ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಂಟ್ವಾಳದ ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿಗಳ ಬಂಧನ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಅಕ್ಟೋಬರ್ 29: ಬಂಟ್ವಾಳದ ಫರಂಗಿಪೇಟೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡ, ಫೋಟೋಗ್ರಾಫರ್ ಮೇಲೆ ತಲವಾರಿನಿಂದ ದಾಳಿ ನಡೆಸಿದ ಮೂವರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮುಹಮ್ಮದ್ ಅರ್ಷದ್, ಅಬ್ದುಲ್ ರೆಹಮಾನ್, ಮುಹಮ್ಮದ್ ಸೈಫುದ್ದೀನ್ ಎಂದು ಗುರುತಿಸಲಾಗಿದೆ.

ಬಂಟ್ವಾಳ ತಾಲ್ಲೂಕಿನ ಪುದು ಗ್ರಾಮದ ಫರಂಗಿಪೇಟೆಯಲ್ಲಿನ ದಿನೇಶ್ ರವರ ತೃಷಾ ಫೋಟೊ ಸ್ಟುಡಿಯೋಕ್ಕೆ 4 ಜನ ಯುವಕರು ಫೋಟೋ ತೆಗೆಸುವಂತೆ ಬಂದು ಫೋಟೋಗ್ರಾಫರ್, ಸ್ಥಳೀಯ ಬಿಜೆಪಿ ಮುಖಂಡ ದಿನೇಶ್ ಅವರಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು.

ಮಂಗಳೂರು; ಭೀಕರ ಅಪಘಾತ, ನವ ದಂಪತಿ ದುರ್ಮರಣಮಂಗಳೂರು; ಭೀಕರ ಅಪಘಾತ, ನವ ದಂಪತಿ ದುರ್ಮರಣ

ಇತ್ತೀಚೆಗೆ ಕುಂಪನಮಜಲು ಎಂಬಲ್ಲಿ ಹೆಣ್ಣು ಮಗುವಿನ ಮೇಲಾದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದಿನೇಶ್ ರವರು ಹೆಣ್ಣು ಮಗುವಿನ ಕಡೆಯವರಿಗೆ ಬೆಂಬಲ ನೀಡಿದ್ದ ದ್ವೇಷದಿಂದ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.

Managluru: Fatal Assault On BJP Leader In Bantwal: Arrest Of Three Accused

ದಿನೇಶ್ ಅವರನ್ನು ಕೊಲ್ಲುವ ಉದ್ದೇಶದಿಂದ ಕತ್ತಿಯಿಂದ ತಲೆಗೆ, ಬಲ ಕೈಗೆ ಹಾಗೂ ಎಡ ಕಿಬ್ಬೊಟ್ಟೆಗೆ ಹಲ್ಲೆ ನಡೆಸಿ ತೀವ್ರ ಗಾಯವಾಗಿದ್ದು, ಆ ವೇಳೆಯಲ್ಲಿ ಅಲ್ಲಿದ್ದ ಶೇಖರ್ ಪೂಜಾರಿ ರವರು ಹಲ್ಲೆಯಾಗುವುದನ್ನು ತಪ್ಪಿಸಲು ಅಲ್ಲೇ ಇದ್ದ ಚೇರ್ ನಿಂದ ಜೋರಾಗಿ ಇಬ್ಬರು ಆರೋಪಿಗಳಿಗೆ ಹೊಡೆದಿದ್ದು, ಅವರ ಕೈಗೆ ಗಾಯವಾಗಿರುತ್ತದೆ.

ನಂತರ ದಿನೇಶ್ ರವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೂಡಲೇ ಆರೋಪಿಗಳಾದ ಅಮ್ಮೆಮ್ಮಾರು ನಿವಾಸಿ ಮಹಮ್ಮದ್ ಅರ್ಷದ್(19), ಅಬ್ದುಲ್ ರೆಹಮಾನ್(22) ಮತ್ತು ಮಹಮ್ಮದ್ ಸೈಪುದ್ದೀನ್(22) ರವರನ್ನು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಪೊಲೀಸ್ ಉಪಾಧೀಕ್ಷಕರು ಬಂಟ್ವಾಳ ಉಪವಿಭಾಗ ರವರ ಮಾರ್ಗದರ್ಶನದಲ್ಲಿ ಪಿಎಸ್ಐ ಪ್ರಸನ್ನ ಹಾಗೂ ಸಿಬ್ಬಂದಿರವರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಸವಾದ್ ನ ಬಂಧನಕ್ಕೆ ವಿಶೇಷ ತಂಡವು ಶೋಧ ನಡೆಸುತ್ತಿದೆ.

English summary
Bantwal police have arrested three persons for allegedly attacking a local BJP leader in Pharangipet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X