ಬೆಳ್ತಂಗಡಿಯಲ್ಲಿ ವಿಷಕಾರಿ ಅಣಬೆ ಸೇವಿಸಿದ ತಂದೆ-ಮಗ ದಾರುಣ ಸಾವು
ಮಂಗಳೂರು ನವೆಂಬರ್ 22: ವಿಷಕಾರಿ ಅಣಬೆ ಪದಾರ್ಥ ಸೇವಿಸಿ ತಂದೆ ಹಾಗೂ ಮಗ ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಕೇರಿಮಾರು ಎಂಬಲ್ಲಿ ನಡೆದಿದೆ.
ಪುದುವೆಟ್ಟು ಗ್ರಾಮದ ಕೇರಿಮಾರು ನಿವಾಸಿಗಳಾದ ಗುರುವ ಮೇರ (80) ಹಾಗೂ ಅವರ ಪುತ್ರ ಓಡಿಯಪ್ಪ (41) ಮೃತ ದುರ್ದೈವಿಗಳು ಎಂದುಗುರುತಿಸಲಾಗಿದೆ.
ನವೆಂಬರ್ 21ರಂದು ಮಧ್ಯಾಹ್ನ 3 ಗಂಟೆಗೆ ಮೃತ ಓಡಿಯಪ್ಪ ಕಾಡಿನಿಂದ ಅಣಬೆ ತಂದು ಸಾಂಬಾರು ಮಾಡಿದ್ದರು. ಅದನ್ನು ಅವರ ತಂದೆ ಗುರುವ ಮೇರ ಹಾಗೂ ಓಡಿಯಪ್ಪ ರಾತ್ರಿ ಊಟಕ್ಕೆ ತಿಂದಿದ್ದರು. ಆ ಬಳಿಕ ಇಬ್ಬರೂ ವಾಂತಿ ಮಾಡಿಕೊಂಡಿದ್ದು, ಮನೆಯ ಮುಂದೆ ಶವವಾಗಿ ಪತ್ತೆಯಾಗಿದ್ದಾರೆ. ಗುರುವ ಮೇರ ಅವರ ಶವ ಮನೆಯ ಮುಂಭಾಗದ ಅಂಗಳದಲ್ಲಿ ಪತ್ತೆಯಾದರೆ, ಅವರ ಪುತ್ರ ಓಡಿಯಪ್ಪ ಅವರ ಮೃತದೇಹ ಸ್ವಲ್ಪ ದೂರದಲ್ಲಿ ಕಂಡುಬಂದಿದೆ.

ಗುರುವ ಮೇರ ಮತ್ತೋರ್ವ ಪುತ್ರ ಮರುದಿನ ಬೆಳಗ್ಗೆ 6.30 ಗಂಟೆಗೆ ಮನೆಗೆ ಬಂದಾಗ ತಂದೆ ಗುರುವ ಮತ್ತು ತಮ್ಮ ಓಡಿಯಪ್ಪ ಅಂಗಳದಲ್ಲಿ ಬಿದ್ದಿರುವುದು ಕಂಡುಬಂದಿದೆ. ಈ ವೇಳೆ ಗಾಬರಿಗೊಂಡ ಅವರು ತಕ್ಷಣವೇ ಆರೈಕೆ ಮಾಡಿದ್ದಾರೆ. ಆದರೆ ಅವರಿಬ್ಬರಿಗೂ ಪ್ರಜ್ಞೆ ಇರಲಿಲ್ಲ. ಕೂಡಲೇ ಈ ವಿಚಾರವನ್ನು ಸಂಬಂಧಿಕರಿಗೆ ಹಾಗೂ ಅಕ್ಕಪಕ್ಕದ ಮನೆಯವರಿಗೆ ತಿಳಿಸಿದ್ದಾರೆ. ಕೂಡಲೇ ಅನೇಕರು ಬಂದಿದ್ದು, ಪರಿಶೀಲಿಸಿದಾಗ ಇಬ್ಬರು ಸಾವನ್ನಪ್ಪಿರುವುದು ಧೃಡಪಟ್ಟಿದೆ.
ಘಟನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುರುವ ಮೇರ ಹಾಗೂ ಓಡಿಯಪ್ಪ ವಿಷಕಾರಿ ಅಣಬೆ ಸೇವಿಸಿ ಮೃತಪಟ್ಟಿದ್ದಾರೆ ಎಂದು ಗುರುವ ಅವರ ಮಗ ಕರ್ತ ಪೊಲೀಸ್ ವರದಿಯಲ್ಲಿ ಉಲ್ಲೇಖ ಮಾಡಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications