ಎಂಡೋಸಲ್ಫನ್ ಪೀಡಿತ ಒಂದೇ ಕುಟುಂಬದ ಐದು ಜನರು ಆತ್ಮಹತ್ಯೆ
ಬೆಳ್ತಂಗಡಿ, ಜನವರಿ. 05 : ಎಂಡೋಸಲ್ಫನ್ ಪೀಡಿತ ಸೇರಿದಂತೆ ಒಂದೇ ಕುಟುಂಬದ ಐದು ಜನರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿ ನಡೆದಿದೆ.
ಕೊಕ್ಕ ಗ್ರಾಮದ ನಿವಾಸಿಗಳಾದ ಬಾಬು ಗೌಡ (62), ಪತ್ನಿ ಗಂಗಮ್ಮ (55), ಮಗ ಸದಾನಂದ (32) ಹಾಗೂ ಮತ್ತೊಬ್ಬ ಮಗ ನಿತ್ಯಾನಂದ (30) ಎಂಬುವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.

ದಯಾನಂದ ಎನ್ನುವರ ಮೃತ ದೇಹ ಇನ್ನು ಪತ್ತೆಯಾಗಿಲ್ಲ. ರಕ್ಷಣಾ ಸಿಬ್ಬಂದಿ ದಯಾನಂದ ಅವರ ಮೃತ ದೇಹಕ್ಕಾಗಿ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯಲ್ಲಿ ಇಬ್ಬರು ಮಾರಕ ಎಂಡೋಸಲ್ಫನ್ ಅಡ್ಡಪರಿಣಾಮದಿಂದ ಬಳಲುತ್ತಿದ್ದರು. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಪಕ್ಕದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.












Click it and Unblock the Notifications