ಮತ್ತೆ ಆಘಾತ: ಕುದುರೆಮುಖ ಅರಣ್ಯದಿಂದ ಒಕ್ಕಲೆಬ್ಬಿಸಲು ಸೂಚನೆ
ಪುತ್ತೂರು, ಏಪ್ರಿಲ್ 24: ಕೊರೊನಾ ಸಂಕಷ್ಟದ ನಡುವೆ ರಾಜ್ಯ ಸರ್ಕಾರದ ಜನರಿಗೆ ಮತ್ತೊಂದು ಗುನ್ನ ನೀಡಲು ಸಿದ್ಧತೆ ಮಾಡಿಕೊಂಡಿದೆ. ಕುದುರೆ ಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಒಳಭಾಗದಲ್ಲಿ ವಾಸಿಸುತ್ತಿರುವ ಜನರು ಆದಷ್ಟು ಬೇಗ ಮನೆಗಳನ್ನು ತೆರವುಗೊಳಿಸಬೇಕು ಅಂತಾ ಅರಣ್ಯ ಸಚಿವ ಅರಂವಿದ ಲಿಂಬಾವಳಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅರವಿಂದ ಲಿಂಬಾವಳಿ, ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಒಟ್ಟು 1346 ಕುಟುಂಬಗಳು ವಾಸಿಸುತ್ತಿದೆ. ಇದರಲ್ಲಿ 626 ಕುಟುಂಬಗಳು ಈಗಾಗಲೇ ಸ್ಥಳಾಂತರಕ್ಕೆ ಒಪ್ಪಿಗೆ ಸೂಚಿಸಿವೆ. 720 ಕುಟುಂಬಗಳು ಒಪ್ಪಿಗೆ ನೀಡಲು ಇನ್ನೂ ಬಾಕಿ ಇದೆ.
ಕುಟುಂಬಗಳ ಮನವೊಲಿಸಲು ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಗಳು ನಿರಂತರ ಕಾರ್ಯಕ್ರಮ ಗಳನ್ನು ಮಾಡುತ್ತಿದ್ದಾರೆ. ನಾಲ್ಕು ಜಿಲ್ಲೆಗಳ ವ್ಯಾಪ್ತಿಯ ಜನರು ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಇದ್ದಾರೆ. ಎಲ್ಲರನ್ನೂ ಶೀಘ್ರದಲ್ಲೇ ಸ್ಥಳಾಂತರ ಮಾಡಲಾಗುವುದು ಅಂತಾ ಅರವಿಂದ ಲಿಂಬಾವಳಿ ಹೇಳಿದ್ದಾರೆ..

ಕಾಡುಗಳು ಇಲ್ಲದ ಡೀಮ್ಡ್ ಫಾರೆಸ್ಟ್ ಗಳನ್ನು ಜನರ ಉಪಯೋಗಕ್ಕೆ ನೀಡುವ ಯೋಜನೆಗಳು ಸರ್ಕಾರದ ಮುಂದಿದೆ. ಜನರ ಅವಶ್ಯಕತೆಗೆ ತಕ್ಕಂತೆ ಈ ಯೋಜನೆಗಳು ಜಾರಿಗೆ ಬರಲಿದೆ. ದಟ್ಟ ಕಾಡುಗಳಿರುವ ಪ್ರದೇಶಗಳನ್ನು ಉಳಿಸುವ ಪ್ರಯತ್ನಗಳು ನಡೆಯಲಿದೆ. ರಾಜ್ಯದ ಕಾಂಡ್ಲಾ ಕಾಡುಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲೂ ಯೋಜನೆ ಹಾಕಿಕೊಳ್ಳಲಾಗಿದೆ ಅಂತಾ ಅರವಿಂದ ಲಿಂಬಾವಳಿ ಹೇಳಿದ್ದಾರೆ..
Recommended Video
ಅರಣ್ಯ ಸಚಿವರ ಈ ಹೇಳಿಕೆ ಮೂಲ ನಿವಾಸಿಗಳಲ್ಲಿ ಆತಂಕವನ್ನು ಸೃಷ್ಟಿ ಮಾಡಿದ್ದು, ಒಕ್ಕಲೆಬ್ಬಿಸುವ ಭೂತ ಮತ್ತೆ ಕಾಡುವ ಭಯ ಜನರದ್ದಾಗಿದೆ. ಕೊರೊನಾ ತಂದ ಸಂಕಷ್ಟದಿಂದ ಮೇಲೆ ಬರಲು ಯತ್ನಿಸುವಾಗಲೇ ಸರ್ಕಾರದ ಈ ಗಧಾಪ್ರಹಾರ ಅರಣ್ಯವಾಸಿಗಳನ್ನು ದಿಕ್ಕೆಟ್ಟಿಸುವಂತೆ ಮಾಡಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications