ಟಿಗಳನ್ನು ತಯಾರಿಸಿ 10 ಸಾವಿರ ರೂಪಾಯಿಯಿಂದ 45 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದ ಎಂದು ಹೇಳಲಾಗಿದೆ.
ಆರೋಪಿಗಳು ಈವರೆಗೆ ಸಾವಿರಾರು ನಕಲಿ ಅಂಕಪಟ್ಟಿಗಳನ್ನು ತಯಾರಿಸಿ ಮಾರಾಟ ಮಾಡಿದ್ದಾರೆ ಎಂದು ಹೇಳಲಾಗಿದ್ದು ಈ ಕುರಿತು ತನಿಖೆ ಮುಂದುವರೆದಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications