ಸುಬ್ರಹ್ಮಣ್ಯ,ಧರ್ಮಸ್ಥಳಕ್ಕೆ ಅರ್ಜುನ್ ಸರ್ಜಾ ಭೇಟಿ ನೀಡಿದ್ದು ಯಾಕೆ?
ಬೆಳ್ತಂಗಡಿ, ನವೆಂಬರ್, 05: ಚಲನಚಿತ್ರ ನಟ ಅರ್ಜುನ್ ಸರ್ಜಾ ಅವರು ಬುಧವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಹಿತ ಭೇಟಿ ನೀಡಿ ದೇವರ ದರ್ಶನ ಪಡೆದರು.
ಅರ್ಜುನ್ ಸರ್ಜಾ ಅವರ 'ಗೇಮ್' ಚಲನಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಜೊತೆಯಲ್ಲಿ ಪತ್ನಿ ಆಶಾರಾಣಿ, ಪುತ್ರಿ ಐಶ್ವರ್ಯಾ, ಅತ್ತೆ ಗೀತಾ, ನಿರ್ದೇಶಕ ಎ.ಎಂ.ಆರ್. ರಮೇಶ್, ಸಹ ನಿರ್ಮಾಪಕ ಧನಂಜಯ, ದೇಶರಾಜ್, ದೇಗುಲದ ಶಿಷ್ಟಚಾರ ಅಧಿಕಾರಿ ವೆಂಕಟ್ ರಾಜ್, ತಿಮ್ಮಪ್ಪ ಪುತ್ತೂರು, ಪ್ರಸಾದ್, ರಮೇಶ್ ಮುಂತಾದವರು ಇದ್ದರು.[ಧರ್ಮಸ್ಥಳ ದೇವಾಲಯ ವಶ ಪಡಿಸಿಕೊಳ್ಳಲು ಹೊರಟಿತ್ತೇ ಸರಕಾರ?]

ಧರ್ಮಸ್ಥಳ ಭೇಟಿ
ಸುಬ್ರಹ್ಮಣ್ಯ ಭೇಟಿ ಬಳಿಕ ಅರ್ಜುನ್ ಸರ್ಜಾ ಅವರು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಹಿತರಾಗಿ ಆಗಮಿಸಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಬಳಿಕ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರೊಂದಿಗೆ ಮಾತುಕತೆ ನಡೆಸಿದರು. ಬಳಿಕ ಹೊಸೋಳಿಗಮ್ಮ ಗುಡಿ ಹಾಗೂ ಆದಿಸುಬ್ರಹ್ಮಣ್ಯ ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದರು.[ವೀರೇಂದ್ರ ಹೆಗ್ಗಡೆಯವರ ಮೇಲೆ ಮತ್ತೇನಿದು ಗಂಭೀರ ಆರೋಪ !]
ನವೆಂಬರ್ 27: 'ಗೇಮ್' ಚಲನಚಿತ್ರ ತೆರೆಗೆ
ಅರ್ಜುನ್ ಸರ್ಜಾ ಅವರು "ಗೇಮ್' ಕನ್ನಡ ಚಲನಚಿತ್ರದಲ್ಲಿ ಪೊಲೀಸ್ ಪಾತ್ರದಲ್ಲಿ ನಟಿಸಿದ್ದು, ನ. 27ರಂದು ತೆರೆ ಕಾಣಲಿದೆ. 'ಪಾತಕ ಲೋಕಕ್ಕೆ ಸಂಬಂಧಿಸಿದ ವಿವಿಧ ಆಯಾಮಗಳನ್ನು ಹೊಂದಿದ ವಿಭಿನ್ನ ಕಥಾ ಹಂದರವನ್ನು ಒಳಗೊಂಡಿರುವ ಕಮರ್ಷಿಯಲ್ ಚಲನಚಿತ್ರ ಇದಾಗಿದೆ.
ಈಗಾಗಲೇ ಅಟ್ಟಹಾಸ, ಸೈನೈಡ್ ಮುಂತಾದ ಕನ್ನಡ ಚಲನಚಿತ್ರಗಳನ್ನು ನಿರ್ಮಿಸಿ ಯಶಸ್ವಿಯಾಗಿರುವ ನಿರ್ಮಾಪಕ ಎಂ.ಆರ್. ರಮೇಶ ಈ ಚಲನಚಿತ್ರ ನಿರ್ಮಿಸಿದ್ದಾರೆ. ಸಹ ನಿರ್ಮಾಣದಲ್ಲಿ ದೇಶರಾಜ್, ಧನಂಜಯ ಸಹಕರಿಸಿದ್ದಾರೆ. ಚಿತ್ರದಲ್ಲಿ ಮನಿಷಾ ಕೊಯಿರಾಲಾ ನಾಯಕಿಯಾಗಿ ನಟಿಸಿದ್ದಾರೆ ಎಂದು ಅರ್ಜುನ್ ಸರ್ಜಾ ಅವರು ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರಿಗೆ ತಿಳಿಸಿದರು.[ಅರ್ಜುನ್ ಸರ್ಜಾ, ಮನಿಷಾ 'ಗೇಮ್ ಟ್ರೈಲರ್ ನೋಡಿದ್ರಾ?]
ಕನ್ನಡದಲ್ಲಿ ಈಗಾಗಲೇ 150ಕ್ಕೂ ಹೆಚ್ಚು ಚಲನಚಿತ್ರದಲ್ಲಿ ನಟಿಸಿದ್ದೇನೆ ಎಂದು ಹೇಳಿದರು. ತುಳು ಚಿತ್ರರಂಗದ ಬಗ್ಗೆ ಕೇಳಿದ ಪ್ರಶ್ನೆಗೆ ತುಳು ಚಿತ್ರರಂಗ ಕೂಡ ಬೆಳೆಯುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications