ಕಾಡಾನೆ ಸೆರೆ ವೇಳೆ ಅರಣ್ಯಾಧಿಕಾರಿಗಳ ಮೇಲೆ ಸ್ಥಳೀಯರಿಂದ ಕಲ್ಲು ತೂರಾಟ, ಏಳು ಮಂದಿ ಬಂಧನ
ಫೆಬ್ರವರಿ 20 ರಂದು ಕಡಬದ ಮೀನಾಡಿ ಪ್ರದೇಶದಲ್ಲಿ ಕಾಡಾನೆ ದಾಳಿ ನಡೆದಿತ್ತು. ರಂಜಿತಾ (21) ಮತ್ತು ರಮೇಶ್ ರೈ (52 ) ಎಂಬುವವರು ಮೃತಪಟ್ಟಿದ್ದರು.
ದಕ್ಷಿಣ ಕನ್ನಡ, ಫೆಬ್ರವರಿ. 24: ಜಿಲ್ಲೆಯ ಕಡಬ ಗ್ರಾಮದಲ್ಲಿ ಇಬ್ಬರನ್ನು ಕೊಂದಿದ್ದ ಕಾಡಾನೆಯನ್ನು ಅರಣ್ಯಾಧಿಕಾರಿಗಳು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಈ ಪ್ರದೇಶದಲ್ಲಿ ಮಾನವ - ಪ್ರಾಣಿ ಸಂಘರ್ಷ ತಪ್ಪಿಸಲು ಇನ್ನೂ ಕೆಲವು ಆನೆಗಳನ್ನು ಸೆರೆ ಹಿಡಿಯಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ. ಜೊತೆಗೆ ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿದ್ದ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ಗ್ರಾಮಸ್ಥರನ್ನು ಬಂಧಿಸಲಾಗಿದೆ.
ಆನೆ ಸೆರೆ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿರುವ ಅರಣ್ಯ ಉಪ ಸಂರಕ್ಷಣಾಧಿಕಾರಿ ದಿನೇಶ್ ಕುಮಾರ್, "ಇಬ್ಬರ ಜೀವವನ್ನು ಬಲಿತೆಗೆದುಕೊಂಡ ಆನೆಯನ್ನು ನಾವು ಯಶಸ್ವಿಯಾಗಿ ಸೆರೆ ಹಿಡಿದಿದ್ದೇವೆ" ಎಂದಿದ್ದಾರೆ. ಅರಣ್ಯ ಇಲಾಖೆಯ 3 ದಿನದ ಆಪರೇಷನ್ ಎಲಿಫೆಂಟ್ ಕಾರ್ಯಚರಣೆಯಲ್ಲಿ 5 ಸಾಕಾನೆಗಳು, ನುರಿತ ತಜ್ಞ ವೈದ್ಯರು, ಅರಣ್ಯ ಅಧಿಕಾರಿಗಳು, ಶಾರ್ಪ್ ಶೂಟರ್ಗಳು ಸಾಥ್ ನೀಡಿದ್ದರು.

ಫೆಬ್ರವರಿ 20 ರಂದು ಕಡಬದ ಮೀನಾಡಿ ಪ್ರದೇಶದಲ್ಲಿ ಕಾಡಾನೆ ದಾಳಿ ನಡೆದಿತ್ತು. ರಂಜಿತಾ (21) ಮತ್ತು ರಮೇಶ್ ರೈ (52 ) ಎಂಬುವವರು ಮೃತಪಟ್ಟಿದ್ದರು. ಘಟನೆ ನಡೆದ ಒಂದು ದಿನದ ನಂತರ ಅರಣ್ಯಾಧಿಕಾರಿಗಳು ಕಾಡಾನೆಯನ್ನು ಹಿಡಿಯಲು ಕಡಬ ಪ್ರದೇಶದಲ್ಲಿ 'ಆಪರೇಷನ್ ಎಲಿಫೆಂಟ್' ಆರಂಭಿಸಿದ್ದರು. ನಾಗರಹೊಳೆ ಮತ್ತು ದುಬಾರೆ ಶಿಬಿರದಿಂದ ಆಗಮಿಸಿದ ಇತರ 5 ಆನೆಗಳ ನೆರವಿನೊಂದಿಗೆ ಮಂಗಳವಾರ ಬೆಳಗ್ಗೆಯಿಂದ ಕಾರ್ಯಾಚರಣೆ ನಡೆಸಲಾಯಿತು. ಕಾಡಾನೆಯ ಚಲನವಲನ ಪತ್ತೆಗೆ ಡ್ರೋನ್ ಕ್ಯಾಮೆರಾಗಳನ್ನೂ ಬಳಸಲಾಗಿದೆ.
ಇನ್ನು, ಇದೇ ವೇಳೆ ಕಾಡಾನೆಗಳನ್ನು ಹಿಡಿಯುವಲ್ಲಿ ವಿಫಲರಾಗಿದ್ದಾರೆ ಎಂದು ಅರಣ್ಯಾಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಅರಣ್ಯಾಧಿಕಾರಿಗಳ ತಂಡ ಸೆರೆ ಹಿಡಿದು ಸಾಗಿಸುವಾಗ ಅರಣ್ಯಾಧಿಕಾರಿಗಳ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಹಿಂಸಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಕಲ್ಲು ತೂರಾಟದಿಂದಾಗಿ ಎರಡು ಪೊಲೀಸ್ ಇಲಾಖೆಯ ಜೀಪ್, ಅರಣ್ಯ ಇಲಾಖೆಯ ಒಂದು ಜೀಪ್, ವಲಯ ಅರಣ್ಯಾಧಿಕಾರಿಯೊಬ್ಬರ ಬ್ರೀಝಾ ಕಾರುಗಳಿಗೆ ಹಾನಿ ಉಂಟಾಗಿದೆ. ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications