ಬಾಲಕನ ಮೇಲೆ ಹಲ್ಲೆ ಮಾಡಿದ್ದ ವೇದ ಶಿಕ್ಷಕನ ವಿರುದ್ಧ ಎಫ್ಐಆರ್
ಮಂಗಳೂರು, ಸೆಪ್ಟೆಂಬರ್, 10 : ವಿಟ್ಲದ ವೇದ ಪಾಠ ಶಾಲೆಯೊಂದರಲ್ಲಿ ತರಗತಿಗೆ ತಡವಾಗಿ ಬಂದ ವಿದ್ಯಾರ್ಥಿಗೆ ಶಿಕ್ಷಕ ಮನ ಬಂದಂತೆ ಅಮಾನವೀಯವಾಗಿ ಥಳಿಸಿರುವ ಘಟನೆ ಬೆಳಕಿಗೆ ಬಂದಿತ್ತು. ಸದ್ಯ, ವಿಟ್ಲ ಪೊಲೀಸರು ಶಿಕ್ಷಕನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಬಾಲಕನ ಮೇಲೆ ಹಲ್ಲೆ ನಡೆಸಿದ್ದ ವೇದ ಶಿಕ್ಷಕ ಶ್ಯಾಮ ಸುಂದರ ಶಾಸ್ತ್ರಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿಯು ವಿಟ್ಲ ಪೊಲೀಸ್ ಠಾಣೆ ಮತ್ತು ಶಿಶು ಕಲ್ಯಾಣ ಅಭಿವೃದ್ಧಿ ಇಲಾಖೆಗೆ ದೂರು ಸಲ್ಲಿಸಿತ್ತು. [ಅಮೆರಿಕಾ ಪ್ರಶಸ್ತಿ ಪಡೆದ ಬೆಂಗಳೂರು ಮೂಲದ ಶಿಕ್ಷಕಿ]

ಈ ದೂರಿನ ಅನ್ವಯ ವಿಟ್ಲ ಪೊಲೀಸರು ಗುರುವಾರ ಶಿಕ್ಷಕ ಶ್ಯಾಮ ಸುಂದರ ಶಾಸ್ತ್ರಿ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಈ ಘಟನೆ ಖಂಡಿಸಿ ಸೆ.11ರಂದು ವಿಟ್ಲದಲ್ಲಿ ಮೌನ ಮೆರವಣಿಗೆ ನಡೆಸಲಾಗುತ್ತದೆ ಎಂದು ದಲಿತ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ. ಸೇಸಪ್ಪ ಬೆದ್ರಕಾಡು ತಿಳಿಸಿದ್ದಾರೆ. [ಉಗ್ರರಿಂದ ಬಚಾವಾದ ಶಿಕ್ಷಕ ವಿಜಯ್ ಹೇಳಿದ ಕಿಡ್ನಾಪ್ ಕಥೆ]
ಏನಿದು ಘಟನೆ : 2015ರ ಮೇ ತಿಂಗಳಿನಲ್ಲಿ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಬ್ರಾಹ್ಮಣ ಮಕ್ಕಳ ವೇದ ಪಾಠ ಶಾಲೆಯಲ್ಲಿ ನಡೆದಿದೆ. ತಡವಾಗಿ ವೇದ ಪಾಠಶಾಲೆಗೆ ಬಂದ ವಿದ್ಯಾರ್ಥಿಯನ್ನು ಉಳಿದೆಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮುಂದೆ ಶರ್ಟ್ ಬಿಚ್ಚಿ ಥಳಿಸಿರುವುದನ್ನು ದೇವಸ್ಥಾನಕ್ಕೆ ಬಂದವರು ಚಿತ್ರೀಕರಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Karnataka Weather: ಕಲಬುರಗಿಯಲ್ಲಿ 41ಡಿಸೆ ತಾಪಮಾನ, ಉಷ್ಣಅಲೆ ಎಚ್ಚರಿಕೆ, ಕೆಲವೆಡೆ ಮಳೆ ಸಾಧ್ಯತೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications