ದಕ್ಷಿಣ ಕನ್ನಡ ಜಿಲ್ಲೆಗೂ ಹಬ್ಬಿದ ಮಂಗನಕಾಯಿಲೆಯ ಭೀತಿ
ಮಂಗಳೂರು, ಜನವರಿ 10: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮಂಗನ ಕಾಯಿಲೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ನಡುವೆ ಮಲೆನಾಡಿನ ಅಂಚಿನಲ್ಲಿರುವ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲ ಭಾಗಗಳಲ್ಲಿ ಮಂಗನ ಕಾಯಿಲೆಯ ಭೀತಿ ಎದುರಾಗಿದೆ.
ಕಾಡಿನಲ್ಲಿ ಮಂಗಗಳು ಸತ್ತಿರುವುದು ಪತ್ತೆಯಾದರೆ ತಕ್ಷಣ ಅರಣ್ಯ, ಪಶು ಸಂಗೋಪನೆ ಮತ್ತು ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಲಾಗಿದೆ.
ಮಂಗನ ಕಾಯಿಲೆ ಸಂಬಂಧಿಸಿ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಮಲೆನಾಡಿನ ತಪ್ಪಲಿನಲ್ಲಿರುವ ಹಳ್ಳಿಗಳಲ್ಲಿ ಇದಕ್ಕಾಗಿ ವಿವಿಧ ತಂಡಗಳನ್ನು ರಚಿಸಲಾಗಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರು ಶಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮಂಗಳೂರಿನ ಎ.ಜೆ. ಆಸ್ಪತ್ರೆ, ಫಾದರ್ ಮುಲ್ಲರ್ ಮತ್ತು ವೆನ್ಲಾಕ್ ನಲ್ಲಿ ತಲಾ ಒಬ್ಬರು ಶಂಕಿತ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇದು ಮಂಗನ ಕಾಯಿಲೆ ಎನ್ನುವುದು ಇನ್ನು ದೃಢಪಟ್ಟಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ರಾಮಕೃಷ್ಣ ರಾವ್ ಸ್ಪಷ್ಟಪಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಉಲ್ಬಣಿಸಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

ಕಾಡಿಗೆ ಹೋಗುವಾಗ ಜಾಗೃತೆವಹಿಸಿ
ಜಿಲ್ಲೆಯ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಮಂಗನ ಕಾಯಿಲೆ ಶಂಕಿತ ರೋಗಿಗಳು ಚಿಕಿತ್ಸೆ ಪಡೆದರೆ ಇಲಾಖೆಗೆ ಮಾಹಿತಿ ನೀಡುವಂತೆ ಸೂಚನೆ ರವಾನಿಸಲಾಗಿದೆ. ಮಂಗನ ಕಾಯಿಲೆ ಉಣಗು ಹುಳುಗಳಿಂದ ಹರಡುವುದರಿಂದ ಕಾಡಂಚಿನ ಮಂದಿ, ಕಾಡು ಪ್ರವೇಶಿಸುವ ಸಂದರ್ಭದಲ್ಲಿ ಜಾಗೃತೆವಹಿಸುವಂತೆ ತಿಳಿಸಲಾಗಿದೆ. ಎಮ್ಮೆ, ಆಕಳು ಮುಂತಾದ ಸಾಕು ಪ್ರಾಣಿಗಳನ್ನು ಕಾಡಿಗೆ ಬಿಡುವುದನ್ನು, ಜೇನು ಮತ್ತು ಇನ್ನಿತರ ಕಾಡುತ್ಪತ್ತಿಗಳನ್ನು ಸಂಗ್ರಹಿಸುವುದನ್ನು ಸ್ವಲ್ಪ ದಿನಗಳ ಮಟ್ಟಿಗೆ ಸ್ಥಗಿತಗೊಳಿಸಬೇಕು ಎಂದು ಸೂಚನೆ ರವಾನಿಸಲಾಗಿದೆ.

ಬಿಸಿ ನೀರಿನಲ್ಲಿ ತೊಳೆಯಬೇಕು
ಕಾಡಿಗೆ ಹೋಗುವುದಾದರೆ ಉಣ್ಣಿ ನಿರೋಧಕ ಡಿಎಂಪಿ ತೈಲವನ್ನು ಕೈಕಾಲುಗಳಿಗೆ ಹಚ್ಚಿಕೊಳ್ಳಬೇಕು. ಕಾಡಿನಿಂದ ಬಂದ ತಕ್ಷಣ ಬಿಸಿ ನೀರಿನಲ್ಲಿ ಸಾಬೂನು ಹಚ್ಚಿ ಸ್ನಾನ ಮಾಡಬೇಕು. ಧರಿಸಿದ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕು ಎಂದು ಮಾಹಿತಿ ನೀಡಲಾಗಿದೆ.

ಮಂಗನ ಕಾಯಿಲೆ ಪ್ರಕರಣ
ಮಂಗನ ಕಾಯಿಲೆ ಸಂಬಂಧಪಟ್ಟಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2004-05ರಲ್ಲಿ 3, 2005-06ರಲ್ಲಿ 17, 2006-07ರಲ್ಲಿ 54, 2014-15ರಲ್ಲಿ 1 ಮಂಗನ ಕಾಯಿಲೆ ಪ್ರಕರಣ ಕಂಡು ಬಂದಿದೆ. 2005-06, 2006-07 ಹಾಗೂ 2014-15ರಲ್ಲಿ ತಲಾ ಒಂದು ಸಾವು ಸಂಭವಿಸಿದೆ.

ಆರೋಗ್ಯ ಕೇಂದ್ರ ಸಂಪರ್ಕಿಸಿ
ಮಂಗನ ಕಾಯಿಲೆಯ ಲಕ್ಷಣಗಳೆಂದರೆ 8-10 ದಿನ ಬಿಡದೆ ಕಾಡುವ ವಿಪರೀತ ಜ್ವರ, ತಲೆನೋವು, ಕೈಕಾಲು ನೋವು, ಸೊಂಟ ನೋವು, ವಿಪರೀತ ನಿಶ್ಯಕ್ತಿ, ಅತಿಯಾದ ಬಾಯಾರಿಕೆ ಕಾಣಿಸಿಕೊಳ್ಳುತ್ತದೆ. ಜ್ವರ ಬಂದ ಎರಡು ವಾರಗಳ ಬಳಿಕ ಮೂಗು, ಬಾಯಿ ಮತ್ತು ಗುದದ್ವಾರದಿಂದ ರಕ್ತಸ್ರಾವ ಆಗುತ್ತದೆ. ಯಾವುದೇ ಲಕ್ಷಣ ಕಾಣಿಸಿಕೊಂಡರೂ ನಿರ್ಲಕ್ಷ್ಯ ಮಾಡದೇ ಸಮೀಪದ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications