Breaking: ಫಾಜಿಲ್ ಹತ್ಯೆ ಪ್ರಕರಣ, 6 ಆರೋಪಿಗಳ ಬಂಧನ
ಮಂಗಳೂರು, ಆಗಸ್ಟ್ 02: ಮಂಗಳೂರಿನ ಸುರತ್ಕಲ್ನಲ್ಲಿ ಯುವಕ ಮಹಮ್ಮದ್ ಫಾಜಿಲ್ ಮಂಗಲಪೇಟೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ 6 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲಿಸರು ತಿಳಿಸಿದ್ದಾರೆ.
ಫಾಜಿಲ್ ಹತ್ಯೆ ಹಿಂದೆ ಸುಹಾಸ್ ಶೆಟ್ಟಿ ಗ್ಯಾಂಗ್ ಕೈವಾಡ ಇದೆಯೆಂದು ಸೋಮವಾರ ಹಿರಿಯ ಪೊಲೀಸ್ ಅಧಿಕಾರಿಗಳು ಶಂಕಿಸಿದ್ದರು. ಇದಕ್ಕೆ ಪೂರಕವೆಂಬಂತೆ ಈಗ ಬಂಧಿತ ಆರು ಮಂದಿಯೂ ಸುಹಾಸ್ ಶೆಟ್ಟಿ ಗ್ಯಾಂಗ್ಗೆ ಸೇರಿದವರಾಗಿದ್ದಾರೆ.
ಬಂಧಿತ ಆರೋಪಿಗಳ ಮೇಲೆ ಈ ಹಿಂದೆಯೂ ಅಪರಾಧ ಪ್ರಕರಣಗಳು ದಾಖಲಾಗಿವೆ. ಆರೋಪಿಗಳನ್ನು ಸುರತ್ಕಲ್ ಠಾಣೆಗೆ ಕರೆದೊಯ್ಯಲಾಗಿದೆ. ಕೊಲೆಯ ಉದ್ದೇಶವನ್ನು ತಿಳಿದುಕೊಳ್ಳಲು ಆರೋಪಿಗಳ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

ಭಾನುವಾರವಷ್ಟೇ ಮಹಮ್ಮದ್ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಂಧನವಾಗಿತ್ತು. ಆರೋಪಿ ಅಜಿತ್ ಕ್ರಾಸ್ತ ಎಂಬುವವನನ್ನು ಪೊಲೀಸರು ಬಂಧಿಸಿದ್ದರು. ಆರೋಪಿಗಳು ಹತ್ಯೆ ಮಾಡಲು ಅಜಿತ್ ಕಾರಿನಲ್ಲಿ ಆಗಮಿಸಿದ್ದರು ಎಂಬುದು ಸದ್ಯದ ಮಾಹಿತಿ.
ಬಂಧಿತ ಅಜಿತ್ ಕ್ರಾಸ್ತ ನೀಡಿದ ಸುಳಿವಿನ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಫಾಜಿಲ್ ಹತ್ಯೆಗೆ ಬಿಳಿ ಹುಂಡೈ ಕಾರನ್ನು ಬಳಸಲಾಗಿತ್ತು. ಫಾಜಿಲ್ ಹತ್ಯೆಗೆ ಬಳಸಿದ್ದ ಕಾರು ಸಂಚಾರ ನಡೆಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆರೋಪಿ ಅಜಿತ್ ಕ್ರಾಸ್ತಾ ಈ ಹುಂಡೈ ಕಾರಿನ ಮಾಲೀಕರು.
ಫಾಜಿಲ್ ಹತ್ಯೆಯ ತನಿಖೆಯನ್ನು ಮಂಗಳೂರು ಪೊಲೀಸ್ ಕಮಿಷನರೇಟ್ನ ಎಸಿಪಿ ಮಹೇಶ್ ಕುಮಾರ್ ನಡೆಸುತ್ತಿದ್ದಾರೆ.

"ಹತ್ಯೆಯಾದವರು ಯಾವ ಧರ್ಮದವರಾಗಿರಲಿ ಪೊಲೀಸ್ ತನಿಖೆ ಒಂದೇ ರೀತಿ ನಡೆಯುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಸರಣಿ ಹತ್ಯೆಯ ತನಿಖೆ ಸಂಪೂರ್ಣವಾದ ಬಳಿಕ ಆರೋಪಿಗಳು ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಾರೆಯೇ ಎಂಬುದನ್ನು ಚಾರ್ಜ್ ಶೀಟ್ನಲ್ಲಿ ತಿಳಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ" ಎಂದು ಡಿಜಿ ಪ್ರವೀಣ್ ಸೂದ್ ಹೇಳಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications