ಒಂದು ಮಳೆ ಬಂದರೆ ಕಾವೇರಿ ಹೋರಾಟ ತಣ್ಣಗಾಗುತ್ತದೆ - ಮಾಜಿ ಸಿಎಂ ಬಾಲಿಶ ಹೇಳಿಕೆ
ಮಂಗಳೂರು, ಸೆಪ್ಟೆಂಬರ್ 24: ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಹೋರಾಟ ವಿಚಾರದಲ್ಲಿ ಬೇಜವಾಬ್ದಾರಿಯುತ ಹೇಳಿಕೆ ನೀಡಿರುವ ಮಾಜಿ ಸಿಎಂ ವೀರಪ್ಪ ಮೊಯ್ಲಿ ಒಂದು ಮಳೆ ಬಂದರೆ ಕಾವೇರಿ ವಿಚಾರ ತಣ್ಣಗಾಗುತ್ತದೆ ಎಂದು ಹೇಳಿದ್ದಾರೆ.
ಮಂಗಳೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಈಗ ನಮ್ಮ ಸರ್ಕಾರ ಇರುವಾಗ ವಿರೋಧ ಮಾಡಲು ಆಗಲ್ಲ. ನಮ್ಮ ಸರ್ಕಾರ ಕೋರ್ಟ್ ಮೂಲಕ ಸಮಸ್ಯೆ ಸರಿ ಮಾಡಲು ಯತ್ನಿಸುತ್ತದೆ. ಬಿಜೆಪಿಯವರು ಈಗ ವಿರೋಧ ಪಕ್ಷದಲ್ಲಿ ಇದ್ದು ವಿರೋಧಿಸುತ್ತಿದ್ದಾರೆ ಎಂದರು.

ಕರ್ನಾಟಕ ಕಾವೇರಿ ವಿಚಾರದಲ್ಲಿ ಸೋಲಲು ಅನೇಕ ಕಾರಣಗಳಿವೆ. ನಾವು ಕಾವೇರಿ ನೀರನ್ನು ಗರಿಷ್ಠವಾಗಿ ಉಪಯೋಗ ಮಾಡಿಲ್ಲ. ಆ ಕಾಲದ ಆಡಳಿತಗಾರರು ಮಾಡಿದ ತಪ್ಪಿನಿಂದ ಹೀಗಾಗುತ್ತಿದೆ. ಯಗಚಿ ಅಣೆಕಟ್ಟು ಮಾಡೋದನ್ನು ಅನೇಕರು ತಡೆದಿದ್ದರು. ಇದರಿಂದ ನಮಗೆ ಸಿಗಬೇಕಾದ ನೀರಿನ ಪಾಲು ಸಿಗಲಿಲ್ಲ ಎಂದು ಹೇಳಿದರು.
ಇನ್ನು ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಯೆಂದರೆ ಅದು ಉಡ ಹೊಕ್ಕಿದಂತೆ ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಸಿಎಂ ವೀರಪ್ಪ ಮೊಯಿಲಿ ವ್ಯಂಗ್ಯವಾಡಿದ್ದಾರೆ. ಜೆಡಿಎಸ್ ಹೊಕ್ಕಿದ ಕಡೆಯಲ್ಲಿ ಸಂಪೂರ್ಣ ಹೋಯ್ತು ಎಂದೇ ಅರ್ಥ. ಅಂದು ನಾವು ಅವರೊಂದಿಗೆ ಸೇರಿದ ಸಂದರ್ಭದಲ್ಲಿ ನಾನು ಕೂಡ ಸೋತಿದ್ದೇನೆ. ಈಗ ಆ ಅನಿಷ್ಟ ದೂರವಾಗಿದೆ. ಈಗ ಆ ಅನಿಷ್ಠ ಬಿಜೆಪಿ ಕಡೆಗೆ ಹೋಗಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರಕಾರದ ಮಹಿಳಾ ಮಸೂದೆ ಪಾಸ್ ಮಾಡಿರುವುದು ಕಪಟ ನಾಟಕವೇ ಹೊರತು ಇದರಲ್ಲಿ ಪ್ರಾಮಾಣಿಕತೆಯಿಲ್ಲ. ಇವರಿಗೆ ಮಹಿಳೆಯರ ಬಗ್ಗೆ ಆಸಕ್ತಿಯಿಲ್ಲ. ಶೂದ್ರ ಮಹಿಳೆಯರಿಗೆ ಮತದಾನದ ಹಕ್ಕು ಕೊಡಬಾರದೆಂದು ಗೋಲ್ವಾಲ್ಕರ್ ಹೇಳಿದ್ದರು. ಮನುಸ್ಮೃತಿ ಮಹಿಳೆಯರು ಪಾಪಿಷ್ಠರು ಎಂದು ಹೇಳಿದೆ ಎಂದು ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದರು.
ಇನ್ನು ಮಾತು ಮುಂದುವರಿಸಿದ ಅವರು, ನಾನು ಈ ಬಾರಿಯೂ ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧೆ ಮಾಡಿತ್ತಿದ್ದೇನೆ. ಬಿ.ಕೆ.ಹರಿಪ್ರಸಾದ್ ವಿಚಾರ ಶಿಸ್ತು ಕಮಿಟಿ ಮುಂದೆ ಇದೆ. ಅವರಿಗೆ ನೋಟೀಸ್ ನೀಡಲಾಗಿದ್ದು, ಇದರ ಬಗ್ಗೆ ಸಮಿತಿ ನೋಡಿಕೊಳ್ಳುತ್ತದೆ. ಸಂವಿಧಾನದಲ್ಲಿ 'ಜಾತ್ಯಾತೀತ' ಪದವನ್ನು ಅಳಿಸಿ ಹಾಕಿರುವ ಬಗ್ಗೆ ಕಿಡಿಕಾರಿದ ವೀರಪ್ಪ ಮೊಯ್ಲಿ, ಬಿಜೆಪಿ ಸಂವಿಧಾನ ವಿರೋಧಿ ಪಕ್ಷ. ಅವರಿಗೆ ತಾಕತ್ತು ದಮ್ಮು ಇದ್ದಲ್ಲಿ ಅದನ್ನು ಕಾಯ್ದೆ ಮಾಡಿ ಸಂಸತ್ತಿನಲ್ಲಿ ಚರ್ಚೆ ಮಾಡಲಿ ಎಂದು ಸವಾಲೆಸಿದಿದ್ದಾರೆ.
ಮಾಜಿ ಸಿಎಂಗೆ ಪತ್ರಕರ್ತರ ತರಾಟೆ
ಎತ್ತಿನಹೊಳೆ ಯೋಜನೆ ಮುಗಿದ ಅಧ್ಯಾಯ. ಹಳೆಯ ವಿಚಾರವನ್ನು ಮತ್ತೆ ಮತ್ತೆ ಕೇಳಬೇಡಿ ಎಂದ ವೀರಪ್ಪ ಮೊಯ್ಲಿಯವರನ್ನು ಪತ್ರಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ.
ಎತ್ತಿನಹೊಳೆ ಯೋಜನೆಯನ್ನು ತರಾತುರಿಯಲ್ಲಿ ಮಾಡಿದ್ರಲ್ಲಾ. 20 ಸಾವಿರ ಕೋಟಿ ವ್ಯಯಿಸಿದರೂ ಒಂದು ಹನಿ ನೀರು ಹರಿಸಲು ಆಗಿಲ್ಲ ಯಾಕೆ ಎಂಬ ಪತ್ರಕರ್ತರ ಪ್ರಶ್ನೆಗೆ ಮೊಯ್ಲಿಯವರು, ಅದಕ್ಕೆ ನಾನು ಎಲ್ಲಿ ಬೇಕೋ ಅಲ್ಲಿ ಉತ್ತರ ಕೊಡುತ್ತೇನೆ ಎಂದು ಮೌನಕ್ಕೆ ಜಾರಿದ್ದಾರೆ. ನೀವು ಚಿಕ್ಕಬಳ್ಳಾಪುರದಲ್ಲಿ ಮತ್ತೆ ಸ್ಪರ್ಧಿಸುತ್ತೀರಲ್ಲಾ, ಅಲ್ಲಿನ ಜನರಿಗೂ ಉತ್ತರ ಕೊಡಿ ಎಂಬ ಪ್ರಶ್ನೆಗೆ ಅವಾಗಲೇ ಉತ್ತರ ಕೊಡುತ್ತೇನೆಂದು ಪ್ರಶ್ನೆಗೆ ಉತ್ತರಿಸಲಾಗದೆ ಹೋದರು.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications