ಮಂಗಳೂರಿನಲ್ಲಿ ಮುಂದಿನ ಮೂರು ತಿಂಗಳುಗಳ ಕಾಲ ಮೀನುಗಾರಿಕೆ ಸ್ಥಗಿತ, ಯಾಕೆ? ಇಲ್ಲಿದೆ ವಿವರ
ಮಂಗಳೂರು, ಮೇ, 30: ಕೇರಳ ರಾಜ್ಯಕ್ಕೆ ಜೂನ್ 4ರಂದು ಮುಂಗಾರು ಪ್ರವೇಶ ಆಗಲಿದೆ. ನಂತರ ರಾಜ್ಯಕ್ಕೂ ಮುಂದಿನ ಏಳೆಂಟು ದಿನದಲ್ಲಿ ಮುಂಗಾರು ಪ್ರವೇಶ ಆಗಲಿದೆ. ಇನ್ನು ಜೂನ್ 1ರಿಂದ ಭಾರೀ ಮಳೆ ಮುನ್ಸೂಚನೆ ಇರುವುದರಿಂದ, ಮತ್ತು ನಷ್ಟ ಅನುಭವಿಸಿದ ಹಿನ್ನೆಲೆ ಕರಾವಳಿಯಲ್ಲಿ ಮೀನುಗಾರಿಕೆಗೆ ನಿಷೇಧ ಏರಲಾಗಿದೆ. ಇದರಿಂದ ಮೂರು ತಿಂಗಳುಗಳ ಕಾಲ ಮೀನುಗಾರಿಕೆಗೆ ವಿರಾಮ ಸಿಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪ್ರಸಕ್ತ ಋತುವಿನ ಆರಂಭದಲ್ಲಿ ಸಮುದ್ರದಲ್ಲಿ ಹೇರಳ ಪ್ರಮಾಣದಲ್ಲಿ ಮತ್ಸ್ಯ ದೊರಕಿದ್ದರೂ, ಫೆಬ್ರವರಿ - ಮಾರ್ಚ್ನಲ್ಲಿಯೇ ಮತ್ಸ್ಯ ಕ್ಷಾಮ ತಲೆದೂರಿತ್ತು. ಪರಿಣಾಮ ಮೀನುಗಾರರು ಅವಧಿಗೆ ಮುನ್ನವೇ ಮೀನುಗಾರಿಕೆ ಸ್ಥಗಿತಗೊಳಿಸಿ ಬಂದರಿನಲ್ಲಿ ಲಂಗರು ಹಾಕಿದ್ದಾರೆ. ಈ ಪ್ರಸಕ್ತ ಋತುವಿನಲ್ಲಿ ಹೇರಳ ಪ್ರಮಾಣದಲ್ಲಿ ಮತ್ಸ್ಯ ದೊರಕಿತ್ತು. ಆದರೆ ದರ ಕುಸಿತದಿಂದ ಮೀನುಗಾರರಿಗೆ ನಿರೀಕ್ಷಿತ ಪ್ರಮಾಣದಲ್ಲಿ ಲಾಭ ದೊರಕಿರಲಿಲ್ಲ.

ಇದರ ಪರಿಣಾಮ ಸಾಕಷ್ಟು ಮೀನು ದೊರಕಿದರೂ ಲಾಭವಿಲ್ಲದೆ ಮೀನುಗಾರರಯ ಸಂಕಷ್ಟಕ್ಕೆ ಒಳಗಾಗಿದ್ದರು. ಸಮುದ್ರದಲ್ಲಿ ಹೇರಳವಾಗಿದ್ದ ಮತ್ಸ್ಯ ಸಂಪತ್ತು ಫೆಬ್ರವರಿ ಮತ್ತು ಮಾರ್ಚ್ನಲ್ಲಿಯೇ ಏಕಾಏಕಿ ಕುಸಿತಗೊಂಡಿದೆ. ಇದೀಗ ಮತ್ಸ್ಯ ಕ್ಷಾಮದಿಂದ ಸಂಕಷ್ಟಕ್ಕೊಳಗಾದ ಮೀನುಗಾರರು ಅವಧಿಗೆ ಪೂರ್ವದಲ್ಲೇ ದಡಕ್ಕೆ ಸೇರಿ ಬೋಟ್ಗಳನ್ನು ಲಂಗರು ಹಾಕಿದ್ದಾರೆ.
ಮೀನಿನ ಸಂತಾನೋತ್ಪತ್ತಿ ಪ್ರಕ್ರಿಯೆಗಾಗಿ ಸರ್ಕಾರದ ನಿಯಮದಂತೆ ಜೂನ್ನಲ್ಲಿ ಮೀನುಗಾರಿಕೆ ಸ್ಥಗಿತಗೊಳಿಸಿ ಬೋಟ್ಗಳು ಲಂಗರು ಹಾಕುವುದು ಸರ್ವೇ ಸಾಮಾನ್ಯವಾಗಿದೆ. ಆದರೆ ಈ ಬಾರಿ ಈಗಾಗಲೇ ಶೇಕಡಾ 90ರಷ್ಟು ಬೋಟ್ಗಳು ಅವಧಿಗೆ ಮುನ್ನವೇ ಮಂಗಳೂರು ಬಂದರ್ನಲ್ಲಿ ಲಂಗರು ಹಾಕಿವೆ. ಅಲ್ಲದೆ ಇನ್ನಷ್ಟು ಬೋಟ್ಗಳು ಎರಡು ದಿನದಲ್ಲಿ ಲಂಗರು ಹಾಕಲಿವೆ.
ಅಲ್ಲದೆ ಬೇಗನೇ ದಡದಲ್ಲಿ ಲಂಗರು ಹಾಕುವುದರಿಂದ ಬೋಟ್ಗಳು ಸುರಕ್ಷಿತ ಆಗಿರುತ್ತವೆ. ಕೊನೆಗೆ ಲಂಗರು ಹಾಕುವ ಬೋಟ್ಗಳು ಸಮುದ್ರದ ಅಲೆಗಳು ಒಡೆದು ಹಾನಿಗೀಡಾಗುತ್ತದೆ ಎಂಬ ನಂಬಿಕೆ ಬೋಟ್ ಮಾಲೀಕರಲ್ಲಿದೆ. ಆದ್ದರಿಂದ ಮಂಗಳೂರು ಬಂದರಿನಲ್ಲಿ ಹೊಸ ಜೆಟ್ಟಿಯನ್ನು ನಿರ್ಮಾಣ ಮಾಡಬೇಕೆಂಬ ಕೂಗು ಮೀನುಗಾರರಿಂದ ಕೇಳಿಬರುತ್ತಿದೆ.
ಪ್ರಸ್ತುತ ಒಂದು ಬೋಟ್ಗೆ 9,000 ಲೀಟರ್ ಡೀಸೆಲ್ ಸಬ್ಸಿಡಿ ದೊರೆಯುತ್ತದೆ. ಆದರೆ ಮೂರು ಬಾರಿ ಟ್ರಿಪ್ ಮಾಡಲು 18,000 ಲೀಟರ್ ಪೆಟ್ರೋಲ್ ಬೇಕಾಗುತ್ತದೆ. ಆದ್ದರಿಂದ ನೂತನ ರಾಜ್ಯ ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದು ಮೀನುಗಾರರು ಒತ್ತಾಯಿಸಿದ್ದಾರೆ.
ಒಟ್ಟಿನಲ್ಲಿ ಸದಾ ಜನಜಂಗುಳಿಯಿಂದ ಜಿನುಗುಡುತ್ತಿದ್ದ ಮಂಗಳೂರಿನ ಮೀನುಗಾರಿಕಾ ಬಂದರು ಇನ್ನು ಮೂರು ತಿಂಗಳು ಸ್ತಬ್ಧವಾಗಲಿದೆ. ಆರಂಭದಲ್ಲಿ ಬಂದ ಲಾಭ ಕೊನೆಗೆ ನಷ್ಟದಲ್ಲಿ ಮುಕ್ತಾಯವಾಗಿದ್ದು, ಈ ಬಾರಿಯೂ ಮತ್ತದೇ ನಿರೀಕ್ಷೆಯಲ್ಲಿ ಮೀನುಗಾರರು ತಮ್ಮ ಬೋಟ್ಗಳನ್ನು ಲಂಗರು ಹಾಕುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications