ಮಾರ್ಚ್ 7ರಂದು 'ಹಳ್ಳಿ ಮನೆ ರೊಟ್ಟಿಸ್' ಶಿಲ್ಪಾಗೆ ಮಹೀಂದ್ರಾದಿಂದ ಪುರಸ್ಕಾರ
ಮಂಗಳೂರು, ಫೆಬ್ರವರಿ 26: 'ಹಳ್ಳಿ ಮನೆ ರೊಟ್ಟಿಸ್' ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಂಡು ಇತರರಿಗೂ ಮಾದರಿಯಾಗಿರುವ ಮಂಗಳೂರಿನ ಶಿಲ್ಪಾ ಅವರನ್ನು ಮಹೀಂದ್ರಾ ಅಂಡ್ ಮಹೀಂದ್ರಾ ಕಂಪೆನಿಯು ಮಹಿಳಾ ಸಾಧಕಿ ಪುರಸ್ಕಾರಕ್ಕೆ ಆಯ್ಕೆ ಮಾಡಿದೆ.
ಈ ಕುರಿತು ಕಂಪೆನಿಯಿಂದ ಶಿಲ್ಪಾ ಅವರಿಗೆ ದೂರವಾಣಿ ಕರೆ ಬಂದಿದೆ. ಮಾರ್ಚ್ 7ರಂದು ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬಂದು, ಪುರಸ್ಕಾರ ಸ್ವೀಕರಿಸುವಂತೆ ತಿಳಿಸಲಾಗಿದೆ. ಅಲ್ಲದೆ ಶಿಲ್ಪಾ ಅವರಿಗೆ ಪ್ರಯಾಣಕ್ಕಾಗಿ ವಿಮಾನದ ಟಿಕೆಟ್ ಅನ್ನು ಅಂಚೆ ಮೂಲಕ ಮನೆ ವಿಳಾಸಕ್ಕೆ ಕಳುಹಿಸಲಾಗಿದೆ .
ದೆಹಲಿಯಲ್ಲಿ ತಂಗಲು ವಸತಿ ವ್ಯವಸ್ಥೆಯನ್ನು ಶಿಲ್ಪಾ ಅವರಿಗೆ ಕಲ್ಪಿಸಲಾಗಿದೆ. ದೇಶಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 16 ಮಹಿಳೆಯರನ್ನು ಎಂ ಅಂಡ್ ಎಂ ಕಂಪೆನಿ ಪುರಸ್ಕಾರಕ್ಕೆ ಆಯ್ಕೆ ಮಾಡಿದ್ದು, ಅದರಲ್ಲಿ ಹಳ್ಳಿ ಮನೆ ರೊಟ್ಟಿ ಶಿಲ್ಪಾ ಕೂಡ ಒಬ್ಬರು. ಶಿಲ್ಪಾ ಅವರ ಹಳ್ಳಿ ಮನೆ ರೊಟ್ಟಿಸ್ ಬೀದಿ ಬದಿ ವ್ಯಾಪಾರದ ಬಗ್ಗೆ ಸಾಕ್ಷ್ಯಚಿತ್ರ ಮಾಡಿ, ಅದನ್ನು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಸಾರ ಮಾಡುವ ಬಗ್ಗೆಯೂ ಮಾಹಿತಿ ನೀಡಲಾಗಿದೆ.

ಹಾಸನ ಮೂಲದ ಶಿಲ್ಪಾ ಮಂಗಳೂರಿಗೆ ಬಂದು, ಹಲವಾರು ಕಷ್ಟಗಳ ನಡುವೆ ಬೀದಿ ಬದಿ ರೊಟ್ಟಿ ವ್ಯಾಪಾರ ಆರಂಭಿಸಿದ್ದರು. ಶಿಲ್ಪಾ ಅವರ ಹಳ್ಳಿಮನೆ ರೊಟ್ಟಿಸ್ ಮೊಬೈಲ್ ಕ್ಯಾಂಟೀನ್ ಸಾಧನೆಯ ಬಗ್ಗೆ ಮಾಧ್ಯಮಗಳ ಬಂದ ವರದಿಯನ್ನು ನೋಡಿ ಸ್ಪಂದಿಸಿದ ಮಹೀಂದ್ರಾ ಕಂಪೆನಿಯ ಸಿಇಒ ಆನಂದ್ ಮಹೀಂದ್ರಾ ಇತ್ತೀಚೆಗೆ ಶಿಲ್ಪಾ ಅವರಿಗೆ ತಮ್ಮ ಕಂಪೆನಿಯ ಪಿಕಪ್ ವಾಹನವೊಂದನ್ನು ಉಡುಗೊರೆಯಾಗಿ ನೀಡಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications