ಕುಮಾರಣ್ಣನ ಬಜೆಟ್ ಬಗ್ಗೆ ಅಸಮಾಧಾನ ಹೊರಹಾಕಿದ ಮೀನುಗಾರರು
Recommended Video

ಮಂಗಳೂರು, ಫೆಬ್ರವರಿ 08: ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ವಿಧಾನ ಸೌಧದಲ್ಲಿ 2019-20 ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಆದರೆ ಬಜೆಟ್ ನಲ್ಲಿ ಮಂಗಳೂರು ಮಹಾನಗರ ಪಾಲಿಕೆ ಅಭಿವೃಧ್ಧಿಗೆ 125 ಕೋಟಿ ರೂಪಾಯಿ ಅನುದಾನ ಹೊರತುಪಡಿಸಿದರೆ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕವಾಗಿ ಯಾವುದೇ ಹೊಸ ಯೋಜನೆ ಘೋಷಣೆ ಅಗಿಲ್ಲದಿರುವುದು ದಕ್ಷಿಣ ಕನ್ನಡದ ಜನರಲ್ಲಿ ನಿರಾಶೆ ಮೂಡಿಸಿದೆ.
ಇಂದು ಮಂಡಿಸಿದ ಬಜೆಟ್ ನಲ್ಲಿ ಕರಾವಳಿ ಮೀನುಗಾರರಿಗೂ ಕೆಲ ಯೋಜನೆಗಳನ್ನು ಘೋಷಿಸಲಾಗಿದೆ. ಮೀನುಗಾರಿಕಾ ದೋಣಿಗಳಿಗೆ ಇಸ್ರೋ ಅಧಿಕೃತಗೊಳಿಸಿರುವ ಡಿಎಟಿ ಉಪಕರಣ ಅಳವಡಿಸಿಕೊಳ್ಳಲು ಶೇ.50ರಷ್ಟು ಸಹಾಯಧನ. ಅದಕ್ಕಾಗಿ 3 ಕೋಟಿ ರೂಪಾಯಿ ಅನುದಾನ. ಮತ್ಸ್ಯಾಶ್ರಯ ಯೋಜನೆ ಮುಂದುವರಿಕೆ, ಪ್ರಗತಿಯಲ್ಲಿರುವ 2,500 ಮನೆಗಳನ್ನು ಪೂರ್ಣಗೊಳಿಸಲು ಕ್ರಮ.
ಉಡುಪಿ ಜಿಲ್ಲೆಯ ಮಲ್ಪೆ ಕಡಲ ತೀರದ ಮೀನುಗಾರಿಕೆ ಚಟುವಟಿಕೆಗೆ ಜೆಟ್ಟಿ ನಿರ್ಮಾಣ , ತ್ಯಾಜ್ಯ ನಿರ್ವಹಣಾ ಘಟಕ ಹಾಗು ಇತರೆ ನೈರ್ಮಲ್ಯ ಸೌಲಭ್ಯಗಳನ್ನು ಅಭಿವೃದ್ಧಿಗೆ 15 ಕೋಟಿ ರೂಪಾಯಿ ಅನುದಾನ. ರಾಜ್ಯದಲ್ಲಿ ಡೀಸೆಲ್ ಮತ್ತು ಸಿಮೆಎಣ್ಣೆ ಪಾಸ್ ಬುಕ್ ಪಡೆದಿರುವ ದೋಣಿಗಳಿಗೆ ಡೀಸೆಲ್ ಮತ್ತು ಸಿಮೆಎಣ್ಣೆ ಸಬ್ಸಿಡಿ ನೀಡಲು 148.5 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ.
ಆದರೆ ಇಂದಿನ ಬಜೆಟ್ ನಲ್ಲಿ ಮೀನುಗಾರಿಕಾ ಕ್ಷೇತ್ರಕ್ಕೆ ಘೋಷಿಸಲಾದ ಯೋಜನೆಯ ಬಗ್ಗೆ ಮೀನುಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೀನುಗಾರ ಮುಖಂಡರ ಪ್ರತಿಕ್ರಿಯೆ ಹೀಗಿದೆ...

ಕೃಷಿ ಇಲಾಖೆ ವ್ಯಾಪ್ತಿಗೆ ತರಬೇಕಿತ್ತು
ಮೀನುಗಾರ ಮುಖಂಡ ರಾಜರತ್ನ ಸನೀಲ್ ಇಂದಿನ ಬಜೆಟ್ ಸಾಧಾರಣ ಬಜೆಟ್ ಎಂದು ಅಭಿಪ್ರಾಯಪಟ್ಟಿದ್ದಾರೆ. ಮೀನುಗಾರಿಕಾ ದೋಣಿಗಳಿಗೆ ಇಸ್ರೋ ಅಧಿಕೃತಗೊಳಿಸಿರುವ ಡಿಎಟಿ ಉಪಕರಣ ಅಳವಡಿಸಿಕೊಳ್ಳಲು ಶೇ. 50ರಷ್ಟು ಸಹಾಯಧನ ನೀಡುವ ಯೋಜನೆ ಒಳ್ಳೆಯ ನಿರ್ಧಾರ. ಆದರೆ ಜನರಿಗೆ ಅತ್ಯಂತ ಹೆಚ್ಚಿನ ಪೌಷ್ಟಿಕಾಂಶವುಳ್ಳ ಮೀನಿನಂತಹ ಆಹಾರ ಒದಗಿಸುವವರು ಮೀನುಗಾರರರು. ಈ ಹಿನ್ನೆಲೆಯಲ್ಲಿ ಮೀನುಗಾರಿಕಾ ಕ್ಷೇತ್ರವನ್ನು ಕೃಷಿ ಇಲಾಖೆ ವ್ಯಾಪ್ತಿಗೆ ತರಬೇಕೆಂಬ ಬೇಡಿಕೆ ಇಡಲಾಗಿತ್ತು. ಸಾಲ ಮನ್ನಾ ಯೋಜನೆ ಕೇವಲ ಕೃಷಿ ಚಟುವಟಿಕೆಗೆ ಮಾತ್ರ ಸೀಮಿತವಾಗಿದೆ. ಈ ಸಾಲ ಮನ್ನಾ ಯೋಜನೆ ಮೀನುಗಾರಿಕಾ ಕ್ಷೇತ್ರಕ್ಕೂ ವಿಸ್ತರಿಸಬೇಕು ಎಂಬ ಬೇಡಿಕೆ ಇಡಲಾಗಿತ್ತು. ಆದರೆ ಈ ಬಜೆಟ್ ನಲ್ಲಿ ಈ ಬೇಡಿಕೆ ಈಡೇರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೀಮೆಎಣ್ಣೆ ಸಬ್ಸಿಡಿ ಬೇಡಿಕೆ ಈಡೇರಿಲ್ಲ
ಡೀಸೆಲ್ ಮತ್ತು ಸೀಮೆಎಣ್ಣೆ ಪಾಸ್ ಬುಕ್ ಪಡೆದಿರುವ ದೋಣಿಗಳಿಗೆ ಡೀಸೆಲ್ ಮತ್ತು ಸೀಮೆಎಣ್ಣೆ ಸಬ್ಸಿಡಿ ವಿಚಾರದಲ್ಲೂ ಬೇಡಿಕೆ ಈಡೇರಿಲ್ಲ ಎಂದು ಹೇಳಿದ ರಾಜರತ್ನ ಸನೀಲ್, ಈಗ ಸಬ್ಸಿಡಿ ದೊರೆಯುತ್ತಿರುವುದು ಕೇವಲ 9 ಸಾವಿರ ಲೀಟರ್ ಡೀಸೆಲ್ ಗೆ ಮಾತ್ರ. ಆದರೆ ನಮ್ಮ ಬೇಡಿಕೆ ಇದ್ದದ್ದು 15 ಸಾವಿರ ಲೀಟರ್ ವರೆಗೆ ಸಬ್ಸಿಡಿ ನೀಡಬೇಕು ಎಂದು. ಆದರೆ ಅದು ಜಾರಿಗೆ ಬಂದಿಲ್ಲ ಎಂಬುದು ವಿಷಾದನೀಯ. ಅದಲ್ಲದೇ ಮಂಗಳೂರಿನ ಮೀನುಗಾರಿಕಾ ಜೆಟ್ಟಿಯಲ್ಲಿ ಮೂಲಭೂತ ಸೌಕರ್ಯ, ನೈರ್ಮಲ್ಯ ಸೌಲಭ್ಯಗಳನ್ನು ಬಜೆಟ್ ನಲ್ಲಿ ನಿರ್ಲಕ್ಷಿಸಿರುವುದು ಬೇಸರ ತಂದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ಬಜೆಟ್ 2019: ಎಚ್.ಡಿ ಕುಮಾರಸ್ವಾಮಿಯವರ ಜನಪ್ರಿಯ ಯೋಜನೆಗಳ ಸಂಪೂರ್ಣ ವಿವರ..

ರೈತರ ಮೊಗದಲ್ಲಿ ಮಂದಹಾಸ
ಈ ನಡುವೆ ಬಜೆಟ್ ನಲ್ಲಿ ಕರಾವಳಿ, ಮಲೆನಾಡಿನಲ್ಲಿ ಸೊರಗುತ್ತಿರುವ ಭತ್ತದ ಬೆಳೆಗೆ ಪ್ರೋತ್ಸಾಹ ಧನವಾಗಿ ಪ್ರತಿ ಹೆಕ್ಟೇರ್ ಗೆ 7,500 ರೂಪಾಯಿ ದೊರಕಿರುವುದು ಈ ಭಾಗದ ಭತ್ತ ಬೆಳೆಯುವ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ನೀರಾವರಿ ಸೌಲಭ್ಯ ಯೋಜನೆ ಘೋಷಣೆ
ಅದಲ್ಲದೇ, ಈ ಬಾರಿಯ ಬಜೆಟ್ ನಲ್ಲಿ ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂಪಾಯಿ, ಉಡುಪಿ ಜಿಲ್ಲೆಯ ಕೆರೆಗಳನ್ನು ತುಂಬಿಸಲು 40 ಕೋಟಿ ರೂಪಾಯಿ ಅನುದಾನ, ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನಲ್ಲಿ 1500 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ (ಎಣ್ಣೆ ಹೊಳೆ ಯೋಜನೆ) ಯೋಜನೆ ಘೋಷಣೆಯಾಗಿರುವುದು ಕಂಡುಬಂದಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications