ಮಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗೆ ಬೆಂಕಿ: ದ್ವಿಚಕ್ರ ವಾಹನಗಳು ಭಸ್ಮ
ಮಂಗಳೂರು, ಜೂ 24: ಎಲೆಕ್ಟ್ರಿಕ್ ಸ್ಕೂಟರ್ ಗಳ ಶೋರೂಂ ಒಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ನಾಗುರಿಯಲ್ಲಿದ್ದ ಒಕಿನಾವ ಕಂಪನಿಯ ಸ್ಕೂಟರ್ ಶೋ ರೂಂನಲ್ಲಿ ಇಂದು ಬೆಳ್ಳಂಬೆಳಗ್ಗೆ ಶೋ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧದಲ್ಲಿ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಪರಿಣಾಮ ಶೋರೂಂನಲ್ಲಿರುವ ಲಕ್ಷಾಂತರ ರೂ. ಮೌಲ್ಯದ ಇಲೆಕ್ಟ್ರಿಕ್ ಸ್ಕೂಟರ್ ಗಳು ಅಗ್ನಿಗಾಹುತಿಯಾಗಿದೆ.
ಯಾವುದೇ ಸಾವು-ನೋವು ಸಂಭವಿಸಿಲ್ಲ
ಪ್ರಶಾಂತ್ ಎಂಬವರ ಮಾಲಕತ್ವದ ಈ ಒಕಿನವ ಇಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಈ ಅಗ್ನಿ ದುರಂತ ಸಂಭವಿಸಿದ್ದು, ಇಡೀ ಕಟ್ಟಡದಲ್ಲಿ ಹೊಗೆಯು ತುಂಬಿಕೊಂಡಿದ್ದು, ಮೇಲಿನ ಅಂತಸ್ತಿನಲ್ಲಿ ಕಟ್ಟಡದ ಮಾಲೀಕರ ಕುಟುಂಬ ವಾಸವಾಗಿದೆ. ಆದರೆ ಯಾವುದೇ ಸಾವು-ನೋವು ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ತಕ್ಷಣ ಪಾಂಡೇಶ್ವರ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಟ್ಟಡದ ಮಾಲಕ ಸಿರಾಜ್, "ಈ ಕಟ್ಟಡವನ್ನು ನನ್ನ ತಂದೆ ಹಮೀದ್ ಪ್ರಶಾಂತ್ ಎಂಬುವವರಿಗೆ ಕಳೆದ ನಾಲ್ಕು ವರ್ಷಗಳ ಹಿಂದೆ ಲೀಸ್ ಗೆ ನೀಡಿದ್ದಾರೆ. ಕಳೆಗೆ ಶೋ ರೂಂ ಇದ್ದು ಶೋ ರೂಂ ಮೇಲುಗಡೆಯ ಮನೆಯಲ್ಲಿ ನಾವು ವಾಸವಿದ್ದೆವು. ಬೆಳಗ್ಗೆ 8 ಗಂಟೆಯಿಂದಲೇ ಕಟ್ಟಡದಲ್ಲಿ ಆಗಾಗ ವಿದ್ಯುತ್ ಪವರ್ ಕಟ್ ಆಗೋದು ಮತ್ತೆ ಬರೋದು ಆಗುತ್ತಿತ್ತು. ಮೊದಲಿಗೆ ಇದು ವಿದ್ಯುತ್ ಸಮಸ್ಯೆಯಿಂದ ಅಂತಾ ಭಾವಿಸಿದ್ದೇವಿ. ಆದರೆ ಆದರೆ 9 ಗಂಟೆಯ ಹೊತ್ತಿಗೆ ನನ್ನ ತಾಯಿ ಕಿಟಕಿ ತೆರೆದು ನೋಡುವಾಗ ಎಲೆಕ್ಟ್ರಿಕ್ ವಾಹನದ ಶೋರೂಂ ಒಳಗಿನಿಂದ ಹೊಗೆ ಕಾಣಿಸಲಾರಂಭಿಸಿದೆ. ಬೆಂಕಿಯ ತೀವ್ರತೆ ಕಟ್ಟಡದ ತುಂಬಾ ವ್ಯಾಪಿಸಿದ ಹಿನ್ನೆಲೆ ಮನೆಯಲ್ಲಿದ್ದ ಗ್ಯಾಸ್ ಆಫ್ ಮಾಡಿ ತಕ್ಷಣ ಎಚ್ಚೆತ್ತ ನಾವು ಅಗ್ನಿಶಾಮಕದಳಕ್ಕೆ ಕರೆ ಮಾಡಿ ವಿಷಯ ತಿಳಿಸಿದೆವು," ಎಂದು ಕಟ್ಟಡದ ಮಾಲೀಕ ಸಿರಾಜ್ ಮಾಹಿತಿ ನೀಡಿದ್ದಾರೆ.

ಬೆಂಕಿಯ ಕೆನ್ನಾಲಿಗೆಗೆ ವಾಹನಗಳು ಸಂಪೂರ್ಣ ಭಸ್ಮ
ಈ ಶೋ ರೂಂನಲ್ಲಿ ಹತ್ತಕ್ಕೂ ಅಧಿಕ ಒಕಿನವ ಎಲೆಕ್ಟ್ರಿಕ್ ವಾಹನಗಳಿದ್ದು, ಐದಕ್ಕೂ ಅಧಿಕ ವಾಹನಗಳು ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣ ಭಸ್ಮವಾಗಿದೆ. ಉಳಿದ ವಾಹನಗಳು ಬೆಂಕಿಗೆ ಬೆಂದಿವೆ. ಶೋರೂಂ ನ ಕಡತಗಳು, ದಾಖಲೆ ಪತ್ರಗಳು, ಕುರ್ಚಿ, ಡೆಸ್ಕ್ಗಳೆಲ್ಲವೂ ಬೆಂಕಿಗೆ ಸುಟ್ಟು ಕರಕಲಾಗಿದೆ. ಬೆಂಕಿಯ ಜ್ವಾಲೆ ಶೋ ರೂಂ ಮೇಲ್ಭಾಗದಲ್ಲಿದ್ದ ಮನೆಗೂ ವ್ಯಾಪಿಸಿದ್ದು ಮನೆಯಲ್ಲಿ ಪೀಠೋಪಕರಣ, ಗೃಹ ಬಳಕೆಯ ವಸ್ತುಗಳಿಗೆ ಹಾನಿಯಾಗಿದೆ. ನೀರಿನ ಪೈಪ್,ಟ್ಯಾಂಕ್,ಎಸಿ ಡಕ್ ಸೇರಿದಂತೆ ಹಲವು ವಸ್ತುಗಳು ಬೆಂಕಿಗೆ ಸಂಪೂರ್ಣ ಹಾನಿಯಾಗಿದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications