ಉಳ್ಳಾಲದಲ್ಲಿ ಹಾಕಲಾಗಿದ್ದ ವಿವಾದಿತ ಫ್ಲೆಕ್ಸ್ ತೆರವು:ಪ್ರಕರಣ ದಾಖಲು
ಮಂಗಳೂರು, ಫೆಬ್ರವರಿ 19: ಮಂಗಳೂರು ಹೊರವಲಯದ ಉಳ್ಳಾಲ ಪ್ರದೇಶದಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಹಾಕಿದ್ದ ಫ್ಲೆಕ್ಸ್ ಒಂದು ವಿವಾದಕ್ಕೆ ಕಾರಣವಾಗಿದೆ. ವಿವಾದಿತ ಫ್ಲೆಕ್ಸ್ ನ್ನು ಉಳ್ಳಾಲ ಪೊಲೀಸರು ತೆರವುಗೊಳಿಸಿದ್ದು, ಈ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಉಳ್ಳಾಲದ ಬೈಲ್ ನಲ್ಲಿ ವಿಶ್ವಹಿಂದೂ ಪರಿಷತ್ ಬಜರಂಗದಳ ಅಳವಡಿಸಿದ ಫ್ಲೆಕ್ಸ್ ನ್ನು ಉಳ್ಳಾಲ ಪೊಲೀಸರು ತೆರವುಗೊಳಿಸಿದ್ದಾರೆ. ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾ ಪಡೆಯ ವಾಹನಗಳ ಮೇಲೆ ಉಗ್ರರು ದಾಳಿ ನಡೆಸಿದ್ದ ಕೃತ್ಯಕ್ಕೆ ಸಂಬಂಧಿಸಿ 'ವಿಶ್ವಹಿಂದೂ ಪರಿಷತ್ ಬಜರಂಗದಳ' ಹೆಸರಿನಲ್ಲಿ ಉಳ್ಳಾಲ ಬೈಲ್ ನಲ್ಲಿ ಫ್ಲೆಕ್ಸ್ ಒಂದನ್ನು ಹಾಕಲಾಗಿತ್ತು.
ಈ ಪ್ಲೆಕ್ಸ್ ನಲ್ಲಿ 'ದೇಶದ ಯೋಧರ ಸಾವಲ್ಲೂ ಅಲ್ಪಸಂಖ್ಯಾತರ ನಗು' ಎಂಬ ಶೀರ್ಷಿಕೆ ಬರೆದಿರುವುದು ವಿವಾದಕ್ಕೆ ಕಾರಣವಾಗಿದೆ. 'ಶತ್ರುಗಳು ದೇಶದ ಹೊರಗಿಲ್ಲ- ದೇಶದ ಒಳಗಡನೇ ಇದ್ದಾರೆ' ಎಂದು ಬರೆಯಲಾಗಿರುವುದು ಭಾರೀ ವಿರೋಧಕ್ಕೆ ಕಾರಣವಾಗಿತ್ತು.

ಇದು ಪರಿಸರದಲ್ಲಿ ಅಶಾಂತಿಗೆ ಕಾರಣವಾಗಬಹುದು ಎಂದು ಸ್ಥಳೀಯ ಸಂಘಟನೆಗಳ ಪ್ರಮುಖರು ತಕ್ಷಣ ಉಳ್ಳಾಲ ಪೊಲೀಸರ ಗಮನ ಸೆಳೆದ ಕಾರಣ ಉಳ್ಳಾಲ ಠಾಣೆಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ವಿವಾದಿತ ಫ್ಲೆಕ್ಸ್ ತೆರವುಗೊಳಿಸಿದ್ದಾರೆ.
ಈ ಪ್ರಚೋದನಾಕಾರಿನ ಫ್ಲೆಕ್ಸ್ ಹಾಕಿದ ಹಿನ್ನೆಲೆಯಲ್ಲಿ ಉಳ್ಳಾಲ ಠಾಣೆಯಲ್ಲಿ ಎಸ್ ಡಿ ಪಿ ಐ ದೂರು ದಾಖಲಿಸಿದೆ. ಫ್ಲೆಕ್ಸ್ ಅಳವಡಿಸಿದವರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಎಸ್ ಡಿ ಪಿ ಐ ಒತ್ತಾಯಿಸಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು












Click it and Unblock the Notifications