ಉಳ್ಳಾಲದಲ್ಲಿ ಹಾಕಲಾಗಿದ್ದ ವಿವಾದಿತ ಫ್ಲೆಕ್ಸ್ ತೆರವು:ಪ್ರಕರಣ ದಾಖಲು
ಮಂಗಳೂರು, ಫೆಬ್ರವರಿ 19: ಮಂಗಳೂರು ಹೊರವಲಯದ ಉಳ್ಳಾಲ ಪ್ರದೇಶದಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಹಾಕಿದ್ದ ಫ್ಲೆಕ್ಸ್ ಒಂದು ವಿವಾದಕ್ಕೆ ಕಾರಣವಾಗಿದೆ. ವಿವಾದಿತ ಫ್ಲೆಕ್ಸ್ ನ್ನು ಉಳ್ಳಾಲ ಪೊಲೀಸರು ತೆರವುಗೊಳಿಸಿದ್ದು, ಈ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಉಳ್ಳಾಲದ ಬೈಲ್ ನಲ್ಲಿ ವಿಶ್ವಹಿಂದೂ ಪರಿಷತ್ ಬಜರಂಗದಳ ಅಳವಡಿಸಿದ ಫ್ಲೆಕ್ಸ್ ನ್ನು ಉಳ್ಳಾಲ ಪೊಲೀಸರು ತೆರವುಗೊಳಿಸಿದ್ದಾರೆ. ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾ ಪಡೆಯ ವಾಹನಗಳ ಮೇಲೆ ಉಗ್ರರು ದಾಳಿ ನಡೆಸಿದ್ದ ಕೃತ್ಯಕ್ಕೆ ಸಂಬಂಧಿಸಿ 'ವಿಶ್ವಹಿಂದೂ ಪರಿಷತ್ ಬಜರಂಗದಳ' ಹೆಸರಿನಲ್ಲಿ ಉಳ್ಳಾಲ ಬೈಲ್ ನಲ್ಲಿ ಫ್ಲೆಕ್ಸ್ ಒಂದನ್ನು ಹಾಕಲಾಗಿತ್ತು.
ಈ ಪ್ಲೆಕ್ಸ್ ನಲ್ಲಿ 'ದೇಶದ ಯೋಧರ ಸಾವಲ್ಲೂ ಅಲ್ಪಸಂಖ್ಯಾತರ ನಗು' ಎಂಬ ಶೀರ್ಷಿಕೆ ಬರೆದಿರುವುದು ವಿವಾದಕ್ಕೆ ಕಾರಣವಾಗಿದೆ. 'ಶತ್ರುಗಳು ದೇಶದ ಹೊರಗಿಲ್ಲ- ದೇಶದ ಒಳಗಡನೇ ಇದ್ದಾರೆ' ಎಂದು ಬರೆಯಲಾಗಿರುವುದು ಭಾರೀ ವಿರೋಧಕ್ಕೆ ಕಾರಣವಾಗಿತ್ತು.

ಇದು ಪರಿಸರದಲ್ಲಿ ಅಶಾಂತಿಗೆ ಕಾರಣವಾಗಬಹುದು ಎಂದು ಸ್ಥಳೀಯ ಸಂಘಟನೆಗಳ ಪ್ರಮುಖರು ತಕ್ಷಣ ಉಳ್ಳಾಲ ಪೊಲೀಸರ ಗಮನ ಸೆಳೆದ ಕಾರಣ ಉಳ್ಳಾಲ ಠಾಣೆಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ವಿವಾದಿತ ಫ್ಲೆಕ್ಸ್ ತೆರವುಗೊಳಿಸಿದ್ದಾರೆ.
ಈ ಪ್ರಚೋದನಾಕಾರಿನ ಫ್ಲೆಕ್ಸ್ ಹಾಕಿದ ಹಿನ್ನೆಲೆಯಲ್ಲಿ ಉಳ್ಳಾಲ ಠಾಣೆಯಲ್ಲಿ ಎಸ್ ಡಿ ಪಿ ಐ ದೂರು ದಾಖಲಿಸಿದೆ. ಫ್ಲೆಕ್ಸ್ ಅಳವಡಿಸಿದವರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಎಸ್ ಡಿ ಪಿ ಐ ಒತ್ತಾಯಿಸಿದೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications