ಬಾಳಿಗಾ ಕೊಲೆ ಆರೋಪಿ ನರೇಶ್ ಶೆಣೈಗೆ ಶಿಕ್ಷೆಯಾಗಲೆಂದು ದೇವರಲ್ಲಿ ಪ್ರಾರ್ಥನೆ
ಮಂಗಳೂರು, ಮಾರ್ಚ್. 21 : ಮಾಹಿತಿಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆಯಾಗಿ ಇಂದಿಗೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಾಳಿಗಾ ಸಹೋದರಿಯರು ವೆಂಕಟರಮಣನಿಗೆ ಕೈ ಮುಗಿದು, ಕೊಲೆ ಆರೋಪಿ ನರೇಶ್ ಶೆಣೈಗೆ ಶಿಕ್ಷೆಯಾಗುವಂತೆ ಪ್ರಾರ್ಥನೆ ಮಾಡಿದರು.
ಬಳಿಕ ವೆಂಕಟರಮಣ ದೇವಾಲಯದಿಂದ ವಿನಾಯಕ ಬಾಳಿಗಾ ಮನೆವರೆಗೆ ವಿಚಾರವಾದಿ ನರೇಂದ್ರ ನಾಯಕ್ ನೇತೃತ್ವದ 'ದೇಶ ಪ್ರೇಮಿ ಸಂಘಟನೆ' ಮತ್ತು ಇತರ ಸಂಘಟನೆಗಳ ಸದಸ್ಯರು ಮೌನ ಮೆರವಣಿಗೆ ನಡೆಸಿದರು.[ಬಾಳಿಗಾ ಕೊಲೆ ಪ್ರಕರಣ: ಸರ್ಕಾರಿ ವಿಶೇಷ ಅಭಿಯೋಜಕರಾಗಿ ರವೀಂದ್ರನಾಥ್]

2016 ಮಾರ್ಚ್ 21 ರಂದು ಕೊಲೆಯಾಗುವ ಮುನ್ನ ಸಂಜೆ ಬಾಳಿಗಾ ಅವರು ನಡೆದಾಡಿದ ಬೀದಿಗಳಲ್ಲಿ ವಿವಿಧ ಸಂಘಟನೆಗಳು ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಬಾಳಿಗಾ ಅವರ ಹೆಜ್ಜೆಗೆ ನಮ್ಮ ಹೆಜ್ಜೆಯನ್ನು ಸೇರಿಸುವ ಮೂಲಕ ಬಾಳಿಗಾ ಕುಟುಂಬದ ಜೊತೆ ನಿಲ್ಲಬೇಕಿದೆ.
ಕೊಲೆಗಡುಕರ ವಿರುದ್ದ ಮಂಗಳೂರಿನ ಜನಸಾಮಾನ್ಯರ ಪ್ರತಿರೋಧದ ದ್ವನಿಯನ್ನು ಗಟ್ಟಿಯಾಗಿ ಮೊಳಗಿಸಬೇಕಿದೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಈ ಸಂದರ್ಭ ಕರೆಕೊಟ್ಟಿದ್ದಾರೆ. ಬಾಳಿಗಾ ಕೊಲೆ ಪ್ರಕರಣದಲ್ಲಿ ನಮೋ ಬ್ರಿಗೇಡ್ ಸ್ಥಾಪಕ ನಮೋ ನರೇಶ್ ಶೆಣೈ ಪ್ರಧಾನ ಆರೋಪಿಯಾಗಿದ್ದಾನೆ.[ವಿನಾಯಕ ಬಾಳಿಗ ಕೊಲೆ ಪ್ರಕರಣ: ಆರೋಪಿಗಳಿಗೆ ಜಾಮೀನು]

ನರೇಶ್ ಶೆಣೈ ಜಾಮೀನು ಪಡೆದು ಹೊರಬರುವಾಗ ಯುವ ಬ್ರಿಗೇಡ್ ಮುಖಂಡ ಚಕ್ರವರ್ತಿ ಸೂಲಿಬೆಲೆ ಜೈಲಿನ ಬಾಗಿಲಿಗೆ ತೆರಳಿ ಆಲಿಂಗನದ ಮೂಲಕ ಸ್ವಾಗತಿಸಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications