ಅನಂತಮೂರ್ತಿ ಮೂತ್ರ ಮಾಡಿದ 'ದೇವರ ಕಲ್ಲು' ಪತ್ತೆ
ಮಂಗಳೂರು, ಜೂ.20: ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಡಾ. ಯು.ಆರ್ ಆನಂತಮೂರ್ತಿ ಅವರ ಲೇಖನವೊಂದರಲ್ಲಿರುವ ವಿವಾದಿತ 'ದೇವರ ಕಲ್ಲು' ಪತ್ತೆಯಾಗಿದೆ. ಈ ದೇವರ ಕಲ್ಲು ಕುಡ್ಲದ ಆರಾಧ್ಯ ದೈವ ಪಂಜುರ್ಲಿ ಭೂತದ ಕಲ್ಲೇ ಆಗಿದೆ. ನಮ್ಮ ದೈವಕ್ಕೆ ಅವಮಾನ ಮಾಡಿರುವ ಯು.ಆರ್ ಅನಂತಮೂರ್ತಿ ಅವರ ಮೇಲೆ ಕ್ರಮ ಜರುಗಿಸಿ ಎಂದು ಇಲ್ಲಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಡಾ.ಯು.ಆರ್.ಅನಂತಮೂರ್ತಿ 'ಬೆತ್ತಲೆ ಪೂಜೆ ಏಕೆ ಕೂಡದು?' ಎಂಬ ಕೃತಿಯ ಬರಹವನ್ನು ಉಲ್ಲೇಖಿಸಿ ಹಿಂದುಗಳ ಭಾವನೆಗಳನ್ನು ಘಾಸಿಗೊಳಿಸುವಂತಹ ಹೇಯ ಹೇಳಿಕೆಯನ್ನು ನೀಡಿದ ಎಂ.ಎಂ.ಕಲಬುರ್ಗಿ ಅವರನ್ನು ಕೂಡಲೇ ಬಂಧಿಸಿ ಗಡೀಪಾರು ಮಾಡಬೇಕೆಂದು ಹಿಂದುಪರ ಸಂಘಟನೆಗಳು ಮತ್ತೊಮ್ಮೆ ಪೊಲೀಸ್ ಠಾಣೆ ಮೆಟ್ಟಿಲೇರಿವೆ.
ಈ ರೀತಿ ಶಾಂತಿ ಕದಡುವ ಲೇಖನ, ಹೇಳಿಕೆಗಳನ್ನು ಹಿಂದೂ ಸಮಾಜ ಸಹಿಸುವುದಿಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದುರುಪಯೋಗ ಮಾಡುತ್ತಿರುವ ಈ ಸಾಹಿತಿಗಳ ಮೇಲೆ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಎಂದು ಆಗ್ರಹಿಸಿ ಪುನೀತ್ ಕೊಠಾರಿ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.

ಎಫ್ ಐಆರ್ ದಾಖಲು: ಪುನೀತ್ ಅವರು ನೀಡಿರುವ ದೂರನ್ನು ಸ್ವೀಕರಿಸಿರುವ ಪೊಲೀಸರು ಯು.ಆರ್ ಅನಂತಮೂರ್ತಿ ಅವರ ಮೇಲೆ ಎಫ್ ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಚಿಕ್ಕಮಗಳೂರಿನ ಬಾಳೆಹೊನ್ನೂರು, ಗುಲ್ಬರ್ಗಾ ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಯು.ಆರ್ ಅನಂತಮೂರ್ತಿ ಅವರ ಮೇಲೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. [ಎಫ್ಐಆರ್ ವಿವರ ಇಲ್ಲಿ ಓದಿ]
ಇತ್ತೀಚೆಗೆ ಬೆಂಗಳೂರಿನ ಟೌನ್ ಹಾಲ್ ಬಳಿ ಬಜರಂಗ ದಳ, ವಿಶ್ವ ಹಿಂದೂ ಪರಿಷತ್ ಮತ್ತು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪಿಂಡ ಪ್ರದಾನ ಮಾಡಿ ಎಂ.ಎಂ.ಕಲಬುರ್ಗಿ ಮತ್ತು ಅನಂತ ಮೂರ್ತಿಯವರ ಪ್ರತಿಕೃತಿಯನ್ನು ದಹಿಸುವ ಮೂಲಕ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದ್ದರು. [ದೇವರ ಬಗ್ಗೆ ಕಲಬುರ್ಗಿ ಹೇಳಿದ್ದೇನು?]
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications